ಹೆತ್ತ ಮಗನಿಂದಲೆ ತಾಯಿಯ ಕತ್ತು ಕೊಯ್ದು ಕೊಲೆಯಾಗಿರುವ ಘಟನೆ ತಾಲೂಕಿನ ಮುದ್ದನಾಯಕನಪಾಳ್ಯ ಸಮೀಪದ ರಾಗರಾಳ್ಳಗುಟ್ಟ ಬಳಿ ಇಂದು ಮುಂಜಾನೆ ನಡೆದಿದೆ.
ರತ್ನಮ್ಮ (56) ಕೊಲೆಯಾದ ತಾಯಿ. ಮಗ ಗಂಗರಾಜು(35) ಎಂಬುವವನಿಂದ ತಾಯಿ ಕೊಲೆಯಾಗಿದ್ದಾರೆ ಎನ್ನಲಾಗಿದೆ. ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ತಾಯಿ ಮಗನ ನಡುವೆ ಶುರುವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಮಾತಿನ ಜಗಳ ವಿಕೋಪಕ್ಕೆ ತಿರುಗಿ ಕುಡುಕ ಮಗನಿಂದ ತಾಯಿಯ ಕೊಲೆಯಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸದ್ಯ ಕೊಲೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಶಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಡಿವೈಎಸ್ ರವಿ.ಪಿ ಸೇರಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳು ಇದ್ದರು.
ಸ್ಥಳಕ್ಕೆ ಎಫ್ ಎಸ್ ಎಲ್ ತಂಡ ಭೇಟಿ ನೀಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…