Categories: ಹಾಸನ

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.

ವೈದ್ಯರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಆರೋಪಿಸಿ ಮೃತಳ ಸಂಬಂಧಿಕರು ಆಸ್ಪತ್ರೆಯ ಮುಂದೆ ಪ್ರತಿಭ*ನೆ ನಡೆಸಿದ್ದಾರೆ.

​ಘಟನೆಯ ವಿವರ:

​ಹಾಸನ ತಾಲ್ಲೂಕಿನ ಹನುಮನಹಳ್ಳಿ ನಿವಾಸಿ, ಕೆ.ಆರ್. ಪೇಟೆ ಸಮೀಪದ ಚಿಕ್ಕಗಾಡೆನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿ ಕೃತಿ (30) ಮೃ*ಪಟ್ಟ ದುರ್ದೈವಿ.

ಇವರು ಕೆ.ಆರ್. ಪೇಟೆ ಡಿಪೋದಲ್ಲಿ ಬಸ್ ಚಾಲಕರಾಗಿರುವ ಪುನೀತ್ ಅವರ ಪತ್ನಿ. ಫೆಬ್ರವರಿ 22ರಂದು ಹೆರಿಗೆಗಾಗಿ ‘ಕೃತಿ’ ಅವರನ್ನು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸೇರಿದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದು ಅವರು ಸುಸೂತ್ರವಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಹೆರಿಗೆಯ ನಂತರ ‘ಕೃತಿ’ ಅವರ ಆರೋಗ್ಯ ಏಕಾಏಕಿ ಕ್ಷೀಣಿಸಿದೆ.

​ಕುಟುಂಬಸ್ಥರ ಗ*ಭೀರ ಆರೋಪ:

​ಕೃತಿ ಅವರ ಸ್ಥಿತಿ ಹದಗೆಟ್ಟಾಗ ತಕ್ಷಣ ರಕ್ತದ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದರು. ಕುಟುಂಬಸ್ಥರು ಕೂಡಲೇ ರಕ್ತದ ವ್ಯವಸ್ಥೆ ಮಾಡಿದ್ದರೂ ಸಹ, ವೈದ್ಯರು ಸಕಾಲದಲ್ಲಿ ಸ್ಪಂದಿಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂಬುದು ಪತಿ ಪುನೀತ್ ಅವರ ದೂರು. ​”ಪ್ರಸೂತಿ ತಜ್ಞೆ ಡಾ. ಸುಮಾ ಅವರೇ ಹೆರಿಗೆ ಮಾಡಿಸಿದ್ದರು. ಆದರೆ ನಂತರದ ಚಿಕಿ*ತ್ಸೆಯಲ್ಲಿ ವಿಳಂಬ ಮಾಡಲಾಯಿತು. ಪರಿಸ್ಥಿತಿ ಕೈಮೀರಿದಾಗ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದರು. ಆದರೆ ಮಾರ್ಗಮಧ್ಯೆಯೇ ‘ ಕೃತಿ ‘ ಪ್ರಾಣ ಬಿಟ್ಟಿದ್ದಾರೆ,” ಎಂದು ಕುಟುಂಬಸ್ಥರು ಆಕ್ರೋ*ಶ ವ್ಯಕ್ತಪಡಿಸಿದ್ದಾರೆ.

​ಪ್ರತಿಭ*ನೆ ಮತ್ತು ಪ್ರಕರಣ ದಾಖಲು:

​ತಾಯಿಯ ಸಾವಿನಿಂದ ಆಘಾ*ತಕ್ಕೊಳಗಾದ ಸಂಬಂಧಿಕರು ಆಸ್ಪತ್ರೆಯ ಮುಂದೆ ಜಮಾಯಿಸಿ, ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭ*ನೆ ನಡೆಸಿದರು. ಸದ್ಯ ನವಜಾತ ಹೆಣ್ಣು ಮಗು ಹಿಮ್ಸ್‌ನ ತೀವ್ರ ನಿಗಾ ಘಟಕದಲ್ಲಿ (NICU) ಚಿಕಿ*ತ್ಸೆ ಪಡೆಯುತ್ತಿದ್ದು, ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

​ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

12 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

17 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago