ಹೆಣ್ಣು ಸಂಸಾರದ ಕಣ್ಣು: ಸ್ವಯಂ ದುಡಿಮೆಯಿಂದ ಸ್ವಾವಲಂಭಿಯಾಗಿ ಜೀವನ ನಡೆಸಬೇಕು-ಸಮಾಜ ಸೇವಕಿ ಶಾರದಮ್ಮ

ಹೆಣ್ಣು ಮಕ್ಕಳು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಾಗಬಾರದು ಹೆಣ್ಣು ಸಂಸಾರದ ಕಣ್ಣು ಆಗಬೇಕು ಪ್ರತಿಯೊಬ್ಬ ಮಹಿಳೆಯ ಗ್ರಾಮೀಣ ಮಹಿಳಾ ಗುಂಪುಗಳು ಕರ ಕುಶಲ ಮತ್ತು ವೌಲ್ಯವರ್ಧಿತ ಉತ್ಪನ್ನಗಳನ್ನು ತಾವೇ ತಯಾರಿಸಿ ಮಾರಾಟ ಮಾಡುವ ಮೂಲಕ ಆದಾಯ ಅಭಿವೃದ್ಧಿಯನ್ನು ಮಾಡಿಕೊಂಡು ಸ್ವಯಂ ದುಡಿಮೆಯಿಂದ ಸ್ವವಲಂಭಿಯಾಗಿ ಜೀವನ ನಡೆಸಬೇಕು ಎಂದು ಸಮಾಜ ಸೇವಕಿ ಶಾರದಮ್ಮ ಅಭಿಪ್ರಾಯಪಟ್ಟರು

ಶಿಡ್ಲಘಟ್ಟ ನಗರದ ಕೆಕೆ ಪೇಟೆಯಲ್ಲಿ ಇಂದು ನೆಹರು ಯುವ ಕೇಂದ್ರದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಶ್ರೀ ದಿವ್ಯ ಜ್ಯೋತಿ ಮಹಿಳಾ ಸಂಘ ಹಾಗೂ ಆರುಂಧತಿ ಮಹಿಳಾ ಸಂಘ ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣದ ಕುರಿತು ಅರಿವು ಮತ್ತು ನಾರಿ ಶಕ್ತಿ ಪಿಟ್ ನೆಸ್ ರನ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಂತರ ಮಂಜುಳಾ ಮಾತನಾಡಿ, ಇಂದಿನ ಸಮಾಜದಲ್ಲಿ ಪ್ರತಿಯೊಬ್ಬ ಮಹಿಳೆಯರು ಒಂದಲ್ಲ ಒಂದು ರೀತಿಯಲ್ಲಿ ಸಾಧನೆ ಮಾಡುತ್ತಿದ್ದಾರೆ. ಪ್ರತಿ ಯಶಸ್ವಿ ಮಹಿಳೆಯ ಹಿಂದೆ ತನ್ನದೇ ಆದ ಚರಿತ್ರೆ ಮತ್ತು ಇತಿಹಾಸ ಇದ್ದೇ ಇರುತ್ತದೆ. ಆದರೆ, ಈ ಎಲ್ಲ ಕಷ್ಟಗಳನ್ನು ಧೈರ್ಯವಾಗಿ ಗಂಡು ಹೆಣ್ಣು ಎಂಬ ಭಾವನೆ ಇಲ್ಲದೆ ಧೈರ್ಯವಾಗಿ ಎದುರಿಸಬೇಕು

ಮಹಿಳೆಯರು ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಿಸಬೇಕು.ಆಗ ಅವಳು ತನ್ನ ಕುಟುಂಬದ ಎಲ್ಲರಲ್ಲೂ ತಿಳಿವಳಿಕೆ ಮೂಡಿಸುತ್ತಾಳೆ ಆದ್ದರಿಂದ ಮಹಿಳಾ ಸಶಸ್ತ್ರೀಕರಣಕ್ಕೆ, ಸಬಲೀಕರಣಕ್ಕೆ ಶಿಕ್ಷಣವೇ ಮೂಲವಾಗಿದೆ ಎಂದರು. ಇದರ ಜೊತೆಗೆ ಪ್ರತಿಯೊಬ್ಬರು ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಸಹ ಕೇವಲ ಒಂದು ಜಾತಿಗೆ ಸೀಮಿತವಲ್ಲ. ಆದರೆ ಆಡಳಿತ ಸರಕಾರಗಳು ಹಾಗೆ ಮಾಡಿವೆ.ಇವತ್ತಿನ ದಿನ ನೀವೆಲ್ಲ ನಿಮ್ಮ ತಂದೆ ಆಸ್ತಿಯಲ್ಲಿ ಹಕ್ಕನ್ನು ಪಡೆಯಬೇಕು ಎಂದರೆ.ಸರಕಾರಿ ಸೇವೆಯಲ್ಲಿರುವ ಹೆಣ್ಣು ಮಕ್ಕಳಿಗೆ ಹೆರಿಗೆ ಸಮಯದಲ್ಲಿ ಹೆರಿಗೆ ರಜಾ. ಸಮಾನ ಶಿಕ್ಷಣ, ಸೇರಿದಂತೆ ಮೂಲಭೂತ ಹಕ್ಕುಗಳನ್ನು ಸಂವಿಧಾನ ನಮಗೆ ಒದಗಿಸಿಕೊಟ್ಟಿದೆ. ಎಲ್ಲಾ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕು ಎಂದರು.

ಇದೆ ವೇಳೆ ನಾರಿ ಶಕ್ತಿ ಪಿಟ್ ನೆಸ್ ರನ್ಸ್ ನಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಪ್ರಥಮ ದ್ವಿತೀಯ ಬಹುಮಾನಗಳನ್ನು ವಿತರಣೆ ಮಾಡಲಾಯಿತು

ಇನ್ನು ಇದೆ ಸಂದರ್ಭದಲ್ಲಿ ಆರುಂಧತಿ ಮಹಿಳಾ ಸಂಘ ಅಧ್ಯಕ್ಷರು ಮುನಿರತ್ನ, ಧರ್ಮ ಸ್ಥಳ ಸಂಘದ ಮಾಲಾವತಿ, ಮಂಜುಳಾ ಸೇರಿದಂತೆ ಮತ್ತಿತ್ತರರು ಹಾಜರಿದ್ದರು.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

1 hour ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

4 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

8 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

23 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

23 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

24 hours ago