ಆ ಹೆದ್ದಾರಿ ರಸ್ತೆ ನಿರ್ಮಾಣ ಆಗಿ ಕೇವಲ ಒಂದು ವರ್ಷ ಮಾತ್ರ ಆಗಿದೆ. ಮೊದಲು ರಸ್ತೆ ಉದ್ಘಾಟನೆ ಆಯಿತಲ್ಲಾ ಅಂತ ಸಂತೋಷದಿಂದ ಇದ್ದ ಜನರು ಈಗ ಹಿಡಿ ಶಾಪ ಹಾಕುವಂತೆ ಆಗಿದೆ. ಸುಲಭವಾಗಿ ಮನೆ ಸೇರುತ್ತೇವೆ ಎಂದು ಕೊಂಡವರು ಅಪಘಾತಕ್ಕೆ ತುತ್ತಾಗಿ ಕೈಕಾಲು ಮುರಿದುಕೊಂಡು, ತಲೆಬುರುಡೆ ಹೊಡೆದುಕೊಂಡು ಆಸ್ಪತ್ರೆ ಪಾಲಾದರೆ, ಇನ್ನೂ ಕೆಲವರು ದೇವರ ಪಾದ ಸೇರುತ್ತಿದ್ದಾರೆ. ಅಷ್ಟಕ್ಕೂ ಆ ಹೆದ್ದಾರಿ ರಸ್ತೆಯಲ್ಲಿ ಏನಾಗುತ್ತಿದೆ, ಎಲ್ಲಿ ಅಂತಿರಾ ಈ ಸ್ಟೋರಿ ಓದಿ………
ಹೌದು ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ ಹುಲಿಕುಂಟೆ ಟೋಲ್ ಪ್ರಾರಂಭ ಆಗಿ ಕೇವಲ ಒಂದು ವರ್ಷ ಮಾತ್ರ ಆಗಿದೆ. ಈ ರಸ್ತೆ ಮೂಲಕ ಸಂಚಾರ ಮಾಡುವ ಪ್ರತಿಯೊಂದು ವಾಹನದಿಂದ ಟೋಲ್ ಸಂಗ್ರಹ ಮಾಡುತ್ತಾರೆ. ಆದರೆ, ಸವಾರರಿಗೆ ಮಾತ್ರ ಸರಿಯಾದ ವ್ಯವಸ್ಥೆಗಳನ್ನು ಮಾಡುತ್ತಿಲ್ಲ. ಗೀತಂ ಯೂನಿವರ್ಸಿಟಿ ಯಿಂದ ಹುಲಿಕುಂಟೆ ಟೋಲ್ ವರೆಗೆ ರಸ್ತೆಯಲ್ಲಿ ಸಾಕಷ್ಟು ಕಡೆ ಉಬ್ಬು ತಗ್ಗುಗಳಿವೆ. ಹಾಗಾಗಿ ವಾಹನಗಳು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗುತ್ತಿವೆ. ವಿಭಜಕಗಳಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ ಗಿಡಗಳು ಒಣಗುತ್ತಿವೆ. ಇರಬೇಕಾದ ಸ್ಥಳಗಳಲ್ಲಿ ಸೂಚನಾ ಫಲಕಗಳಿಲ್ಲ. ಇನ್ನೂ ಹಲವಾರು ನ್ಯೂನ್ಯತೆಗಳು ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಅನೇಕ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ( ಪ್ರವೀಣ್ ಶೆಟ್ಟಿ ಬಣ) ರವಿ ರಾಜಘಟ್ಟ ಆಕ್ರೋಶವ್ಯಕ್ತಪಡಿಸಿದ್ದಾರೆ.
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…