ಆ ಹೆದ್ದಾರಿ ರಸ್ತೆ ನಿರ್ಮಾಣ ಆಗಿ ಕೇವಲ ಒಂದು ವರ್ಷ ಮಾತ್ರ ಆಗಿದೆ. ಮೊದಲು ರಸ್ತೆ ಉದ್ಘಾಟನೆ ಆಯಿತಲ್ಲಾ ಅಂತ ಸಂತೋಷದಿಂದ ಇದ್ದ ಜನರು ಈಗ ಹಿಡಿ ಶಾಪ ಹಾಕುವಂತೆ ಆಗಿದೆ. ಸುಲಭವಾಗಿ ಮನೆ ಸೇರುತ್ತೇವೆ ಎಂದು ಕೊಂಡವರು ಅಪಘಾತಕ್ಕೆ ತುತ್ತಾಗಿ ಕೈಕಾಲು ಮುರಿದುಕೊಂಡು, ತಲೆಬುರುಡೆ ಹೊಡೆದುಕೊಂಡು ಆಸ್ಪತ್ರೆ ಪಾಲಾದರೆ, ಇನ್ನೂ ಕೆಲವರು ದೇವರ ಪಾದ ಸೇರುತ್ತಿದ್ದಾರೆ. ಅಷ್ಟಕ್ಕೂ ಆ ಹೆದ್ದಾರಿ ರಸ್ತೆಯಲ್ಲಿ ಏನಾಗುತ್ತಿದೆ, ಎಲ್ಲಿ ಅಂತಿರಾ ಈ ಸ್ಟೋರಿ ಓದಿ………
ಹೌದು ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ ಹುಲಿಕುಂಟೆ ಟೋಲ್ ಪ್ರಾರಂಭ ಆಗಿ ಕೇವಲ ಒಂದು ವರ್ಷ ಮಾತ್ರ ಆಗಿದೆ. ಈ ರಸ್ತೆ ಮೂಲಕ ಸಂಚಾರ ಮಾಡುವ ಪ್ರತಿಯೊಂದು ವಾಹನದಿಂದ ಟೋಲ್ ಸಂಗ್ರಹ ಮಾಡುತ್ತಾರೆ. ಆದರೆ, ಸವಾರರಿಗೆ ಮಾತ್ರ ಸರಿಯಾದ ವ್ಯವಸ್ಥೆಗಳನ್ನು ಮಾಡುತ್ತಿಲ್ಲ. ಗೀತಂ ಯೂನಿವರ್ಸಿಟಿ ಯಿಂದ ಹುಲಿಕುಂಟೆ ಟೋಲ್ ವರೆಗೆ ರಸ್ತೆಯಲ್ಲಿ ಸಾಕಷ್ಟು ಕಡೆ ಉಬ್ಬು ತಗ್ಗುಗಳಿವೆ. ಹಾಗಾಗಿ ವಾಹನಗಳು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗುತ್ತಿವೆ. ವಿಭಜಕಗಳಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ ಗಿಡಗಳು ಒಣಗುತ್ತಿವೆ. ಇರಬೇಕಾದ ಸ್ಥಳಗಳಲ್ಲಿ ಸೂಚನಾ ಫಲಕಗಳಿಲ್ಲ. ಇನ್ನೂ ಹಲವಾರು ನ್ಯೂನ್ಯತೆಗಳು ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಅನೇಕ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ( ಪ್ರವೀಣ್ ಶೆಟ್ಟಿ ಬಣ) ರವಿ ರಾಜಘಟ್ಟ ಆಕ್ರೋಶವ್ಯಕ್ತಪಡಿಸಿದ್ದಾರೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…