ಹೆತ್ತ ಮಗನಿಂದಲೆ ತಾಯಿಯ ಕೊಲೆ..?: ಕತ್ತು ಸೀಳಿ ಬರ್ಬರವಾಗಿ ಕೊಲೆ

ಹೆತ್ತ ಮಗನಿಂದಲೆ ತಾಯಿಯ ಕತ್ತು ಕೊಯ್ದು ಕೊಲೆಯಾಗಿರುವ ಘಟನೆ ತಾಲೂಕಿನ ಮುದ್ದನಾಯಕನಪಾಳ್ಯ ಸಮೀಪದ ರಾಗರಾಳ್ಳಗುಟ್ಟ ಬಳಿ‌ ಇಂದು ಮುಂಜಾನೆ ನಡೆದಿದೆ.

ರತ್ನಮ್ಮ (56) ಕೊಲೆಯಾದ ತಾಯಿ. ಮಗ ಗಂಗರಾಜು(35) ಎಂಬುವವನಿಂದ ತಾಯಿ ಕೊಲೆಯಾಗಿದ್ದಾರೆ ಎನ್ನಲಾಗಿದೆ. ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ತಾಯಿ ಮಗನ ನಡುವೆ ಶುರುವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಮಾತಿನ ಜಗಳ ವಿಕೋಪಕ್ಕೆ ತಿರುಗಿ ಕುಡುಕ ಮಗನಿಂದ ತಾಯಿಯ ಕೊಲೆಯಾಗಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸದ್ಯ ಕೊಲೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಶಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಡಿವೈಎಸ್ ರವಿ.ಪಿ ಸೇರಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳು ಇದ್ದರು.

ಸ್ಥಳಕ್ಕೆ ಎಫ್ ಎಸ್ ಎಲ್ ತಂಡ ಭೇಟಿ ನೀಡಿದ್ದಾರೆ.

Ramesh Babu

Journalist

Recent Posts

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

2 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

13 hours ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

14 hours ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

15 hours ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

17 hours ago

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

23 hours ago