ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು: ಅನಾಥವಾದ ನವಜಾತ ಶಿಶು…!

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯೊರ್ವಳು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಹೆರಿಗೆ ನಂತರ ತಾಯಿ ಮಗು ಆರೋಗ್ಯವಾಗಿದ್ರು. ಇನ್ನೇನು ಆಸ್ಪತ್ರೆಯಿಂದ ಇಬ್ಬರನ್ನು ಡಿಸ್ಚಾರ್ಜ್ ಮಾಡಬೇಕಿತ್ತು. ಅಷ್ಟರಲ್ಲಿ ತಾಯಿಯ ಆರೋಗ್ಯದಲ್ಲಿ ಏರುಪೇರಾಗಿ ಕೊನೆಗೆ ಚಿಕೀತ್ಸೆ ಫಲಿಸದೆ ತಾಯಿ ಸ್ಮಶಾನ ಸೇರಿದ್ರೆ… ಆಕೆಯ ನವಜಾತ ಗಂಡು ಶಿಶು ಅನಾಥವಾಗಿದೆ. ಈ ಕುರಿತು ಮನ ಕಲಕುವ ವರದಿ ಇಲ್ಲಿದೆ ಓದಿ….

ಸಾವಿನ ಮನೆ ಸೇರಿರುವ ತಾಯಿ, ತಾಯಿ ಆರೈಕೆಯಲ್ಲಿ ಇರಬೇಕಾದ ನವಜಾತ ಗಂಡು ಶಿಶು ಸಂಬಂಧಿಗಳ ಆರೈಕೆಯಲ್ಲಿ ಇರುವ ದೃಶ್ಯ ಕಂಡು ಬಂದಿದ್ದು ಚಿಕ್ಕಬಳ್ಳಾಪುರದಲ್ಲಿ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಚೌಕ್ಕರೆಡ್ಡಿ ಹಳ್ಳಿ ನಿವಾಸಿ ಅನುಶ್ರೀ, ಹೆರಿಗೆಗಾಗಿ ಚಿಕ್ಕಬಳ್ಳಾಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದಳು.. ಮಾರ್ಚ್ 4 ರಂದು ಅನುಶ್ರೀಗೆ ಸಿಜೇರಿಯನ್ ಮೂಲಕ ವೈದ್ಯರಿಂದ ಸಿಜೇರಿಯನ್ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ನಂತರ ಅನುಶ್ರೀ ಆರೋಗ್ಯವಾಗಿದ್ದಳು. ಇನ್ನೇನು ತಾಯಿ ಮಗುವನ್ನು ಡಿಸ್ಚಾರ್ಜ್ ಮಾಡಬೇಕಿತ್ತು. ಅಷ್ಟರಲ್ಲಿ ಹೆರಿಗೆಯಾಗಿ ಒಂದು ವಾರದ ನಂತರ ಅನುಶ್ರೀ ಆರೋಗ್ಯದಲ್ಲಿ ಏರುಪೇರಾಗಿದೆ.

ಇದರಿಂದ ಚಿಕ್ಕಬಳ್ಳಾಪುರ ಮಕ್ಕಳ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದರೂ ಚಿಕೀತ್ಸೆ ಫಲಕಾರಿಯಾಗದೆ ಅನುಶ್ರೀ ಮೃತಪಟ್ಟಿದ್ದಾಳೆ.

ಇನ್ನೂ ಅನುಶ್ರೀಗೆ ತೀವ್ರ ಜ್ವರ, ಲೋ ಬಿಪಿ, ಹೃದಯ ಸ್ಥಂಬನ ಸೇರಿದಂತೆ ಉಸಿರಾಟ ಸಮಸ್ಯೆ ಆರಂಭವಾಗಿತ್ತು. ಇದ್ರಿಂದ ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಿದ್ದಾರೆ. ಆದ್ರೆ ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ… ಅನುಶ್ರೀ ಮೃತಪಟ್ಟಿದ್ದು, ಅನುಶ್ರೀ ಸಾವಿನಲ್ಲಿ ವೈದ್ಯರ ಕರ್ತವ್ಯಲೋಪ, ನಿರ್ಲಕ್ಷ ಇಲ್ಲ, ಬಾಣಂತಿಗೆ ಲೋ ಬಿಪಿಯಾಗಿ ಹೃದಯ ಸ್ಥಂಬನವಾದ ಕಾರಣ ಮೃತಪಟ್ಟಿದ್ದಾಳೆ ಎಂದು ವೈದ್ಯರು ಸಮಜಾಯಿಷಿ ನೀಡಿದ್ದಾರೆ.

ಇನ್ನೂ ಇತ್ತ ತಾಯಿಯ ಎದೆ ಹಾಲು ಕುಡಿದು ಅಮ್ಮನ ಹಾರೈಕೆಯಲ್ಲಿ ಇರಬೇಕಾದ ನವಜಾತ ಗಂಡು ಮಗು… ಅಮ್ಮನ ಅಪ್ಪುಗೆ ಇಲ್ಲದೆ… ತಾಯಿಯ ನಿರೀಕ್ಷೆಯಲ್ಲಿ ಉಸಿರಾಡುವಂತಾಗಿದ್ದು ಮಾತ್ರ ವಿಪರ್ಯಾಸ.

Ramesh Babu

Journalist

Recent Posts

ಸ್ಲೋಚ್ ಕ್ಯಾಪ್ ಗೆ ವಿದಾಯ: ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸಿ ಮಿಂಚಿದ ಬೆಂ ಗ್ರಾ ಜಿಲ್ಲಾ ಪೊಲೀಸ್ ಸಿಬ್ಬಂದಿ

1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…

11 hours ago

ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…

11 hours ago

ಜ.1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲೈಟ್ ಕಡ್ಡಾಯ – ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಡಿವೈಎಸ್ಪಿ ಪಾಂಡುರಂಗ

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

14 hours ago

ಹಿಟ್ & ರನ್: ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು: ಸಿಮೆಂಟ್ ಬಲ್ಕರ್ ಪರಾರಿ

ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…

17 hours ago

“ಕುವೆಂಪು”….. ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……

ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…

23 hours ago

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

2 days ago