ಹೆದ್ದಾರಿ ಮೂಲಕ ಬೇಗ ಮನೆ, ತಲುಪಬೇಕಾದ ಸ್ಥಳ ತಲುಪುತ್ತೇವೆ ಅಂದುಕೊಂಡವರು ಆಸ್ಪತ್ರೆ ಪಾಲಾದರೆ, ಇನ್ನೂ ಕೆಲವರು ದೇವರ ಪಾದ ಸೇರುತ್ತಿದ್ದಾರೆ…. ಕೇವಲ 15 ದಿನಗಳ ಅಂತರದಲ್ಲಿ ಎರಡು ಸಾವು, 15 ಜನರಿಗೆ‌ ಗಾಯ

ಆ ಹೆದ್ದಾರಿ ರಸ್ತೆ ನಿರ್ಮಾಣ ಆಗಿ ಕೇವಲ‌ ಒಂದು ವರ್ಷ ಮಾತ್ರ ಆಗಿದೆ. ಮೊದಲು ರಸ್ತೆ ಉದ್ಘಾಟನೆ ಆಯಿತಲ್ಲಾ ಅಂತ ಸಂತೋಷದಿಂದ ಇದ್ದ ಜನರು ಈಗ ಹಿಡಿ ಶಾಪ ಹಾಕುವಂತೆ ಆಗಿದೆ. ಸುಲಭವಾಗಿ ಮನೆ ಸೇರುತ್ತೇವೆ ಎಂದು‌ ಕೊಂಡವರು ಅಪಘಾತಕ್ಕೆ ತುತ್ತಾಗಿ ಕೈಕಾಲು‌ ಮುರಿದುಕೊಂಡು, ತಲೆ‌ಬುರುಡೆ ಹೊಡೆದುಕೊಂಡು ಆಸ್ಪತ್ರೆ ಪಾಲಾದರೆ, ಇನ್ನೂ ಕೆಲವರು ದೇವರ ಪಾದ ಸೇರುತ್ತಿದ್ದಾರೆ. ಅಷ್ಟಕ್ಕೂ ಆ ಹೆದ್ದಾರಿ ರಸ್ತೆಯಲ್ಲಿ ಏನಾಗುತ್ತಿದೆ, ಎಲ್ಲಿ ಅಂತಿರಾ ಈ ಸ್ಟೋರಿ ಓದಿ………

ಹೌದು ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ ಹುಲಿಕುಂಟೆ ಟೋಲ್ ಪ್ರಾರಂಭ ಆಗಿ ಕೇವಲ ಒಂದು ವರ್ಷ ಮಾತ್ರ ಆಗಿದೆ. ಈ ರಸ್ತೆ ಮೂಲಕ ಸಂಚಾರ ಮಾಡುವ ಪ್ರತಿಯೊಂದು ವಾಹನದಿಂದ ಟೋಲ್ ಸಂಗ್ರಹ ಮಾಡುತ್ತಾರೆ. ಆದರೆ, ಸವಾರರಿಗೆ ಮಾತ್ರ ಸರಿಯಾದ ವ್ಯವಸ್ಥೆಗಳ‌ನ್ನು ಮಾಡುತ್ತಿಲ್ಲ. ಗೀತಂ ಯೂನಿವರ್ಸಿಟಿ ಯಿಂದ ಹುಲಿಕುಂಟೆ ಟೋಲ್ ವರೆಗೆ ರಸ್ತೆಯಲ್ಲಿ ಸಾಕಷ್ಟು ಕಡೆ ಉಬ್ಬು ತಗ್ಗುಗಳಿವೆ. ಹಾಗಾಗಿ ವಾಹನಗಳು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗುತ್ತಿವೆ. ವಿಭಜಕಗಳಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ ಗಿಡಗಳು ಒಣಗುತ್ತಿವೆ. ಇರಬೇಕಾದ ಸ್ಥಳಗಳಲ್ಲಿ ಸೂಚನಾ ಫಲಕಗಳಿಲ್ಲ. ಇನ್ನೂ ಹಲವಾರು ನ್ಯೂನ್ಯತೆಗಳು ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಅನೇಕ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ( ಪ್ರವೀಣ್ ಶೆಟ್ಟಿ ಬಣ) ರವಿ ರಾಜಘಟ್ಟ ಆಕ್ರೋಶವ್ಯಕ್ತಪಡಿಸಿದ್ದಾರೆ.

ಇನ್ನೂ ರಸ್ತೆಯ ಉಬ್ಬು ತಗ್ಗುಗಳು ಕಾಣದೆ ಕಳೆದ ಒಂದು ವಾರದ ಹಂತರದಲ್ಲಿ 15 ಕ್ಕೂ ಹೆಚ್ಚು ಜನರು ಕೈ ಕಾಲುಗಳನ್ನು ಮುರಿದುಕೊಂಡಿದ್ದಾರೆ. ಜೊತೆಗೆ ಇಬ್ಬರು ಪ್ರಾಣವನ್ನೂ ಬಿಟ್ಟಿದ್ದಾರೆ. ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಆದರೆ, ಹೆದ್ದಾರಿಯ ಅಧಿಕಾರಿಗಳು ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಮೈಸೂರು ರಸ್ತೆ ಸಮಸ್ಯೆ ಆದಾಗ ಇಡೀ ಸರಕಾರವೇ ಅದರ‌ ಬಗ್ಗೆ ಗಮನಹರಿಸಿತ್ತು. ಆದರೆ, ಈಗ ಇಷ್ಟು ಅಪಘಾತಗಳು ಸಂಭವಿಸುತ್ತಿವೆ. ಇಷ್ಟಾದರೂ ಯಾವುದೇ ಸೂಕ್ತ ಕ್ರಮಗಳು‌ ಆಗುತ್ತಿಲ್ಲ.‌ ಸರಿಯಾದ ಸಮಯಕ್ಕೆ ಟೋಲ್‌ನ ಆಂಬ್ಯುಲೆನ್ಸ್ ಸ್ಥಳಕ್ಕೆ ಬರುತ್ತಿಲ್ಲ. ಯಾವಾಗಲೂ ಟೋಲ್ ನ ಬಳಿಯೇ ಇರುತ್ತದೆ. ಹಾಗಾಗಿ ಅಪಘಾತ ಆದಾಗ ಖಾಸಗಿ ಆಂಬ್ಯುಲೆನ್ಸ್ ಗಳು ಸ್ಥಳಕ್ಕೆ ಬಂದು, ಉಪಚರಿಸುವ ನೆಪದಲ್ಲಿ ಬಡವರ ಜೇಬು ಖಾಲಿ ಮಾಡಿಸುತ್ತಿವೆ. ಹಾಗಾಗಿ ನಗರ ಪ್ರದೇಶದಲ್ಲಿ ಆಂಬ್ಯುಲೆನ್ಸ್ ಇರಬೇಕು ಎಂದು ಕರವೇ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ಆಗ್ರಹಿಸಿದೆ.

ಒಂದು ವೇಳೆ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಉಗ್ರ ಹೋರಾಟ ಮಾಡುವುದರ ಜೊತೆಗೆ ರಸ್ತೆ ತಡೆದು, ಟೋಲ್ ಸಂಗ್ರಹ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆ ಹೊಸ ಹೆದ್ದಾರಿ ರಸ್ತೆ ಸಾವಿನ ರಸ್ತೆಯಾಗಿ ಹೆಸರು ಮಾಡುತ್ತಿದೆ. ಇನ್ನಾದರೂ ಟೋಲ್ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆ ಸೂಕ್ತ ಕ್ರಮ ವಹಿಸಿ ಅಪಘಾತಗಳಿಗೆ ಕಡಿವಾಣ ಹಾಕುತ್ತಾರಾ ಕಾದು ನೋಡಬೇಕಿದೆ……

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 hour ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

3 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

8 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago