ಹೆದ್ದಾರಿಯಲ್ಲಿ ಬೈಕ್ ಮತ್ತು ಕಾರಿನ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರರು ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘಟನೆ ದೇವನಹಳ್ಳಿ ತಾಲೂಕಿನ ಇರಿಗೇನಹಳ್ಳಿ ಗೇಟ್ ಬಳಿ ನಡೆದಿದೆ. ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿರುವಾಗಲೇ ಬೈಕ್ ಸವಾರ ಅಡ್ಡ ನುಗ್ಗಿದೆ. ಹೆದ್ದಾರಿ ದಾಟುವ ಭರದಲ್ಲಿ ಅಡ್ಡ ನುಗ್ಗಿ ನಡು ರಸ್ತೆಯಲ್ಲಿ ಬೈಕ್ ನಿಲ್ಲಿಸಲಾಗಿತ್ತು. ಈ ವೇಳೆ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ.
ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದು ಅಲ್ಲದೇ ಒಂದಷ್ಟು ದೂರು ಬೈಕ್ ಎಳೆದೋಯ್ದಿದೆ.
ಬೈಕ್ ಸವಾರನ ನಿರ್ಲಕ್ಷ್ಯದಿಂದ ಪದೇ ಪದೇ ಹೆದ್ದಾರಿಯಲ್ಲಿ ಇಂತಹ ಅಪಘಾತಗಳು ಸಂಭವಿಸುತ್ತಿವೆ. ಸದ್ಯ ಬೈಕ್ ಸವಾರರ ಆತುರದಿಂದ ಕಾರು ಚಾಲಕ ಸಂಕಷ್ಟಕ್ಕೀಡಾಗಿದ್ದಾನೆ.
ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…