ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು: ಅನಾಥವಾದ ನವಜಾತ ಶಿಶು…!

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯೊರ್ವಳು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಹೆರಿಗೆ ನಂತರ ತಾಯಿ ಮಗು ಆರೋಗ್ಯವಾಗಿದ್ರು. ಇನ್ನೇನು ಆಸ್ಪತ್ರೆಯಿಂದ ಇಬ್ಬರನ್ನು ಡಿಸ್ಚಾರ್ಜ್ ಮಾಡಬೇಕಿತ್ತು. ಅಷ್ಟರಲ್ಲಿ ತಾಯಿಯ ಆರೋಗ್ಯದಲ್ಲಿ ಏರುಪೇರಾಗಿ ಕೊನೆಗೆ ಚಿಕೀತ್ಸೆ ಫಲಿಸದೆ ತಾಯಿ ಸ್ಮಶಾನ ಸೇರಿದ್ರೆ… ಆಕೆಯ ನವಜಾತ ಗಂಡು ಶಿಶು ಅನಾಥವಾಗಿದೆ. ಈ ಕುರಿತು ಮನ ಕಲಕುವ ವರದಿ ಇಲ್ಲಿದೆ ಓದಿ….

ಸಾವಿನ ಮನೆ ಸೇರಿರುವ ತಾಯಿ, ತಾಯಿ ಆರೈಕೆಯಲ್ಲಿ ಇರಬೇಕಾದ ನವಜಾತ ಗಂಡು ಶಿಶು ಸಂಬಂಧಿಗಳ ಆರೈಕೆಯಲ್ಲಿ ಇರುವ ದೃಶ್ಯ ಕಂಡು ಬಂದಿದ್ದು ಚಿಕ್ಕಬಳ್ಳಾಪುರದಲ್ಲಿ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಚೌಕ್ಕರೆಡ್ಡಿ ಹಳ್ಳಿ ನಿವಾಸಿ ಅನುಶ್ರೀ, ಹೆರಿಗೆಗಾಗಿ ಚಿಕ್ಕಬಳ್ಳಾಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದಳು.. ಮಾರ್ಚ್ 4 ರಂದು ಅನುಶ್ರೀಗೆ ಸಿಜೇರಿಯನ್ ಮೂಲಕ ವೈದ್ಯರಿಂದ ಸಿಜೇರಿಯನ್ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ನಂತರ ಅನುಶ್ರೀ ಆರೋಗ್ಯವಾಗಿದ್ದಳು. ಇನ್ನೇನು ತಾಯಿ ಮಗುವನ್ನು ಡಿಸ್ಚಾರ್ಜ್ ಮಾಡಬೇಕಿತ್ತು. ಅಷ್ಟರಲ್ಲಿ ಹೆರಿಗೆಯಾಗಿ ಒಂದು ವಾರದ ನಂತರ ಅನುಶ್ರೀ ಆರೋಗ್ಯದಲ್ಲಿ ಏರುಪೇರಾಗಿದೆ.

ಇದರಿಂದ ಚಿಕ್ಕಬಳ್ಳಾಪುರ ಮಕ್ಕಳ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದರೂ ಚಿಕೀತ್ಸೆ ಫಲಕಾರಿಯಾಗದೆ ಅನುಶ್ರೀ ಮೃತಪಟ್ಟಿದ್ದಾಳೆ.

ಇನ್ನೂ ಅನುಶ್ರೀಗೆ ತೀವ್ರ ಜ್ವರ, ಲೋ ಬಿಪಿ, ಹೃದಯ ಸ್ಥಂಬನ ಸೇರಿದಂತೆ ಉಸಿರಾಟ ಸಮಸ್ಯೆ ಆರಂಭವಾಗಿತ್ತು. ಇದ್ರಿಂದ ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಿದ್ದಾರೆ. ಆದ್ರೆ ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ… ಅನುಶ್ರೀ ಮೃತಪಟ್ಟಿದ್ದು, ಅನುಶ್ರೀ ಸಾವಿನಲ್ಲಿ ವೈದ್ಯರ ಕರ್ತವ್ಯಲೋಪ, ನಿರ್ಲಕ್ಷ ಇಲ್ಲ, ಬಾಣಂತಿಗೆ ಲೋ ಬಿಪಿಯಾಗಿ ಹೃದಯ ಸ್ಥಂಬನವಾದ ಕಾರಣ ಮೃತಪಟ್ಟಿದ್ದಾಳೆ ಎಂದು ವೈದ್ಯರು ಸಮಜಾಯಿಷಿ ನೀಡಿದ್ದಾರೆ.

ಇನ್ನೂ ಇತ್ತ ತಾಯಿಯ ಎದೆ ಹಾಲು ಕುಡಿದು ಅಮ್ಮನ ಹಾರೈಕೆಯಲ್ಲಿ ಇರಬೇಕಾದ ನವಜಾತ ಗಂಡು ಮಗು… ಅಮ್ಮನ ಅಪ್ಪುಗೆ ಇಲ್ಲದೆ… ತಾಯಿಯ ನಿರೀಕ್ಷೆಯಲ್ಲಿ ಉಸಿರಾಡುವಂತಾಗಿದ್ದು ಮಾತ್ರ ವಿಪರ್ಯಾಸ.

Ramesh Babu

Journalist

Recent Posts

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

2 hours ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

2 hours ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

17 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

22 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

22 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

1 day ago