ಆ ಹೆದ್ದಾರಿ ರಸ್ತೆ ನಿರ್ಮಾಣ ಆಗಿ ಕೇವಲ ಒಂದು ವರ್ಷ ಮಾತ್ರ ಆಗಿದೆ. ಮೊದಲು ರಸ್ತೆ ಉದ್ಘಾಟನೆ ಆಯಿತಲ್ಲಾ ಅಂತ ಸಂತೋಷದಿಂದ ಇದ್ದ ಜನರು ಈಗ ಹಿಡಿ ಶಾಪ ಹಾಕುವಂತೆ ಆಗಿದೆ. ಸುಲಭವಾಗಿ ಮನೆ ಸೇರುತ್ತೇವೆ ಎಂದು ಕೊಂಡವರು ಅಪಘಾತಕ್ಕೆ ತುತ್ತಾಗಿ ಕೈಕಾಲು ಮುರಿದುಕೊಂಡು, ತಲೆಬುರುಡೆ ಹೊಡೆದುಕೊಂಡು ಆಸ್ಪತ್ರೆ ಪಾಲಾದರೆ, ಇನ್ನೂ ಕೆಲವರು ದೇವರ ಪಾದ ಸೇರುತ್ತಿದ್ದಾರೆ. ಅಷ್ಟಕ್ಕೂ ಆ ಹೆದ್ದಾರಿ ರಸ್ತೆಯಲ್ಲಿ ಏನಾಗುತ್ತಿದೆ, ಎಲ್ಲಿ ಅಂತಿರಾ ಈ ಸ್ಟೋರಿ ಓದಿ………
ಹೌದು ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ ಹುಲಿಕುಂಟೆ ಟೋಲ್ ಪ್ರಾರಂಭ ಆಗಿ ಕೇವಲ ಒಂದು ವರ್ಷ ಮಾತ್ರ ಆಗಿದೆ. ಈ ರಸ್ತೆ ಮೂಲಕ ಸಂಚಾರ ಮಾಡುವ ಪ್ರತಿಯೊಂದು ವಾಹನದಿಂದ ಟೋಲ್ ಸಂಗ್ರಹ ಮಾಡುತ್ತಾರೆ. ಆದರೆ, ಸವಾರರಿಗೆ ಮಾತ್ರ ಸರಿಯಾದ ವ್ಯವಸ್ಥೆಗಳನ್ನು ಮಾಡುತ್ತಿಲ್ಲ. ಗೀತಂ ಯೂನಿವರ್ಸಿಟಿ ಯಿಂದ ಹುಲಿಕುಂಟೆ ಟೋಲ್ ವರೆಗೆ ರಸ್ತೆಯಲ್ಲಿ ಸಾಕಷ್ಟು ಕಡೆ ಉಬ್ಬು ತಗ್ಗುಗಳಿವೆ. ಹಾಗಾಗಿ ವಾಹನಗಳು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗುತ್ತಿವೆ. ವಿಭಜಕಗಳಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ ಗಿಡಗಳು ಒಣಗುತ್ತಿವೆ. ಇರಬೇಕಾದ ಸ್ಥಳಗಳಲ್ಲಿ ಸೂಚನಾ ಫಲಕಗಳಿಲ್ಲ. ಇನ್ನೂ ಹಲವಾರು ನ್ಯೂನ್ಯತೆಗಳು ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಅನೇಕ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ( ಪ್ರವೀಣ್ ಶೆಟ್ಟಿ ಬಣ) ರವಿ ರಾಜಘಟ್ಟ ಆಕ್ರೋಶವ್ಯಕ್ತಪಡಿಸಿದ್ದಾರೆ.
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…
ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…
ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…