ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು: ಅನಾಥವಾದ ನವಜಾತ ಶಿಶು…!

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯೊರ್ವಳು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಹೆರಿಗೆ ನಂತರ ತಾಯಿ ಮಗು ಆರೋಗ್ಯವಾಗಿದ್ರು. ಇನ್ನೇನು ಆಸ್ಪತ್ರೆಯಿಂದ ಇಬ್ಬರನ್ನು ಡಿಸ್ಚಾರ್ಜ್ ಮಾಡಬೇಕಿತ್ತು. ಅಷ್ಟರಲ್ಲಿ ತಾಯಿಯ ಆರೋಗ್ಯದಲ್ಲಿ ಏರುಪೇರಾಗಿ ಕೊನೆಗೆ ಚಿಕೀತ್ಸೆ ಫಲಿಸದೆ ತಾಯಿ ಸ್ಮಶಾನ ಸೇರಿದ್ರೆ… ಆಕೆಯ ನವಜಾತ ಗಂಡು ಶಿಶು ಅನಾಥವಾಗಿದೆ. ಈ ಕುರಿತು ಮನ ಕಲಕುವ ವರದಿ ಇಲ್ಲಿದೆ ಓದಿ….

ಸಾವಿನ ಮನೆ ಸೇರಿರುವ ತಾಯಿ, ತಾಯಿ ಆರೈಕೆಯಲ್ಲಿ ಇರಬೇಕಾದ ನವಜಾತ ಗಂಡು ಶಿಶು ಸಂಬಂಧಿಗಳ ಆರೈಕೆಯಲ್ಲಿ ಇರುವ ದೃಶ್ಯ ಕಂಡು ಬಂದಿದ್ದು ಚಿಕ್ಕಬಳ್ಳಾಪುರದಲ್ಲಿ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಚೌಕ್ಕರೆಡ್ಡಿ ಹಳ್ಳಿ ನಿವಾಸಿ ಅನುಶ್ರೀ, ಹೆರಿಗೆಗಾಗಿ ಚಿಕ್ಕಬಳ್ಳಾಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದಳು.. ಮಾರ್ಚ್ 4 ರಂದು ಅನುಶ್ರೀಗೆ ಸಿಜೇರಿಯನ್ ಮೂಲಕ ವೈದ್ಯರಿಂದ ಸಿಜೇರಿಯನ್ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ನಂತರ ಅನುಶ್ರೀ ಆರೋಗ್ಯವಾಗಿದ್ದಳು. ಇನ್ನೇನು ತಾಯಿ ಮಗುವನ್ನು ಡಿಸ್ಚಾರ್ಜ್ ಮಾಡಬೇಕಿತ್ತು. ಅಷ್ಟರಲ್ಲಿ ಹೆರಿಗೆಯಾಗಿ ಒಂದು ವಾರದ ನಂತರ ಅನುಶ್ರೀ ಆರೋಗ್ಯದಲ್ಲಿ ಏರುಪೇರಾಗಿದೆ.

ಇದರಿಂದ ಚಿಕ್ಕಬಳ್ಳಾಪುರ ಮಕ್ಕಳ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದರೂ ಚಿಕೀತ್ಸೆ ಫಲಕಾರಿಯಾಗದೆ ಅನುಶ್ರೀ ಮೃತಪಟ್ಟಿದ್ದಾಳೆ.

ಇನ್ನೂ ಅನುಶ್ರೀಗೆ ತೀವ್ರ ಜ್ವರ, ಲೋ ಬಿಪಿ, ಹೃದಯ ಸ್ಥಂಬನ ಸೇರಿದಂತೆ ಉಸಿರಾಟ ಸಮಸ್ಯೆ ಆರಂಭವಾಗಿತ್ತು. ಇದ್ರಿಂದ ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಿದ್ದಾರೆ. ಆದ್ರೆ ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ… ಅನುಶ್ರೀ ಮೃತಪಟ್ಟಿದ್ದು, ಅನುಶ್ರೀ ಸಾವಿನಲ್ಲಿ ವೈದ್ಯರ ಕರ್ತವ್ಯಲೋಪ, ನಿರ್ಲಕ್ಷ ಇಲ್ಲ, ಬಾಣಂತಿಗೆ ಲೋ ಬಿಪಿಯಾಗಿ ಹೃದಯ ಸ್ಥಂಬನವಾದ ಕಾರಣ ಮೃತಪಟ್ಟಿದ್ದಾಳೆ ಎಂದು ವೈದ್ಯರು ಸಮಜಾಯಿಷಿ ನೀಡಿದ್ದಾರೆ.

ಇನ್ನೂ ಇತ್ತ ತಾಯಿಯ ಎದೆ ಹಾಲು ಕುಡಿದು ಅಮ್ಮನ ಹಾರೈಕೆಯಲ್ಲಿ ಇರಬೇಕಾದ ನವಜಾತ ಗಂಡು ಮಗು… ಅಮ್ಮನ ಅಪ್ಪುಗೆ ಇಲ್ಲದೆ… ತಾಯಿಯ ನಿರೀಕ್ಷೆಯಲ್ಲಿ ಉಸಿರಾಡುವಂತಾಗಿದ್ದು ಮಾತ್ರ ವಿಪರ್ಯಾಸ.

Ramesh Babu

Journalist

Recent Posts

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

31 minutes ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

5 hours ago

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

10 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

21 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

1 day ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago