ಆ ಹೆದ್ದಾರಿ ರಸ್ತೆ ನಿರ್ಮಾಣ ಆಗಿ ಕೇವಲ ಒಂದು ವರ್ಷ ಮಾತ್ರ ಆಗಿದೆ. ಮೊದಲು ರಸ್ತೆ ಉದ್ಘಾಟನೆ ಆಯಿತಲ್ಲಾ ಅಂತ ಸಂತೋಷದಿಂದ ಇದ್ದ ಜನರು ಈಗ ಹಿಡಿ ಶಾಪ ಹಾಕುವಂತೆ ಆಗಿದೆ. ಸುಲಭವಾಗಿ ಮನೆ ಸೇರುತ್ತೇವೆ ಎಂದು ಕೊಂಡವರು ಅಪಘಾತಕ್ಕೆ ತುತ್ತಾಗಿ ಕೈಕಾಲು ಮುರಿದುಕೊಂಡು, ತಲೆಬುರುಡೆ ಹೊಡೆದುಕೊಂಡು ಆಸ್ಪತ್ರೆ ಪಾಲಾದರೆ, ಇನ್ನೂ ಕೆಲವರು ದೇವರ ಪಾದ ಸೇರುತ್ತಿದ್ದಾರೆ. ಅಷ್ಟಕ್ಕೂ ಆ ಹೆದ್ದಾರಿ ರಸ್ತೆಯಲ್ಲಿ ಏನಾಗುತ್ತಿದೆ, ಎಲ್ಲಿ ಅಂತಿರಾ ಈ ಸ್ಟೋರಿ ಓದಿ………
ಹೌದು ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ ಹುಲಿಕುಂಟೆ ಟೋಲ್ ಪ್ರಾರಂಭ ಆಗಿ ಕೇವಲ ಒಂದು ವರ್ಷ ಮಾತ್ರ ಆಗಿದೆ. ಈ ರಸ್ತೆ ಮೂಲಕ ಸಂಚಾರ ಮಾಡುವ ಪ್ರತಿಯೊಂದು ವಾಹನದಿಂದ ಟೋಲ್ ಸಂಗ್ರಹ ಮಾಡುತ್ತಾರೆ. ಆದರೆ, ಸವಾರರಿಗೆ ಮಾತ್ರ ಸರಿಯಾದ ವ್ಯವಸ್ಥೆಗಳನ್ನು ಮಾಡುತ್ತಿಲ್ಲ. ಗೀತಂ ಯೂನಿವರ್ಸಿಟಿ ಯಿಂದ ಹುಲಿಕುಂಟೆ ಟೋಲ್ ವರೆಗೆ ರಸ್ತೆಯಲ್ಲಿ ಸಾಕಷ್ಟು ಕಡೆ ಉಬ್ಬು ತಗ್ಗುಗಳಿವೆ. ಹಾಗಾಗಿ ವಾಹನಗಳು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗುತ್ತಿವೆ. ವಿಭಜಕಗಳಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ ಗಿಡಗಳು ಒಣಗುತ್ತಿವೆ. ಇರಬೇಕಾದ ಸ್ಥಳಗಳಲ್ಲಿ ಸೂಚನಾ ಫಲಕಗಳಿಲ್ಲ. ಇನ್ನೂ ಹಲವಾರು ನ್ಯೂನ್ಯತೆಗಳು ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಅನೇಕ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ( ಪ್ರವೀಣ್ ಶೆಟ್ಟಿ ಬಣ) ರವಿ ರಾಜಘಟ್ಟ ಆಕ್ರೋಶವ್ಯಕ್ತಪಡಿಸಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…