ಹೆಣ್ಣು ಸಂಸಾರದ ಕಣ್ಣು: ಸ್ವಯಂ ದುಡಿಮೆಯಿಂದ ಸ್ವಾವಲಂಭಿಯಾಗಿ ಜೀವನ ನಡೆಸಬೇಕು-ಸಮಾಜ ಸೇವಕಿ ಶಾರದಮ್ಮ

ಹೆಣ್ಣು ಮಕ್ಕಳು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಾಗಬಾರದು ಹೆಣ್ಣು ಸಂಸಾರದ ಕಣ್ಣು ಆಗಬೇಕು ಪ್ರತಿಯೊಬ್ಬ ಮಹಿಳೆಯ ಗ್ರಾಮೀಣ ಮಹಿಳಾ ಗುಂಪುಗಳು ಕರ ಕುಶಲ ಮತ್ತು ವೌಲ್ಯವರ್ಧಿತ ಉತ್ಪನ್ನಗಳನ್ನು ತಾವೇ ತಯಾರಿಸಿ ಮಾರಾಟ ಮಾಡುವ ಮೂಲಕ ಆದಾಯ ಅಭಿವೃದ್ಧಿಯನ್ನು ಮಾಡಿಕೊಂಡು ಸ್ವಯಂ ದುಡಿಮೆಯಿಂದ ಸ್ವವಲಂಭಿಯಾಗಿ ಜೀವನ ನಡೆಸಬೇಕು ಎಂದು ಸಮಾಜ ಸೇವಕಿ ಶಾರದಮ್ಮ ಅಭಿಪ್ರಾಯಪಟ್ಟರು

ಶಿಡ್ಲಘಟ್ಟ ನಗರದ ಕೆಕೆ ಪೇಟೆಯಲ್ಲಿ ಇಂದು ನೆಹರು ಯುವ ಕೇಂದ್ರದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಶ್ರೀ ದಿವ್ಯ ಜ್ಯೋತಿ ಮಹಿಳಾ ಸಂಘ ಹಾಗೂ ಆರುಂಧತಿ ಮಹಿಳಾ ಸಂಘ ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣದ ಕುರಿತು ಅರಿವು ಮತ್ತು ನಾರಿ ಶಕ್ತಿ ಪಿಟ್ ನೆಸ್ ರನ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಂತರ ಮಂಜುಳಾ ಮಾತನಾಡಿ, ಇಂದಿನ ಸಮಾಜದಲ್ಲಿ ಪ್ರತಿಯೊಬ್ಬ ಮಹಿಳೆಯರು ಒಂದಲ್ಲ ಒಂದು ರೀತಿಯಲ್ಲಿ ಸಾಧನೆ ಮಾಡುತ್ತಿದ್ದಾರೆ. ಪ್ರತಿ ಯಶಸ್ವಿ ಮಹಿಳೆಯ ಹಿಂದೆ ತನ್ನದೇ ಆದ ಚರಿತ್ರೆ ಮತ್ತು ಇತಿಹಾಸ ಇದ್ದೇ ಇರುತ್ತದೆ. ಆದರೆ, ಈ ಎಲ್ಲ ಕಷ್ಟಗಳನ್ನು ಧೈರ್ಯವಾಗಿ ಗಂಡು ಹೆಣ್ಣು ಎಂಬ ಭಾವನೆ ಇಲ್ಲದೆ ಧೈರ್ಯವಾಗಿ ಎದುರಿಸಬೇಕು

ಮಹಿಳೆಯರು ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಿಸಬೇಕು.ಆಗ ಅವಳು ತನ್ನ ಕುಟುಂಬದ ಎಲ್ಲರಲ್ಲೂ ತಿಳಿವಳಿಕೆ ಮೂಡಿಸುತ್ತಾಳೆ ಆದ್ದರಿಂದ ಮಹಿಳಾ ಸಶಸ್ತ್ರೀಕರಣಕ್ಕೆ, ಸಬಲೀಕರಣಕ್ಕೆ ಶಿಕ್ಷಣವೇ ಮೂಲವಾಗಿದೆ ಎಂದರು. ಇದರ ಜೊತೆಗೆ ಪ್ರತಿಯೊಬ್ಬರು ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಸಹ ಕೇವಲ ಒಂದು ಜಾತಿಗೆ ಸೀಮಿತವಲ್ಲ. ಆದರೆ ಆಡಳಿತ ಸರಕಾರಗಳು ಹಾಗೆ ಮಾಡಿವೆ.ಇವತ್ತಿನ ದಿನ ನೀವೆಲ್ಲ ನಿಮ್ಮ ತಂದೆ ಆಸ್ತಿಯಲ್ಲಿ ಹಕ್ಕನ್ನು ಪಡೆಯಬೇಕು ಎಂದರೆ.ಸರಕಾರಿ ಸೇವೆಯಲ್ಲಿರುವ ಹೆಣ್ಣು ಮಕ್ಕಳಿಗೆ ಹೆರಿಗೆ ಸಮಯದಲ್ಲಿ ಹೆರಿಗೆ ರಜಾ. ಸಮಾನ ಶಿಕ್ಷಣ, ಸೇರಿದಂತೆ ಮೂಲಭೂತ ಹಕ್ಕುಗಳನ್ನು ಸಂವಿಧಾನ ನಮಗೆ ಒದಗಿಸಿಕೊಟ್ಟಿದೆ. ಎಲ್ಲಾ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕು ಎಂದರು.

ಇದೆ ವೇಳೆ ನಾರಿ ಶಕ್ತಿ ಪಿಟ್ ನೆಸ್ ರನ್ಸ್ ನಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಪ್ರಥಮ ದ್ವಿತೀಯ ಬಹುಮಾನಗಳನ್ನು ವಿತರಣೆ ಮಾಡಲಾಯಿತು

ಇನ್ನು ಇದೆ ಸಂದರ್ಭದಲ್ಲಿ ಆರುಂಧತಿ ಮಹಿಳಾ ಸಂಘ ಅಧ್ಯಕ್ಷರು ಮುನಿರತ್ನ, ಧರ್ಮ ಸ್ಥಳ ಸಂಘದ ಮಾಲಾವತಿ, ಮಂಜುಳಾ ಸೇರಿದಂತೆ ಮತ್ತಿತ್ತರರು ಹಾಜರಿದ್ದರು.

Ramesh Babu

Journalist

Recent Posts

ವ್ಯಕ್ತಿಯೋರ್ವ ನೇಣಿಗೆ ಶರಣು

  ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…

3 minutes ago

ತಿಂಗಳಾಂತ್ಯಕ್ಕೆ ಮೊದಲ ಬಗರ್ ಹುಕುಂ ಸಮಿತಿ ಸಭೆ – ಶಾಸಕ ಧೀರಜ್ ಮುನಿರಾಜು

ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…

51 minutes ago

ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…

2 hours ago

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

3 hours ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

13 hours ago

Документ_9

Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…

17 hours ago