ಹೆದ್ದಾರಿಗಳಲ್ಲಿ ಹೋಗುವ ವಾಹನ ಸವಾರರು ಮಧ್ಯಾಹ್ನ ಮತ್ತು ರಾತ್ರಿ ವೇಳೆ ಡಾಬಾಗಳ ಬಳಿ ವಾಹನ ನಿಲ್ಲಿಸಿ ಊಟ ಮಾಡಿ ಹೋಗುವುದು ಸಹಜ. ಆದರೆ, ಇದನ್ನೆ ತಮ್ಮ ಬಂಡವಾಳ ಮಾಡಿಕೊಂಡ ಖದೀಮರು ಒಂಟಿ ಜನರನ್ನ ಬೆದರಿಸಿ ಶೋಕಿ ಮಾಡೋದನ್ನ ಕರಗತ ಮಾಡಿಕೊಂಡಿದ್ದು ಇದೀಗ ಪೊಲೀಸರ ಕೈಗೆ ಲಾಕ್ ಆಗಿದ್ದಾರೆ.
ದಡೋತಿ ದೇಹ ಕೈ ಕಾಲುಗಳೆಲ್ಲ ದೇವರ ಚೆನ್ನಾಗೆ ಕೊಟ್ಟಿದ್ದಾನೆ. ದುಡಿದು ತಿನ್ನೋಕ್ಕೆ ತೋಳಲ್ಲಿ ಶಕ್ತಿ ಸಹ ಇದ್ದರು, ಮೈ ಬಗ್ಗಿಸಿ ಕೆಲಸ ಮಾಡೋದನ್ನ ಬಿಟ್ಟು ಅಡ್ಡದಾರಿಯಲ್ಲಿ ಜನರ ಸುಲಿಗೆ ಮಾಡೋಕ್ಕೆ ಶುರು ಮಾಡಿರುವ ಖದೀಮರು. ಜೊತೆಗೆ ಒಂದಷ್ಟು ಕಡೆ ಸುಲಿಗೆ ಸ್ಕೇಚ್ ಸಹ ಸಕ್ಸಸ್ ಆಗಿದ್ದು, ಇದನ್ನೆ ಉದ್ಯೋಗ ಮಾಡಿಕೊಳ್ಳಲು ಹೋಗಿ ಇದೀಗ ಪೊಲೀಸರ ಮುಂದೆ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಇಂಗು ತಿಂದ್ದ ಮಂಗಗಳಾಂತಾಗಿದ್ದಾರೆ.
ಮುಖಕ್ಕೆ ಮಾಸ್ಕ್ ಹಾಕಿಕೊಂಡು ಪೊಲೀಸರ ಮುಂದೆ ಕೈ ಕಟ್ಟಿ ಕುಳಿತಿರುವ ಹೆಸರು ಬಾಲಕೃಷ್ಣ, ಹರ್ಷವರ್ಧನ್ ಮತ್ತು ಅನಿಲ್ ಕುಮಾರ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದಲ್ಲಿ ಹಾದು ಹೋಗಿರುವ ದಾಬಸ್ ಪೇಟೆಯಿಂದ ಹೊಸಕೊಟೆವರೆಗಿನ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಬೀಡು ಬಿಡ್ತಿದ್ದ ಈ ಮೂವರು ಖದೀಮರು ಡಾಬಾಗಳ ಬಳಿ ಸ್ಕೇಚ್ ಹಾಕ್ತಿದ್ರು. ಅಲ್ಲದೆ ಮಧ್ಯಾಹ್ನದಿಂದ ಮಧ್ಯರಾತ್ರಿವರೆಗೂ ಡಾಬಾಗಳಿಗೆ ಬರುವ ಒಂಟಿ ಜನರನ್ನೆ ಟಾರ್ಗೆಟ್ ಮಾಡಿಕೊಳ್ತಿದ್ದ ಖದೀಮರು ವಾಹನ ಸವಾರರು ಊಟ ಮುಗಿಸಿ ಕಾರು ಹತ್ತುತ್ತಿದ್ದಂತೆ ಬಂದು ಅಟ್ಯಾಕ್ ಮಾಡ್ತಿದ್ರು. ಇದೇ ರೀತಿ ಕಳೆದ ಎರಡು ತಿಂಗಳಿಂದೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನದೇವಿ ಅಗ್ರಹಾರದ ಮೂನ್ ಲೈಟ್ ಡಾಬಾದಲ್ಲಿ ಊಟಕ್ಕೆ ಬಂದಿದ್ದವರನ್ನ ಬೆದರಿಸಿ ಸುಲಿಗೆ ಮಾಡಿದ್ದು, ಮೊಬೈಲ್ ನಗದು ಮತ್ತು ಫೋನ್ ಪೇ ನಲ್ಲಿದ್ದ ಹಣವನ್ನೆಲ್ಲ ಕಿತ್ತುಕೊಂಡು ಎಸ್ಕೇಪ್ ಆಗಿದ್ರು…
ಬಂಧಿತರಿಂದ ಒಂಟಿ ಜನರ ಬಳಿ ಸುಲಿಗೆ ಮಾಡಿದ್ದ 2 ದ್ವಿಚಕ್ರ ವಾಹನ, 2 ಐ ಫೋನ್, ಬೆಲೆ ಬಾಳುವ ವಾಚ್, 80 ಸಾವಿರ ನಗದು ಸೇರಿದಂತೆ ಹಲವು ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಬಂಧಿತ ಬಾಲಕೃಷ್ಣ ವಿರುದ್ದ ರೌಡಿ ಶೀಟರ್ ತೆರೆದಿದ್ದು, ಬಾಲೃಕಷ್ಣ ಜೊತೆಗೆ ಅನಿಲ್ ಕುಮಾರ್ ಮೇಲೆ ಮಾದನಾಯಕನಹಳ್ಳಿ, ಮಂಡ್ಯ, ಪೀಣ್ಯ ಬಾಗಲಗುಂಟೆ, ಯಲಹಂಕ, ಕೆಂಗೇರಿ, ದೊಡ್ಡಬೆಳವಂಗಲ ಪೊಲೀಸ್ ಠಾಣೆಗಳಲ್ಲಿ ಹಲವು ಕೇಸ್ ಗಳು ದಾಖಲಾಗಿವೆ.
ಇದೀಗ ದೊಡ್ಡಬೆಳವಂಗಲ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ಮತ್ತು ಸಿಬ್ಬಂದಿ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಒಟ್ಟಾರೆ ಜೈಲಿಗೆ ಹೋಗಿ ಬಂದಿದ್ದರೂ ಒಳ್ಳೆ ಬುದ್ದಿ ಕಲಿಯದೆ ಜೈಲಿನಲ್ಲಿ ಸಿಕ್ಕ ಸ್ನೇಹಿತರ ಜೊತೆಗೂಡಿ ಮತ್ತಷ್ಟು ಅಪರಾದಗಳನ್ನ ಮಾಡುತ್ತಿದ್ದವರು ಇದೀಗ ಮತ್ತೆ ಮುದ್ದೆ ಮುರಿಯಲು ಮುಂದಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…