ಹೆದ್ದಾರಿ ಡಾಬಾಗಳ ಬಳಿ ಖದೀಮರಿಂದ ದರೋಡೆ ಸ್ಕೇಚ್: ಸ್ವಲ್ಪ ಯಾಮಾರಿದ್ರೆ ಚಾಕು ತೋರಿಸಿ, ಬೆದರಿಸಿ ಹಣ, ಚಿನ್ನಾಭರಣ, ಮೊಬೈಲ್ ಎಗರಿಸುವ ದರೋಡೆಕೋರರು….ಇರಲಿ ಎಚ್ಚರಿಕೆ….

ಹೆದ್ದಾರಿಗಳಲ್ಲಿ ಹೋಗುವ ವಾಹನ ಸವಾರರು ಮಧ್ಯಾಹ್ನ ಮತ್ತು ರಾತ್ರಿ ವೇಳೆ ಡಾಬಾಗಳ ಬಳಿ ವಾಹನ ನಿಲ್ಲಿಸಿ ಊಟ ಮಾಡಿ ಹೋಗುವುದು ಸಹಜ. ಆದರೆ, ಇದನ್ನೆ ತಮ್ಮ ಬಂಡವಾಳ ಮಾಡಿಕೊಂಡ ಖದೀಮರು ಒಂಟಿ ಜನರನ್ನ ಬೆದರಿಸಿ ಶೋಕಿ ಮಾಡೋದನ್ನ ಕರಗತ ಮಾಡಿಕೊಂಡಿದ್ದು ಇದೀಗ ಪೊಲೀಸರ ಕೈಗೆ ಲಾಕ್ ಆಗಿದ್ದಾರೆ.

ದಡೋತಿ ದೇಹ ಕೈ ಕಾಲುಗಳೆಲ್ಲ ದೇವರ ಚೆನ್ನಾಗೆ ಕೊಟ್ಟಿದ್ದಾನೆ. ದುಡಿದು ತಿನ್ನೋಕ್ಕೆ ತೋಳಲ್ಲಿ ಶಕ್ತಿ ಸಹ ಇದ್ದರು, ಮೈ ಬಗ್ಗಿಸಿ ಕೆಲಸ ಮಾಡೋದನ್ನ ಬಿಟ್ಟು ಅಡ್ಡದಾರಿಯಲ್ಲಿ ಜನರ ಸುಲಿಗೆ ಮಾಡೋಕ್ಕೆ ಶುರು ಮಾಡಿರುವ ಖದೀಮರು. ಜೊತೆಗೆ ಒಂದಷ್ಟು ಕಡೆ ಸುಲಿಗೆ ಸ್ಕೇಚ್ ಸಹ ಸಕ್ಸಸ್ ಆಗಿದ್ದು, ಇದನ್ನೆ ಉದ್ಯೋಗ ಮಾಡಿಕೊಳ್ಳಲು ಹೋಗಿ ಇದೀಗ ಪೊಲೀಸರ ಮುಂದೆ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಇಂಗು ತಿಂದ್ದ ಮಂಗಗಳಾಂತಾಗಿದ್ದಾರೆ.

ಡಾಬಾ ಬಳಿ ಸ್ಕೇಚ್ ಹಾಕಿ ಸುಲಿಗೆ ಮಾಡುತ್ತಿದ್ದವರು ಅಂದರ್….

ಮುಖಕ್ಕೆ ಮಾಸ್ಕ್ ಹಾಕಿಕೊಂಡು ಪೊಲೀಸರ ಮುಂದೆ ಕೈ ಕಟ್ಟಿ ಕುಳಿತಿರುವ ಹೆಸರು ಬಾಲಕೃಷ್ಣ, ಹರ್ಷವರ್ಧನ್ ಮತ್ತು ಅನಿಲ್ ಕುಮಾರ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದಲ್ಲಿ ಹಾದು ಹೋಗಿರುವ ದಾಬಸ್ ಪೇಟೆಯಿಂದ ಹೊಸಕೊಟೆವರೆಗಿನ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಬೀಡು ಬಿಡ್ತಿದ್ದ ಈ ಮೂವರು ಖದೀಮರು ಡಾಬಾಗಳ ಬಳಿ ಸ್ಕೇಚ್ ಹಾಕ್ತಿದ್ರು. ಅಲ್ಲದೆ ಮಧ್ಯಾಹ್ನದಿಂದ ಮಧ್ಯರಾತ್ರಿವರೆಗೂ ಡಾಬಾಗಳಿಗೆ ಬರುವ ಒಂಟಿ ಜನರನ್ನೆ ಟಾರ್ಗೆಟ್ ಮಾಡಿಕೊಳ್ತಿದ್ದ ಖದೀಮರು ವಾಹನ ಸವಾರರು ಊಟ ಮುಗಿಸಿ ಕಾರು ಹತ್ತುತ್ತಿದ್ದಂತೆ ಬಂದು ಅಟ್ಯಾಕ್ ಮಾಡ್ತಿದ್ರು. ಇದೇ ರೀತಿ ಕಳೆದ ಎರಡು ತಿಂಗಳಿಂದೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನದೇವಿ ಅಗ್ರಹಾರದ ಮೂನ್ ಲೈಟ್ ಡಾಬಾದಲ್ಲಿ ಊಟಕ್ಕೆ ಬಂದಿದ್ದವರನ್ನ ಬೆದರಿಸಿ ಸುಲಿಗೆ ಮಾಡಿದ್ದು, ಮೊಬೈಲ್ ನಗದು ಮತ್ತು ಫೋನ್ ಪೇ ನಲ್ಲಿದ್ದ ಹಣವನ್ನೆಲ್ಲ ಕಿತ್ತುಕೊಂಡು ಎಸ್ಕೇಪ್ ಆಗಿದ್ರು…

ಕಳೆದ ಮೂರು ನಾಲ್ಕು ತಿಂಗಳುಗಳಿಂದ ದೊಡ್ಡಬಳ್ಳಾಪುರ-ದೇವನಹಳ್ಳಿ ಹೆದ್ದಾರಿಯಲ್ಲಿ ಇದೇ ರೀತಿ ಹಲವು ದರೋಡೆ ಪ್ರಕರಣಗಳು ನಡೆದಿದ್ದ ಕಾರಣ ಅಲರ್ಟ್ ಆಗಿದ್ದ ದೊಡ್ಡಬೆಳವಂಗಲ ಪೊಲೀಸರು ಇದೀಗ ಒಂಟಿ ಜನರನ್ನ ಸುಲಿಗೆ ಮಾಡ್ತಿದ್ದ ಬಾಲಕೃಷ್ಣ, ಹರ್ಷವರ್ಧನ್ ಮತ್ತು ಅನಿಲ್ ಕುಮಾರ್ ಅನ್ನೊ ಮೂವರು ಖದೀಮರನ್ನ ಲಾಕ್ ಮಾಡಿದ್ದಾರೆ.

ಬಂಧಿತರಿಂದ ಒಂಟಿ ಜನರ ಬಳಿ ಸುಲಿಗೆ ಮಾಡಿದ್ದ 2 ದ್ವಿಚಕ್ರ ವಾಹನ,  2 ಐ ಫೋನ್, ಬೆಲೆ ಬಾಳುವ ವಾಚ್, 80 ಸಾವಿರ ನಗದು ಸೇರಿದಂತೆ ಹಲವು ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಬಂಧಿತ ಬಾಲಕೃಷ್ಣ ವಿರುದ್ದ ರೌಡಿ ಶೀಟರ್ ತೆರೆದಿದ್ದು, ಬಾಲೃಕಷ್ಣ ಜೊತೆಗೆ ಅನಿಲ್ ಕುಮಾರ್ ಮೇಲೆ ಮಾದನಾಯಕನಹಳ್ಳಿ, ಮಂಡ್ಯ, ಪೀಣ್ಯ ಬಾಗಲಗುಂಟೆ, ಯಲಹಂಕ, ಕೆಂಗೇರಿ, ದೊಡ್ಡಬೆಳವಂಗಲ ಪೊಲೀಸ್ ಠಾಣೆಗಳಲ್ಲಿ ಹಲವು ಕೇಸ್ ಗಳು ದಾಖಲಾಗಿವೆ.

ಇದೀಗ ದೊಡ್ಡಬೆಳವಂಗಲ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ  ಮತ್ತು ಸಿಬ್ಬಂದಿ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಒಟ್ಟಾರೆ ಜೈಲಿಗೆ ಹೋಗಿ ಬಂದಿದ್ದರೂ ಒಳ್ಳೆ ಬುದ್ದಿ ಕಲಿಯದೆ ಜೈಲಿನಲ್ಲಿ ಸಿಕ್ಕ ಸ್ನೇಹಿತರ ಜೊತೆಗೂಡಿ ಮತ್ತಷ್ಟು ಅಪರಾದಗಳನ್ನ ಮಾಡುತ್ತಿದ್ದವರು ಇದೀಗ ಮತ್ತೆ ಮುದ್ದೆ ಮುರಿಯಲು ಮುಂದಾಗಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago