ಹೆಣ್ಣು ಸಂಸಾರದ ಕಣ್ಣು: ಸ್ವಯಂ ದುಡಿಮೆಯಿಂದ ಸ್ವಾವಲಂಭಿಯಾಗಿ ಜೀವನ ನಡೆಸಬೇಕು-ಸಮಾಜ ಸೇವಕಿ ಶಾರದಮ್ಮ

ಹೆಣ್ಣು ಮಕ್ಕಳು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಾಗಬಾರದು ಹೆಣ್ಣು ಸಂಸಾರದ ಕಣ್ಣು ಆಗಬೇಕು ಪ್ರತಿಯೊಬ್ಬ ಮಹಿಳೆಯ ಗ್ರಾಮೀಣ ಮಹಿಳಾ ಗುಂಪುಗಳು ಕರ ಕುಶಲ ಮತ್ತು ವೌಲ್ಯವರ್ಧಿತ ಉತ್ಪನ್ನಗಳನ್ನು ತಾವೇ ತಯಾರಿಸಿ ಮಾರಾಟ ಮಾಡುವ ಮೂಲಕ ಆದಾಯ ಅಭಿವೃದ್ಧಿಯನ್ನು ಮಾಡಿಕೊಂಡು ಸ್ವಯಂ ದುಡಿಮೆಯಿಂದ ಸ್ವವಲಂಭಿಯಾಗಿ ಜೀವನ ನಡೆಸಬೇಕು ಎಂದು ಸಮಾಜ ಸೇವಕಿ ಶಾರದಮ್ಮ ಅಭಿಪ್ರಾಯಪಟ್ಟರು

ಶಿಡ್ಲಘಟ್ಟ ನಗರದ ಕೆಕೆ ಪೇಟೆಯಲ್ಲಿ ಇಂದು ನೆಹರು ಯುವ ಕೇಂದ್ರದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಶ್ರೀ ದಿವ್ಯ ಜ್ಯೋತಿ ಮಹಿಳಾ ಸಂಘ ಹಾಗೂ ಆರುಂಧತಿ ಮಹಿಳಾ ಸಂಘ ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣದ ಕುರಿತು ಅರಿವು ಮತ್ತು ನಾರಿ ಶಕ್ತಿ ಪಿಟ್ ನೆಸ್ ರನ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಂತರ ಮಂಜುಳಾ ಮಾತನಾಡಿ, ಇಂದಿನ ಸಮಾಜದಲ್ಲಿ ಪ್ರತಿಯೊಬ್ಬ ಮಹಿಳೆಯರು ಒಂದಲ್ಲ ಒಂದು ರೀತಿಯಲ್ಲಿ ಸಾಧನೆ ಮಾಡುತ್ತಿದ್ದಾರೆ. ಪ್ರತಿ ಯಶಸ್ವಿ ಮಹಿಳೆಯ ಹಿಂದೆ ತನ್ನದೇ ಆದ ಚರಿತ್ರೆ ಮತ್ತು ಇತಿಹಾಸ ಇದ್ದೇ ಇರುತ್ತದೆ. ಆದರೆ, ಈ ಎಲ್ಲ ಕಷ್ಟಗಳನ್ನು ಧೈರ್ಯವಾಗಿ ಗಂಡು ಹೆಣ್ಣು ಎಂಬ ಭಾವನೆ ಇಲ್ಲದೆ ಧೈರ್ಯವಾಗಿ ಎದುರಿಸಬೇಕು

ಮಹಿಳೆಯರು ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಿಸಬೇಕು.ಆಗ ಅವಳು ತನ್ನ ಕುಟುಂಬದ ಎಲ್ಲರಲ್ಲೂ ತಿಳಿವಳಿಕೆ ಮೂಡಿಸುತ್ತಾಳೆ ಆದ್ದರಿಂದ ಮಹಿಳಾ ಸಶಸ್ತ್ರೀಕರಣಕ್ಕೆ, ಸಬಲೀಕರಣಕ್ಕೆ ಶಿಕ್ಷಣವೇ ಮೂಲವಾಗಿದೆ ಎಂದರು. ಇದರ ಜೊತೆಗೆ ಪ್ರತಿಯೊಬ್ಬರು ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಸಹ ಕೇವಲ ಒಂದು ಜಾತಿಗೆ ಸೀಮಿತವಲ್ಲ. ಆದರೆ ಆಡಳಿತ ಸರಕಾರಗಳು ಹಾಗೆ ಮಾಡಿವೆ.ಇವತ್ತಿನ ದಿನ ನೀವೆಲ್ಲ ನಿಮ್ಮ ತಂದೆ ಆಸ್ತಿಯಲ್ಲಿ ಹಕ್ಕನ್ನು ಪಡೆಯಬೇಕು ಎಂದರೆ.ಸರಕಾರಿ ಸೇವೆಯಲ್ಲಿರುವ ಹೆಣ್ಣು ಮಕ್ಕಳಿಗೆ ಹೆರಿಗೆ ಸಮಯದಲ್ಲಿ ಹೆರಿಗೆ ರಜಾ. ಸಮಾನ ಶಿಕ್ಷಣ, ಸೇರಿದಂತೆ ಮೂಲಭೂತ ಹಕ್ಕುಗಳನ್ನು ಸಂವಿಧಾನ ನಮಗೆ ಒದಗಿಸಿಕೊಟ್ಟಿದೆ. ಎಲ್ಲಾ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕು ಎಂದರು.

ಇದೆ ವೇಳೆ ನಾರಿ ಶಕ್ತಿ ಪಿಟ್ ನೆಸ್ ರನ್ಸ್ ನಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಪ್ರಥಮ ದ್ವಿತೀಯ ಬಹುಮಾನಗಳನ್ನು ವಿತರಣೆ ಮಾಡಲಾಯಿತು

ಇನ್ನು ಇದೆ ಸಂದರ್ಭದಲ್ಲಿ ಆರುಂಧತಿ ಮಹಿಳಾ ಸಂಘ ಅಧ್ಯಕ್ಷರು ಮುನಿರತ್ನ, ಧರ್ಮ ಸ್ಥಳ ಸಂಘದ ಮಾಲಾವತಿ, ಮಂಜುಳಾ ಸೇರಿದಂತೆ ಮತ್ತಿತ್ತರರು ಹಾಜರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

11 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago