ಹೆಣ್ಣು ಸಂಸಾರದ ಕಣ್ಣು: ಸ್ವಯಂ ದುಡಿಮೆಯಿಂದ ಸ್ವಾವಲಂಭಿಯಾಗಿ ಜೀವನ ನಡೆಸಬೇಕು-ಸಮಾಜ ಸೇವಕಿ ಶಾರದಮ್ಮ

ಹೆಣ್ಣು ಮಕ್ಕಳು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಾಗಬಾರದು ಹೆಣ್ಣು ಸಂಸಾರದ ಕಣ್ಣು ಆಗಬೇಕು ಪ್ರತಿಯೊಬ್ಬ ಮಹಿಳೆಯ ಗ್ರಾಮೀಣ ಮಹಿಳಾ ಗುಂಪುಗಳು ಕರ ಕುಶಲ ಮತ್ತು ವೌಲ್ಯವರ್ಧಿತ ಉತ್ಪನ್ನಗಳನ್ನು ತಾವೇ ತಯಾರಿಸಿ ಮಾರಾಟ ಮಾಡುವ ಮೂಲಕ ಆದಾಯ ಅಭಿವೃದ್ಧಿಯನ್ನು ಮಾಡಿಕೊಂಡು ಸ್ವಯಂ ದುಡಿಮೆಯಿಂದ ಸ್ವವಲಂಭಿಯಾಗಿ ಜೀವನ ನಡೆಸಬೇಕು ಎಂದು ಸಮಾಜ ಸೇವಕಿ ಶಾರದಮ್ಮ ಅಭಿಪ್ರಾಯಪಟ್ಟರು

ಶಿಡ್ಲಘಟ್ಟ ನಗರದ ಕೆಕೆ ಪೇಟೆಯಲ್ಲಿ ಇಂದು ನೆಹರು ಯುವ ಕೇಂದ್ರದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಶ್ರೀ ದಿವ್ಯ ಜ್ಯೋತಿ ಮಹಿಳಾ ಸಂಘ ಹಾಗೂ ಆರುಂಧತಿ ಮಹಿಳಾ ಸಂಘ ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣದ ಕುರಿತು ಅರಿವು ಮತ್ತು ನಾರಿ ಶಕ್ತಿ ಪಿಟ್ ನೆಸ್ ರನ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಂತರ ಮಂಜುಳಾ ಮಾತನಾಡಿ, ಇಂದಿನ ಸಮಾಜದಲ್ಲಿ ಪ್ರತಿಯೊಬ್ಬ ಮಹಿಳೆಯರು ಒಂದಲ್ಲ ಒಂದು ರೀತಿಯಲ್ಲಿ ಸಾಧನೆ ಮಾಡುತ್ತಿದ್ದಾರೆ. ಪ್ರತಿ ಯಶಸ್ವಿ ಮಹಿಳೆಯ ಹಿಂದೆ ತನ್ನದೇ ಆದ ಚರಿತ್ರೆ ಮತ್ತು ಇತಿಹಾಸ ಇದ್ದೇ ಇರುತ್ತದೆ. ಆದರೆ, ಈ ಎಲ್ಲ ಕಷ್ಟಗಳನ್ನು ಧೈರ್ಯವಾಗಿ ಗಂಡು ಹೆಣ್ಣು ಎಂಬ ಭಾವನೆ ಇಲ್ಲದೆ ಧೈರ್ಯವಾಗಿ ಎದುರಿಸಬೇಕು

ಮಹಿಳೆಯರು ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಿಸಬೇಕು.ಆಗ ಅವಳು ತನ್ನ ಕುಟುಂಬದ ಎಲ್ಲರಲ್ಲೂ ತಿಳಿವಳಿಕೆ ಮೂಡಿಸುತ್ತಾಳೆ ಆದ್ದರಿಂದ ಮಹಿಳಾ ಸಶಸ್ತ್ರೀಕರಣಕ್ಕೆ, ಸಬಲೀಕರಣಕ್ಕೆ ಶಿಕ್ಷಣವೇ ಮೂಲವಾಗಿದೆ ಎಂದರು. ಇದರ ಜೊತೆಗೆ ಪ್ರತಿಯೊಬ್ಬರು ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಸಹ ಕೇವಲ ಒಂದು ಜಾತಿಗೆ ಸೀಮಿತವಲ್ಲ. ಆದರೆ ಆಡಳಿತ ಸರಕಾರಗಳು ಹಾಗೆ ಮಾಡಿವೆ.ಇವತ್ತಿನ ದಿನ ನೀವೆಲ್ಲ ನಿಮ್ಮ ತಂದೆ ಆಸ್ತಿಯಲ್ಲಿ ಹಕ್ಕನ್ನು ಪಡೆಯಬೇಕು ಎಂದರೆ.ಸರಕಾರಿ ಸೇವೆಯಲ್ಲಿರುವ ಹೆಣ್ಣು ಮಕ್ಕಳಿಗೆ ಹೆರಿಗೆ ಸಮಯದಲ್ಲಿ ಹೆರಿಗೆ ರಜಾ. ಸಮಾನ ಶಿಕ್ಷಣ, ಸೇರಿದಂತೆ ಮೂಲಭೂತ ಹಕ್ಕುಗಳನ್ನು ಸಂವಿಧಾನ ನಮಗೆ ಒದಗಿಸಿಕೊಟ್ಟಿದೆ. ಎಲ್ಲಾ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕು ಎಂದರು.

ಇದೆ ವೇಳೆ ನಾರಿ ಶಕ್ತಿ ಪಿಟ್ ನೆಸ್ ರನ್ಸ್ ನಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಪ್ರಥಮ ದ್ವಿತೀಯ ಬಹುಮಾನಗಳನ್ನು ವಿತರಣೆ ಮಾಡಲಾಯಿತು

ಇನ್ನು ಇದೆ ಸಂದರ್ಭದಲ್ಲಿ ಆರುಂಧತಿ ಮಹಿಳಾ ಸಂಘ ಅಧ್ಯಕ್ಷರು ಮುನಿರತ್ನ, ಧರ್ಮ ಸ್ಥಳ ಸಂಘದ ಮಾಲಾವತಿ, ಮಂಜುಳಾ ಸೇರಿದಂತೆ ಮತ್ತಿತ್ತರರು ಹಾಜರಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

15 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago