ಹೆಣ್ಣು ಮಕ್ಕಳು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಾಗಬಾರದು ಹೆಣ್ಣು ಸಂಸಾರದ ಕಣ್ಣು ಆಗಬೇಕು ಪ್ರತಿಯೊಬ್ಬ ಮಹಿಳೆಯ ಗ್ರಾಮೀಣ ಮಹಿಳಾ ಗುಂಪುಗಳು ಕರ ಕುಶಲ ಮತ್ತು ವೌಲ್ಯವರ್ಧಿತ ಉತ್ಪನ್ನಗಳನ್ನು ತಾವೇ ತಯಾರಿಸಿ ಮಾರಾಟ ಮಾಡುವ ಮೂಲಕ ಆದಾಯ ಅಭಿವೃದ್ಧಿಯನ್ನು ಮಾಡಿಕೊಂಡು ಸ್ವಯಂ ದುಡಿಮೆಯಿಂದ ಸ್ವವಲಂಭಿಯಾಗಿ ಜೀವನ ನಡೆಸಬೇಕು ಎಂದು ಸಮಾಜ ಸೇವಕಿ ಶಾರದಮ್ಮ ಅಭಿಪ್ರಾಯಪಟ್ಟರು
ಶಿಡ್ಲಘಟ್ಟ ನಗರದ ಕೆಕೆ ಪೇಟೆಯಲ್ಲಿ ಇಂದು ನೆಹರು ಯುವ ಕೇಂದ್ರದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಶ್ರೀ ದಿವ್ಯ ಜ್ಯೋತಿ ಮಹಿಳಾ ಸಂಘ ಹಾಗೂ ಆರುಂಧತಿ ಮಹಿಳಾ ಸಂಘ ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣದ ಕುರಿತು ಅರಿವು ಮತ್ತು ನಾರಿ ಶಕ್ತಿ ಪಿಟ್ ನೆಸ್ ರನ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಿಳೆಯರು ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಿಸಬೇಕು.ಆಗ ಅವಳು ತನ್ನ ಕುಟುಂಬದ ಎಲ್ಲರಲ್ಲೂ ತಿಳಿವಳಿಕೆ ಮೂಡಿಸುತ್ತಾಳೆ ಆದ್ದರಿಂದ ಮಹಿಳಾ ಸಶಸ್ತ್ರೀಕರಣಕ್ಕೆ, ಸಬಲೀಕರಣಕ್ಕೆ ಶಿಕ್ಷಣವೇ ಮೂಲವಾಗಿದೆ ಎಂದರು. ಇದರ ಜೊತೆಗೆ ಪ್ರತಿಯೊಬ್ಬರು ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಸಹ ಕೇವಲ ಒಂದು ಜಾತಿಗೆ ಸೀಮಿತವಲ್ಲ. ಆದರೆ ಆಡಳಿತ ಸರಕಾರಗಳು ಹಾಗೆ ಮಾಡಿವೆ.ಇವತ್ತಿನ ದಿನ ನೀವೆಲ್ಲ ನಿಮ್ಮ ತಂದೆ ಆಸ್ತಿಯಲ್ಲಿ ಹಕ್ಕನ್ನು ಪಡೆಯಬೇಕು ಎಂದರೆ.ಸರಕಾರಿ ಸೇವೆಯಲ್ಲಿರುವ ಹೆಣ್ಣು ಮಕ್ಕಳಿಗೆ ಹೆರಿಗೆ ಸಮಯದಲ್ಲಿ ಹೆರಿಗೆ ರಜಾ. ಸಮಾನ ಶಿಕ್ಷಣ, ಸೇರಿದಂತೆ ಮೂಲಭೂತ ಹಕ್ಕುಗಳನ್ನು ಸಂವಿಧಾನ ನಮಗೆ ಒದಗಿಸಿಕೊಟ್ಟಿದೆ. ಎಲ್ಲಾ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕು ಎಂದರು.
ಇನ್ನು ಇದೆ ಸಂದರ್ಭದಲ್ಲಿ ಆರುಂಧತಿ ಮಹಿಳಾ ಸಂಘ ಅಧ್ಯಕ್ಷರು ಮುನಿರತ್ನ, ಧರ್ಮ ಸ್ಥಳ ಸಂಘದ ಮಾಲಾವತಿ, ಮಂಜುಳಾ ಸೇರಿದಂತೆ ಮತ್ತಿತ್ತರರು ಹಾಜರಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…