ಹೆದ್ದಾರಿ ಡಾಬಾಗಳ ಬಳಿ ಖದೀಮರಿಂದ ದರೋಡೆ ಸ್ಕೇಚ್: ಸ್ವಲ್ಪ ಯಾಮಾರಿದ್ರೆ ಚಾಕು ತೋರಿಸಿ, ಬೆದರಿಸಿ ಹಣ, ಚಿನ್ನಾಭರಣ, ಮೊಬೈಲ್ ಎಗರಿಸುವ ದರೋಡೆಕೋರರು….ಇರಲಿ ಎಚ್ಚರಿಕೆ….

ಹೆದ್ದಾರಿಗಳಲ್ಲಿ ಹೋಗುವ ವಾಹನ ಸವಾರರು ಮಧ್ಯಾಹ್ನ ಮತ್ತು ರಾತ್ರಿ ವೇಳೆ ಡಾಬಾಗಳ ಬಳಿ ವಾಹನ ನಿಲ್ಲಿಸಿ ಊಟ ಮಾಡಿ ಹೋಗುವುದು ಸಹಜ. ಆದರೆ, ಇದನ್ನೆ ತಮ್ಮ ಬಂಡವಾಳ ಮಾಡಿಕೊಂಡ ಖದೀಮರು ಒಂಟಿ ಜನರನ್ನ ಬೆದರಿಸಿ ಶೋಕಿ ಮಾಡೋದನ್ನ ಕರಗತ ಮಾಡಿಕೊಂಡಿದ್ದು ಇದೀಗ ಪೊಲೀಸರ ಕೈಗೆ ಲಾಕ್ ಆಗಿದ್ದಾರೆ.

ದಡೋತಿ ದೇಹ ಕೈ ಕಾಲುಗಳೆಲ್ಲ ದೇವರ ಚೆನ್ನಾಗೆ ಕೊಟ್ಟಿದ್ದಾನೆ. ದುಡಿದು ತಿನ್ನೋಕ್ಕೆ ತೋಳಲ್ಲಿ ಶಕ್ತಿ ಸಹ ಇದ್ದರು, ಮೈ ಬಗ್ಗಿಸಿ ಕೆಲಸ ಮಾಡೋದನ್ನ ಬಿಟ್ಟು ಅಡ್ಡದಾರಿಯಲ್ಲಿ ಜನರ ಸುಲಿಗೆ ಮಾಡೋಕ್ಕೆ ಶುರು ಮಾಡಿರುವ ಖದೀಮರು. ಜೊತೆಗೆ ಒಂದಷ್ಟು ಕಡೆ ಸುಲಿಗೆ ಸ್ಕೇಚ್ ಸಹ ಸಕ್ಸಸ್ ಆಗಿದ್ದು, ಇದನ್ನೆ ಉದ್ಯೋಗ ಮಾಡಿಕೊಳ್ಳಲು ಹೋಗಿ ಇದೀಗ ಪೊಲೀಸರ ಮುಂದೆ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಇಂಗು ತಿಂದ್ದ ಮಂಗಗಳಾಂತಾಗಿದ್ದಾರೆ.

ಡಾಬಾ ಬಳಿ ಸ್ಕೇಚ್ ಹಾಕಿ ಸುಲಿಗೆ ಮಾಡುತ್ತಿದ್ದವರು ಅಂದರ್….

ಮುಖಕ್ಕೆ ಮಾಸ್ಕ್ ಹಾಕಿಕೊಂಡು ಪೊಲೀಸರ ಮುಂದೆ ಕೈ ಕಟ್ಟಿ ಕುಳಿತಿರುವ ಹೆಸರು ಬಾಲಕೃಷ್ಣ, ಹರ್ಷವರ್ಧನ್ ಮತ್ತು ಅನಿಲ್ ಕುಮಾರ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದಲ್ಲಿ ಹಾದು ಹೋಗಿರುವ ದಾಬಸ್ ಪೇಟೆಯಿಂದ ಹೊಸಕೊಟೆವರೆಗಿನ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಬೀಡು ಬಿಡ್ತಿದ್ದ ಈ ಮೂವರು ಖದೀಮರು ಡಾಬಾಗಳ ಬಳಿ ಸ್ಕೇಚ್ ಹಾಕ್ತಿದ್ರು. ಅಲ್ಲದೆ ಮಧ್ಯಾಹ್ನದಿಂದ ಮಧ್ಯರಾತ್ರಿವರೆಗೂ ಡಾಬಾಗಳಿಗೆ ಬರುವ ಒಂಟಿ ಜನರನ್ನೆ ಟಾರ್ಗೆಟ್ ಮಾಡಿಕೊಳ್ತಿದ್ದ ಖದೀಮರು ವಾಹನ ಸವಾರರು ಊಟ ಮುಗಿಸಿ ಕಾರು ಹತ್ತುತ್ತಿದ್ದಂತೆ ಬಂದು ಅಟ್ಯಾಕ್ ಮಾಡ್ತಿದ್ರು. ಇದೇ ರೀತಿ ಕಳೆದ ಎರಡು ತಿಂಗಳಿಂದೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನದೇವಿ ಅಗ್ರಹಾರದ ಮೂನ್ ಲೈಟ್ ಡಾಬಾದಲ್ಲಿ ಊಟಕ್ಕೆ ಬಂದಿದ್ದವರನ್ನ ಬೆದರಿಸಿ ಸುಲಿಗೆ ಮಾಡಿದ್ದು, ಮೊಬೈಲ್ ನಗದು ಮತ್ತು ಫೋನ್ ಪೇ ನಲ್ಲಿದ್ದ ಹಣವನ್ನೆಲ್ಲ ಕಿತ್ತುಕೊಂಡು ಎಸ್ಕೇಪ್ ಆಗಿದ್ರು…

ಕಳೆದ ಮೂರು ನಾಲ್ಕು ತಿಂಗಳುಗಳಿಂದ ದೊಡ್ಡಬಳ್ಳಾಪುರ-ದೇವನಹಳ್ಳಿ ಹೆದ್ದಾರಿಯಲ್ಲಿ ಇದೇ ರೀತಿ ಹಲವು ದರೋಡೆ ಪ್ರಕರಣಗಳು ನಡೆದಿದ್ದ ಕಾರಣ ಅಲರ್ಟ್ ಆಗಿದ್ದ ದೊಡ್ಡಬೆಳವಂಗಲ ಪೊಲೀಸರು ಇದೀಗ ಒಂಟಿ ಜನರನ್ನ ಸುಲಿಗೆ ಮಾಡ್ತಿದ್ದ ಬಾಲಕೃಷ್ಣ, ಹರ್ಷವರ್ಧನ್ ಮತ್ತು ಅನಿಲ್ ಕುಮಾರ್ ಅನ್ನೊ ಮೂವರು ಖದೀಮರನ್ನ ಲಾಕ್ ಮಾಡಿದ್ದಾರೆ.

ಬಂಧಿತರಿಂದ ಒಂಟಿ ಜನರ ಬಳಿ ಸುಲಿಗೆ ಮಾಡಿದ್ದ 2 ದ್ವಿಚಕ್ರ ವಾಹನ,  2 ಐ ಫೋನ್, ಬೆಲೆ ಬಾಳುವ ವಾಚ್, 80 ಸಾವಿರ ನಗದು ಸೇರಿದಂತೆ ಹಲವು ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಬಂಧಿತ ಬಾಲಕೃಷ್ಣ ವಿರುದ್ದ ರೌಡಿ ಶೀಟರ್ ತೆರೆದಿದ್ದು, ಬಾಲೃಕಷ್ಣ ಜೊತೆಗೆ ಅನಿಲ್ ಕುಮಾರ್ ಮೇಲೆ ಮಾದನಾಯಕನಹಳ್ಳಿ, ಮಂಡ್ಯ, ಪೀಣ್ಯ ಬಾಗಲಗುಂಟೆ, ಯಲಹಂಕ, ಕೆಂಗೇರಿ, ದೊಡ್ಡಬೆಳವಂಗಲ ಪೊಲೀಸ್ ಠಾಣೆಗಳಲ್ಲಿ ಹಲವು ಕೇಸ್ ಗಳು ದಾಖಲಾಗಿವೆ.

ಇದೀಗ ದೊಡ್ಡಬೆಳವಂಗಲ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ  ಮತ್ತು ಸಿಬ್ಬಂದಿ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಒಟ್ಟಾರೆ ಜೈಲಿಗೆ ಹೋಗಿ ಬಂದಿದ್ದರೂ ಒಳ್ಳೆ ಬುದ್ದಿ ಕಲಿಯದೆ ಜೈಲಿನಲ್ಲಿ ಸಿಕ್ಕ ಸ್ನೇಹಿತರ ಜೊತೆಗೂಡಿ ಮತ್ತಷ್ಟು ಅಪರಾದಗಳನ್ನ ಮಾಡುತ್ತಿದ್ದವರು ಇದೀಗ ಮತ್ತೆ ಮುದ್ದೆ ಮುರಿಯಲು ಮುಂದಾಗಿದ್ದಾರೆ.

Ramesh Babu

Journalist

Recent Posts

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

5 hours ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

7 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

18 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

20 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

20 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

1 day ago