ಹೆದ್ದಾರಿ ಮೂಲಕ ಬೇಗ ಮನೆ, ತಲುಪಬೇಕಾದ ಸ್ಥಳ ತಲುಪುತ್ತೇವೆ ಅಂದುಕೊಂಡವರು ಆಸ್ಪತ್ರೆ ಪಾಲಾದರೆ, ಇನ್ನೂ ಕೆಲವರು ದೇವರ ಪಾದ ಸೇರುತ್ತಿದ್ದಾರೆ…. ಕೇವಲ 15 ದಿನಗಳ ಅಂತರದಲ್ಲಿ ಎರಡು ಸಾವು, 15 ಜನರಿಗೆ‌ ಗಾಯ

ಆ ಹೆದ್ದಾರಿ ರಸ್ತೆ ನಿರ್ಮಾಣ ಆಗಿ ಕೇವಲ‌ ಒಂದು ವರ್ಷ ಮಾತ್ರ ಆಗಿದೆ. ಮೊದಲು ರಸ್ತೆ ಉದ್ಘಾಟನೆ ಆಯಿತಲ್ಲಾ ಅಂತ ಸಂತೋಷದಿಂದ ಇದ್ದ ಜನರು ಈಗ ಹಿಡಿ ಶಾಪ ಹಾಕುವಂತೆ ಆಗಿದೆ. ಸುಲಭವಾಗಿ ಮನೆ ಸೇರುತ್ತೇವೆ ಎಂದು‌ ಕೊಂಡವರು ಅಪಘಾತಕ್ಕೆ ತುತ್ತಾಗಿ ಕೈಕಾಲು‌ ಮುರಿದುಕೊಂಡು, ತಲೆ‌ಬುರುಡೆ ಹೊಡೆದುಕೊಂಡು ಆಸ್ಪತ್ರೆ ಪಾಲಾದರೆ, ಇನ್ನೂ ಕೆಲವರು ದೇವರ ಪಾದ ಸೇರುತ್ತಿದ್ದಾರೆ. ಅಷ್ಟಕ್ಕೂ ಆ ಹೆದ್ದಾರಿ ರಸ್ತೆಯಲ್ಲಿ ಏನಾಗುತ್ತಿದೆ, ಎಲ್ಲಿ ಅಂತಿರಾ ಈ ಸ್ಟೋರಿ ಓದಿ………

ಹೌದು ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ ಹುಲಿಕುಂಟೆ ಟೋಲ್ ಪ್ರಾರಂಭ ಆಗಿ ಕೇವಲ ಒಂದು ವರ್ಷ ಮಾತ್ರ ಆಗಿದೆ. ಈ ರಸ್ತೆ ಮೂಲಕ ಸಂಚಾರ ಮಾಡುವ ಪ್ರತಿಯೊಂದು ವಾಹನದಿಂದ ಟೋಲ್ ಸಂಗ್ರಹ ಮಾಡುತ್ತಾರೆ. ಆದರೆ, ಸವಾರರಿಗೆ ಮಾತ್ರ ಸರಿಯಾದ ವ್ಯವಸ್ಥೆಗಳ‌ನ್ನು ಮಾಡುತ್ತಿಲ್ಲ. ಗೀತಂ ಯೂನಿವರ್ಸಿಟಿ ಯಿಂದ ಹುಲಿಕುಂಟೆ ಟೋಲ್ ವರೆಗೆ ರಸ್ತೆಯಲ್ಲಿ ಸಾಕಷ್ಟು ಕಡೆ ಉಬ್ಬು ತಗ್ಗುಗಳಿವೆ. ಹಾಗಾಗಿ ವಾಹನಗಳು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗುತ್ತಿವೆ. ವಿಭಜಕಗಳಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ ಗಿಡಗಳು ಒಣಗುತ್ತಿವೆ. ಇರಬೇಕಾದ ಸ್ಥಳಗಳಲ್ಲಿ ಸೂಚನಾ ಫಲಕಗಳಿಲ್ಲ. ಇನ್ನೂ ಹಲವಾರು ನ್ಯೂನ್ಯತೆಗಳು ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಅನೇಕ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ( ಪ್ರವೀಣ್ ಶೆಟ್ಟಿ ಬಣ) ರವಿ ರಾಜಘಟ್ಟ ಆಕ್ರೋಶವ್ಯಕ್ತಪಡಿಸಿದ್ದಾರೆ.

ಇನ್ನೂ ರಸ್ತೆಯ ಉಬ್ಬು ತಗ್ಗುಗಳು ಕಾಣದೆ ಕಳೆದ ಒಂದು ವಾರದ ಹಂತರದಲ್ಲಿ 15 ಕ್ಕೂ ಹೆಚ್ಚು ಜನರು ಕೈ ಕಾಲುಗಳನ್ನು ಮುರಿದುಕೊಂಡಿದ್ದಾರೆ. ಜೊತೆಗೆ ಇಬ್ಬರು ಪ್ರಾಣವನ್ನೂ ಬಿಟ್ಟಿದ್ದಾರೆ. ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಆದರೆ, ಹೆದ್ದಾರಿಯ ಅಧಿಕಾರಿಗಳು ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಮೈಸೂರು ರಸ್ತೆ ಸಮಸ್ಯೆ ಆದಾಗ ಇಡೀ ಸರಕಾರವೇ ಅದರ‌ ಬಗ್ಗೆ ಗಮನಹರಿಸಿತ್ತು. ಆದರೆ, ಈಗ ಇಷ್ಟು ಅಪಘಾತಗಳು ಸಂಭವಿಸುತ್ತಿವೆ. ಇಷ್ಟಾದರೂ ಯಾವುದೇ ಸೂಕ್ತ ಕ್ರಮಗಳು‌ ಆಗುತ್ತಿಲ್ಲ.‌ ಸರಿಯಾದ ಸಮಯಕ್ಕೆ ಟೋಲ್‌ನ ಆಂಬ್ಯುಲೆನ್ಸ್ ಸ್ಥಳಕ್ಕೆ ಬರುತ್ತಿಲ್ಲ. ಯಾವಾಗಲೂ ಟೋಲ್ ನ ಬಳಿಯೇ ಇರುತ್ತದೆ. ಹಾಗಾಗಿ ಅಪಘಾತ ಆದಾಗ ಖಾಸಗಿ ಆಂಬ್ಯುಲೆನ್ಸ್ ಗಳು ಸ್ಥಳಕ್ಕೆ ಬಂದು, ಉಪಚರಿಸುವ ನೆಪದಲ್ಲಿ ಬಡವರ ಜೇಬು ಖಾಲಿ ಮಾಡಿಸುತ್ತಿವೆ. ಹಾಗಾಗಿ ನಗರ ಪ್ರದೇಶದಲ್ಲಿ ಆಂಬ್ಯುಲೆನ್ಸ್ ಇರಬೇಕು ಎಂದು ಕರವೇ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ಆಗ್ರಹಿಸಿದೆ.

ಒಂದು ವೇಳೆ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಉಗ್ರ ಹೋರಾಟ ಮಾಡುವುದರ ಜೊತೆಗೆ ರಸ್ತೆ ತಡೆದು, ಟೋಲ್ ಸಂಗ್ರಹ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆ ಹೊಸ ಹೆದ್ದಾರಿ ರಸ್ತೆ ಸಾವಿನ ರಸ್ತೆಯಾಗಿ ಹೆಸರು ಮಾಡುತ್ತಿದೆ. ಇನ್ನಾದರೂ ಟೋಲ್ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆ ಸೂಕ್ತ ಕ್ರಮ ವಹಿಸಿ ಅಪಘಾತಗಳಿಗೆ ಕಡಿವಾಣ ಹಾಕುತ್ತಾರಾ ಕಾದು ನೋಡಬೇಕಿದೆ……

Ramesh Babu

Journalist

Recent Posts

ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ

ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…

10 minutes ago

ಮೇ.8ರಂದು ಜೆಡಿಎಸ್ ರಜತ ಮಹೋತ್ಸವ: ನಿಖಿಲ್ ಕುಮಾರಸ್ವಾಮಿ ಭಾಗಿ- ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ

ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…

31 minutes ago

ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…

1 hour ago

ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…

2 hours ago

ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…

2 hours ago

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

11 hours ago