ಆ ಹೆದ್ದಾರಿ ರಸ್ತೆ ನಿರ್ಮಾಣ ಆಗಿ ಕೇವಲ ಒಂದು ವರ್ಷ ಮಾತ್ರ ಆಗಿದೆ. ಮೊದಲು ರಸ್ತೆ ಉದ್ಘಾಟನೆ ಆಯಿತಲ್ಲಾ ಅಂತ ಸಂತೋಷದಿಂದ ಇದ್ದ ಜನರು ಈಗ ಹಿಡಿ ಶಾಪ ಹಾಕುವಂತೆ ಆಗಿದೆ. ಸುಲಭವಾಗಿ ಮನೆ ಸೇರುತ್ತೇವೆ ಎಂದು ಕೊಂಡವರು ಅಪಘಾತಕ್ಕೆ ತುತ್ತಾಗಿ ಕೈಕಾಲು ಮುರಿದುಕೊಂಡು, ತಲೆಬುರುಡೆ ಹೊಡೆದುಕೊಂಡು ಆಸ್ಪತ್ರೆ ಪಾಲಾದರೆ, ಇನ್ನೂ ಕೆಲವರು ದೇವರ ಪಾದ ಸೇರುತ್ತಿದ್ದಾರೆ. ಅಷ್ಟಕ್ಕೂ ಆ ಹೆದ್ದಾರಿ ರಸ್ತೆಯಲ್ಲಿ ಏನಾಗುತ್ತಿದೆ, ಎಲ್ಲಿ ಅಂತಿರಾ ಈ ಸ್ಟೋರಿ ಓದಿ………
ಹೌದು ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ ಹುಲಿಕುಂಟೆ ಟೋಲ್ ಪ್ರಾರಂಭ ಆಗಿ ಕೇವಲ ಒಂದು ವರ್ಷ ಮಾತ್ರ ಆಗಿದೆ. ಈ ರಸ್ತೆ ಮೂಲಕ ಸಂಚಾರ ಮಾಡುವ ಪ್ರತಿಯೊಂದು ವಾಹನದಿಂದ ಟೋಲ್ ಸಂಗ್ರಹ ಮಾಡುತ್ತಾರೆ. ಆದರೆ, ಸವಾರರಿಗೆ ಮಾತ್ರ ಸರಿಯಾದ ವ್ಯವಸ್ಥೆಗಳನ್ನು ಮಾಡುತ್ತಿಲ್ಲ. ಗೀತಂ ಯೂನಿವರ್ಸಿಟಿ ಯಿಂದ ಹುಲಿಕುಂಟೆ ಟೋಲ್ ವರೆಗೆ ರಸ್ತೆಯಲ್ಲಿ ಸಾಕಷ್ಟು ಕಡೆ ಉಬ್ಬು ತಗ್ಗುಗಳಿವೆ. ಹಾಗಾಗಿ ವಾಹನಗಳು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗುತ್ತಿವೆ. ವಿಭಜಕಗಳಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ ಗಿಡಗಳು ಒಣಗುತ್ತಿವೆ. ಇರಬೇಕಾದ ಸ್ಥಳಗಳಲ್ಲಿ ಸೂಚನಾ ಫಲಕಗಳಿಲ್ಲ. ಇನ್ನೂ ಹಲವಾರು ನ್ಯೂನ್ಯತೆಗಳು ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಅನೇಕ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ( ಪ್ರವೀಣ್ ಶೆಟ್ಟಿ ಬಣ) ರವಿ ರಾಜಘಟ್ಟ ಆಕ್ರೋಶವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…