ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು: ಅನಾಥವಾದ ನವಜಾತ ಶಿಶು…!

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯೊರ್ವಳು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಹೆರಿಗೆ ನಂತರ ತಾಯಿ ಮಗು ಆರೋಗ್ಯವಾಗಿದ್ರು. ಇನ್ನೇನು ಆಸ್ಪತ್ರೆಯಿಂದ ಇಬ್ಬರನ್ನು ಡಿಸ್ಚಾರ್ಜ್ ಮಾಡಬೇಕಿತ್ತು. ಅಷ್ಟರಲ್ಲಿ ತಾಯಿಯ ಆರೋಗ್ಯದಲ್ಲಿ ಏರುಪೇರಾಗಿ ಕೊನೆಗೆ ಚಿಕೀತ್ಸೆ ಫಲಿಸದೆ ತಾಯಿ ಸ್ಮಶಾನ ಸೇರಿದ್ರೆ… ಆಕೆಯ ನವಜಾತ ಗಂಡು ಶಿಶು ಅನಾಥವಾಗಿದೆ. ಈ ಕುರಿತು ಮನ ಕಲಕುವ ವರದಿ ಇಲ್ಲಿದೆ ಓದಿ….

ಸಾವಿನ ಮನೆ ಸೇರಿರುವ ತಾಯಿ, ತಾಯಿ ಆರೈಕೆಯಲ್ಲಿ ಇರಬೇಕಾದ ನವಜಾತ ಗಂಡು ಶಿಶು ಸಂಬಂಧಿಗಳ ಆರೈಕೆಯಲ್ಲಿ ಇರುವ ದೃಶ್ಯ ಕಂಡು ಬಂದಿದ್ದು ಚಿಕ್ಕಬಳ್ಳಾಪುರದಲ್ಲಿ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಚೌಕ್ಕರೆಡ್ಡಿ ಹಳ್ಳಿ ನಿವಾಸಿ ಅನುಶ್ರೀ, ಹೆರಿಗೆಗಾಗಿ ಚಿಕ್ಕಬಳ್ಳಾಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದಳು.. ಮಾರ್ಚ್ 4 ರಂದು ಅನುಶ್ರೀಗೆ ಸಿಜೇರಿಯನ್ ಮೂಲಕ ವೈದ್ಯರಿಂದ ಸಿಜೇರಿಯನ್ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ನಂತರ ಅನುಶ್ರೀ ಆರೋಗ್ಯವಾಗಿದ್ದಳು. ಇನ್ನೇನು ತಾಯಿ ಮಗುವನ್ನು ಡಿಸ್ಚಾರ್ಜ್ ಮಾಡಬೇಕಿತ್ತು. ಅಷ್ಟರಲ್ಲಿ ಹೆರಿಗೆಯಾಗಿ ಒಂದು ವಾರದ ನಂತರ ಅನುಶ್ರೀ ಆರೋಗ್ಯದಲ್ಲಿ ಏರುಪೇರಾಗಿದೆ.

ಇದರಿಂದ ಚಿಕ್ಕಬಳ್ಳಾಪುರ ಮಕ್ಕಳ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದರೂ ಚಿಕೀತ್ಸೆ ಫಲಕಾರಿಯಾಗದೆ ಅನುಶ್ರೀ ಮೃತಪಟ್ಟಿದ್ದಾಳೆ.

ಇನ್ನೂ ಅನುಶ್ರೀಗೆ ತೀವ್ರ ಜ್ವರ, ಲೋ ಬಿಪಿ, ಹೃದಯ ಸ್ಥಂಬನ ಸೇರಿದಂತೆ ಉಸಿರಾಟ ಸಮಸ್ಯೆ ಆರಂಭವಾಗಿತ್ತು. ಇದ್ರಿಂದ ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಿದ್ದಾರೆ. ಆದ್ರೆ ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ… ಅನುಶ್ರೀ ಮೃತಪಟ್ಟಿದ್ದು, ಅನುಶ್ರೀ ಸಾವಿನಲ್ಲಿ ವೈದ್ಯರ ಕರ್ತವ್ಯಲೋಪ, ನಿರ್ಲಕ್ಷ ಇಲ್ಲ, ಬಾಣಂತಿಗೆ ಲೋ ಬಿಪಿಯಾಗಿ ಹೃದಯ ಸ್ಥಂಬನವಾದ ಕಾರಣ ಮೃತಪಟ್ಟಿದ್ದಾಳೆ ಎಂದು ವೈದ್ಯರು ಸಮಜಾಯಿಷಿ ನೀಡಿದ್ದಾರೆ.

ಇನ್ನೂ ಇತ್ತ ತಾಯಿಯ ಎದೆ ಹಾಲು ಕುಡಿದು ಅಮ್ಮನ ಹಾರೈಕೆಯಲ್ಲಿ ಇರಬೇಕಾದ ನವಜಾತ ಗಂಡು ಮಗು… ಅಮ್ಮನ ಅಪ್ಪುಗೆ ಇಲ್ಲದೆ… ತಾಯಿಯ ನಿರೀಕ್ಷೆಯಲ್ಲಿ ಉಸಿರಾಡುವಂತಾಗಿದ್ದು ಮಾತ್ರ ವಿಪರ್ಯಾಸ.

Ramesh Babu

Journalist

Recent Posts

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

2 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

15 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

17 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

19 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

21 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

22 hours ago