ಆ ಹೆದ್ದಾರಿ ರಸ್ತೆ ನಿರ್ಮಾಣ ಆಗಿ ಕೇವಲ ಒಂದು ವರ್ಷ ಮಾತ್ರ ಆಗಿದೆ. ಮೊದಲು ರಸ್ತೆ ಉದ್ಘಾಟನೆ ಆಯಿತಲ್ಲಾ ಅಂತ ಸಂತೋಷದಿಂದ ಇದ್ದ ಜನರು ಈಗ ಹಿಡಿ ಶಾಪ ಹಾಕುವಂತೆ ಆಗಿದೆ. ಸುಲಭವಾಗಿ ಮನೆ ಸೇರುತ್ತೇವೆ ಎಂದು ಕೊಂಡವರು ಅಪಘಾತಕ್ಕೆ ತುತ್ತಾಗಿ ಕೈಕಾಲು ಮುರಿದುಕೊಂಡು, ತಲೆಬುರುಡೆ ಹೊಡೆದುಕೊಂಡು ಆಸ್ಪತ್ರೆ ಪಾಲಾದರೆ, ಇನ್ನೂ ಕೆಲವರು ದೇವರ ಪಾದ ಸೇರುತ್ತಿದ್ದಾರೆ. ಅಷ್ಟಕ್ಕೂ ಆ ಹೆದ್ದಾರಿ ರಸ್ತೆಯಲ್ಲಿ ಏನಾಗುತ್ತಿದೆ, ಎಲ್ಲಿ ಅಂತಿರಾ ಈ ಸ್ಟೋರಿ ಓದಿ………
ಹೌದು ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ ಹುಲಿಕುಂಟೆ ಟೋಲ್ ಪ್ರಾರಂಭ ಆಗಿ ಕೇವಲ ಒಂದು ವರ್ಷ ಮಾತ್ರ ಆಗಿದೆ. ಈ ರಸ್ತೆ ಮೂಲಕ ಸಂಚಾರ ಮಾಡುವ ಪ್ರತಿಯೊಂದು ವಾಹನದಿಂದ ಟೋಲ್ ಸಂಗ್ರಹ ಮಾಡುತ್ತಾರೆ. ಆದರೆ, ಸವಾರರಿಗೆ ಮಾತ್ರ ಸರಿಯಾದ ವ್ಯವಸ್ಥೆಗಳನ್ನು ಮಾಡುತ್ತಿಲ್ಲ. ಗೀತಂ ಯೂನಿವರ್ಸಿಟಿ ಯಿಂದ ಹುಲಿಕುಂಟೆ ಟೋಲ್ ವರೆಗೆ ರಸ್ತೆಯಲ್ಲಿ ಸಾಕಷ್ಟು ಕಡೆ ಉಬ್ಬು ತಗ್ಗುಗಳಿವೆ. ಹಾಗಾಗಿ ವಾಹನಗಳು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗುತ್ತಿವೆ. ವಿಭಜಕಗಳಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ ಗಿಡಗಳು ಒಣಗುತ್ತಿವೆ. ಇರಬೇಕಾದ ಸ್ಥಳಗಳಲ್ಲಿ ಸೂಚನಾ ಫಲಕಗಳಿಲ್ಲ. ಇನ್ನೂ ಹಲವಾರು ನ್ಯೂನ್ಯತೆಗಳು ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಅನೇಕ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ( ಪ್ರವೀಣ್ ಶೆಟ್ಟಿ ಬಣ) ರವಿ ರಾಜಘಟ್ಟ ಆಕ್ರೋಶವ್ಯಕ್ತಪಡಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…