ಹೆಣ್ಣು ಮಕ್ಕಳು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಾಗಬಾರದು ಹೆಣ್ಣು ಸಂಸಾರದ ಕಣ್ಣು ಆಗಬೇಕು ಪ್ರತಿಯೊಬ್ಬ ಮಹಿಳೆಯ ಗ್ರಾಮೀಣ ಮಹಿಳಾ ಗುಂಪುಗಳು ಕರ ಕುಶಲ ಮತ್ತು ವೌಲ್ಯವರ್ಧಿತ ಉತ್ಪನ್ನಗಳನ್ನು ತಾವೇ ತಯಾರಿಸಿ ಮಾರಾಟ ಮಾಡುವ ಮೂಲಕ ಆದಾಯ ಅಭಿವೃದ್ಧಿಯನ್ನು ಮಾಡಿಕೊಂಡು ಸ್ವಯಂ ದುಡಿಮೆಯಿಂದ ಸ್ವವಲಂಭಿಯಾಗಿ ಜೀವನ ನಡೆಸಬೇಕು ಎಂದು ಸಮಾಜ ಸೇವಕಿ ಶಾರದಮ್ಮ ಅಭಿಪ್ರಾಯಪಟ್ಟರು
ಶಿಡ್ಲಘಟ್ಟ ನಗರದ ಕೆಕೆ ಪೇಟೆಯಲ್ಲಿ ಇಂದು ನೆಹರು ಯುವ ಕೇಂದ್ರದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಶ್ರೀ ದಿವ್ಯ ಜ್ಯೋತಿ ಮಹಿಳಾ ಸಂಘ ಹಾಗೂ ಆರುಂಧತಿ ಮಹಿಳಾ ಸಂಘ ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣದ ಕುರಿತು ಅರಿವು ಮತ್ತು ನಾರಿ ಶಕ್ತಿ ಪಿಟ್ ನೆಸ್ ರನ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಿಳೆಯರು ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಿಸಬೇಕು.ಆಗ ಅವಳು ತನ್ನ ಕುಟುಂಬದ ಎಲ್ಲರಲ್ಲೂ ತಿಳಿವಳಿಕೆ ಮೂಡಿಸುತ್ತಾಳೆ ಆದ್ದರಿಂದ ಮಹಿಳಾ ಸಶಸ್ತ್ರೀಕರಣಕ್ಕೆ, ಸಬಲೀಕರಣಕ್ಕೆ ಶಿಕ್ಷಣವೇ ಮೂಲವಾಗಿದೆ ಎಂದರು. ಇದರ ಜೊತೆಗೆ ಪ್ರತಿಯೊಬ್ಬರು ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಸಹ ಕೇವಲ ಒಂದು ಜಾತಿಗೆ ಸೀಮಿತವಲ್ಲ. ಆದರೆ ಆಡಳಿತ ಸರಕಾರಗಳು ಹಾಗೆ ಮಾಡಿವೆ.ಇವತ್ತಿನ ದಿನ ನೀವೆಲ್ಲ ನಿಮ್ಮ ತಂದೆ ಆಸ್ತಿಯಲ್ಲಿ ಹಕ್ಕನ್ನು ಪಡೆಯಬೇಕು ಎಂದರೆ.ಸರಕಾರಿ ಸೇವೆಯಲ್ಲಿರುವ ಹೆಣ್ಣು ಮಕ್ಕಳಿಗೆ ಹೆರಿಗೆ ಸಮಯದಲ್ಲಿ ಹೆರಿಗೆ ರಜಾ. ಸಮಾನ ಶಿಕ್ಷಣ, ಸೇರಿದಂತೆ ಮೂಲಭೂತ ಹಕ್ಕುಗಳನ್ನು ಸಂವಿಧಾನ ನಮಗೆ ಒದಗಿಸಿಕೊಟ್ಟಿದೆ. ಎಲ್ಲಾ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕು ಎಂದರು.
ಇನ್ನು ಇದೆ ಸಂದರ್ಭದಲ್ಲಿ ಆರುಂಧತಿ ಮಹಿಳಾ ಸಂಘ ಅಧ್ಯಕ್ಷರು ಮುನಿರತ್ನ, ಧರ್ಮ ಸ್ಥಳ ಸಂಘದ ಮಾಲಾವತಿ, ಮಂಜುಳಾ ಸೇರಿದಂತೆ ಮತ್ತಿತ್ತರರು ಹಾಜರಿದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…