ಹೆದ್ದಾರಿಗಳಲ್ಲಿ ಹೋಗುವ ವಾಹನ ಸವಾರರು ಮಧ್ಯಾಹ್ನ ಮತ್ತು ರಾತ್ರಿ ವೇಳೆ ಡಾಬಾಗಳ ಬಳಿ ವಾಹನ ನಿಲ್ಲಿಸಿ ಊಟ ಮಾಡಿ ಹೋಗುವುದು ಸಹಜ. ಆದರೆ, ಇದನ್ನೆ ತಮ್ಮ ಬಂಡವಾಳ ಮಾಡಿಕೊಂಡ ಖದೀಮರು ಒಂಟಿ ಜನರನ್ನ ಬೆದರಿಸಿ ಶೋಕಿ ಮಾಡೋದನ್ನ ಕರಗತ ಮಾಡಿಕೊಂಡಿದ್ದು ಇದೀಗ ಪೊಲೀಸರ ಕೈಗೆ ಲಾಕ್ ಆಗಿದ್ದಾರೆ.
ದಡೋತಿ ದೇಹ ಕೈ ಕಾಲುಗಳೆಲ್ಲ ದೇವರ ಚೆನ್ನಾಗೆ ಕೊಟ್ಟಿದ್ದಾನೆ. ದುಡಿದು ತಿನ್ನೋಕ್ಕೆ ತೋಳಲ್ಲಿ ಶಕ್ತಿ ಸಹ ಇದ್ದರು, ಮೈ ಬಗ್ಗಿಸಿ ಕೆಲಸ ಮಾಡೋದನ್ನ ಬಿಟ್ಟು ಅಡ್ಡದಾರಿಯಲ್ಲಿ ಜನರ ಸುಲಿಗೆ ಮಾಡೋಕ್ಕೆ ಶುರು ಮಾಡಿರುವ ಖದೀಮರು. ಜೊತೆಗೆ ಒಂದಷ್ಟು ಕಡೆ ಸುಲಿಗೆ ಸ್ಕೇಚ್ ಸಹ ಸಕ್ಸಸ್ ಆಗಿದ್ದು, ಇದನ್ನೆ ಉದ್ಯೋಗ ಮಾಡಿಕೊಳ್ಳಲು ಹೋಗಿ ಇದೀಗ ಪೊಲೀಸರ ಮುಂದೆ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಇಂಗು ತಿಂದ್ದ ಮಂಗಗಳಾಂತಾಗಿದ್ದಾರೆ.
ಮುಖಕ್ಕೆ ಮಾಸ್ಕ್ ಹಾಕಿಕೊಂಡು ಪೊಲೀಸರ ಮುಂದೆ ಕೈ ಕಟ್ಟಿ ಕುಳಿತಿರುವ ಹೆಸರು ಬಾಲಕೃಷ್ಣ, ಹರ್ಷವರ್ಧನ್ ಮತ್ತು ಅನಿಲ್ ಕುಮಾರ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದಲ್ಲಿ ಹಾದು ಹೋಗಿರುವ ದಾಬಸ್ ಪೇಟೆಯಿಂದ ಹೊಸಕೊಟೆವರೆಗಿನ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಬೀಡು ಬಿಡ್ತಿದ್ದ ಈ ಮೂವರು ಖದೀಮರು ಡಾಬಾಗಳ ಬಳಿ ಸ್ಕೇಚ್ ಹಾಕ್ತಿದ್ರು. ಅಲ್ಲದೆ ಮಧ್ಯಾಹ್ನದಿಂದ ಮಧ್ಯರಾತ್ರಿವರೆಗೂ ಡಾಬಾಗಳಿಗೆ ಬರುವ ಒಂಟಿ ಜನರನ್ನೆ ಟಾರ್ಗೆಟ್ ಮಾಡಿಕೊಳ್ತಿದ್ದ ಖದೀಮರು ವಾಹನ ಸವಾರರು ಊಟ ಮುಗಿಸಿ ಕಾರು ಹತ್ತುತ್ತಿದ್ದಂತೆ ಬಂದು ಅಟ್ಯಾಕ್ ಮಾಡ್ತಿದ್ರು. ಇದೇ ರೀತಿ ಕಳೆದ ಎರಡು ತಿಂಗಳಿಂದೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನದೇವಿ ಅಗ್ರಹಾರದ ಮೂನ್ ಲೈಟ್ ಡಾಬಾದಲ್ಲಿ ಊಟಕ್ಕೆ ಬಂದಿದ್ದವರನ್ನ ಬೆದರಿಸಿ ಸುಲಿಗೆ ಮಾಡಿದ್ದು, ಮೊಬೈಲ್ ನಗದು ಮತ್ತು ಫೋನ್ ಪೇ ನಲ್ಲಿದ್ದ ಹಣವನ್ನೆಲ್ಲ ಕಿತ್ತುಕೊಂಡು ಎಸ್ಕೇಪ್ ಆಗಿದ್ರು…
ಬಂಧಿತರಿಂದ ಒಂಟಿ ಜನರ ಬಳಿ ಸುಲಿಗೆ ಮಾಡಿದ್ದ 2 ದ್ವಿಚಕ್ರ ವಾಹನ, 2 ಐ ಫೋನ್, ಬೆಲೆ ಬಾಳುವ ವಾಚ್, 80 ಸಾವಿರ ನಗದು ಸೇರಿದಂತೆ ಹಲವು ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಬಂಧಿತ ಬಾಲಕೃಷ್ಣ ವಿರುದ್ದ ರೌಡಿ ಶೀಟರ್ ತೆರೆದಿದ್ದು, ಬಾಲೃಕಷ್ಣ ಜೊತೆಗೆ ಅನಿಲ್ ಕುಮಾರ್ ಮೇಲೆ ಮಾದನಾಯಕನಹಳ್ಳಿ, ಮಂಡ್ಯ, ಪೀಣ್ಯ ಬಾಗಲಗುಂಟೆ, ಯಲಹಂಕ, ಕೆಂಗೇರಿ, ದೊಡ್ಡಬೆಳವಂಗಲ ಪೊಲೀಸ್ ಠಾಣೆಗಳಲ್ಲಿ ಹಲವು ಕೇಸ್ ಗಳು ದಾಖಲಾಗಿವೆ.
ಇದೀಗ ದೊಡ್ಡಬೆಳವಂಗಲ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ಮತ್ತು ಸಿಬ್ಬಂದಿ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಒಟ್ಟಾರೆ ಜೈಲಿಗೆ ಹೋಗಿ ಬಂದಿದ್ದರೂ ಒಳ್ಳೆ ಬುದ್ದಿ ಕಲಿಯದೆ ಜೈಲಿನಲ್ಲಿ ಸಿಕ್ಕ ಸ್ನೇಹಿತರ ಜೊತೆಗೂಡಿ ಮತ್ತಷ್ಟು ಅಪರಾದಗಳನ್ನ ಮಾಡುತ್ತಿದ್ದವರು ಇದೀಗ ಮತ್ತೆ ಮುದ್ದೆ ಮುರಿಯಲು ಮುಂದಾಗಿದ್ದಾರೆ.
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…