Oplus_0
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.
ವೈದ್ಯರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಆರೋಪಿಸಿ ಮೃತಳ ಸಂಬಂಧಿಕರು ಆಸ್ಪತ್ರೆಯ ಮುಂದೆ ಪ್ರತಿಭ*ನೆ ನಡೆಸಿದ್ದಾರೆ.
ಘಟನೆಯ ವಿವರ:
ಹಾಸನ ತಾಲ್ಲೂಕಿನ ಹನುಮನಹಳ್ಳಿ ನಿವಾಸಿ, ಕೆ.ಆರ್. ಪೇಟೆ ಸಮೀಪದ ಚಿಕ್ಕಗಾಡೆನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿ ಕೃತಿ (30) ಮೃ*ಪಟ್ಟ ದುರ್ದೈವಿ.
ಇವರು ಕೆ.ಆರ್. ಪೇಟೆ ಡಿಪೋದಲ್ಲಿ ಬಸ್ ಚಾಲಕರಾಗಿರುವ ಪುನೀತ್ ಅವರ ಪತ್ನಿ. ಫೆಬ್ರವರಿ 22ರಂದು ಹೆರಿಗೆಗಾಗಿ ‘ಕೃತಿ’ ಅವರನ್ನು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸೇರಿದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದು ಅವರು ಸುಸೂತ್ರವಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಹೆರಿಗೆಯ ನಂತರ ‘ಕೃತಿ’ ಅವರ ಆರೋಗ್ಯ ಏಕಾಏಕಿ ಕ್ಷೀಣಿಸಿದೆ.
ಕುಟುಂಬಸ್ಥರ ಗ*ಭೀರ ಆರೋಪ:
ಕೃತಿ ಅವರ ಸ್ಥಿತಿ ಹದಗೆಟ್ಟಾಗ ತಕ್ಷಣ ರಕ್ತದ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದರು. ಕುಟುಂಬಸ್ಥರು ಕೂಡಲೇ ರಕ್ತದ ವ್ಯವಸ್ಥೆ ಮಾಡಿದ್ದರೂ ಸಹ, ವೈದ್ಯರು ಸಕಾಲದಲ್ಲಿ ಸ್ಪಂದಿಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂಬುದು ಪತಿ ಪುನೀತ್ ಅವರ ದೂರು. ”ಪ್ರಸೂತಿ ತಜ್ಞೆ ಡಾ. ಸುಮಾ ಅವರೇ ಹೆರಿಗೆ ಮಾಡಿಸಿದ್ದರು. ಆದರೆ ನಂತರದ ಚಿಕಿ*ತ್ಸೆಯಲ್ಲಿ ವಿಳಂಬ ಮಾಡಲಾಯಿತು. ಪರಿಸ್ಥಿತಿ ಕೈಮೀರಿದಾಗ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದರು. ಆದರೆ ಮಾರ್ಗಮಧ್ಯೆಯೇ ‘ ಕೃತಿ ‘ ಪ್ರಾಣ ಬಿಟ್ಟಿದ್ದಾರೆ,” ಎಂದು ಕುಟುಂಬಸ್ಥರು ಆಕ್ರೋ*ಶ ವ್ಯಕ್ತಪಡಿಸಿದ್ದಾರೆ.
ಪ್ರತಿಭ*ನೆ ಮತ್ತು ಪ್ರಕರಣ ದಾಖಲು:
ತಾಯಿಯ ಸಾವಿನಿಂದ ಆಘಾ*ತಕ್ಕೊಳಗಾದ ಸಂಬಂಧಿಕರು ಆಸ್ಪತ್ರೆಯ ಮುಂದೆ ಜಮಾಯಿಸಿ, ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭ*ನೆ ನಡೆಸಿದರು. ಸದ್ಯ ನವಜಾತ ಹೆಣ್ಣು ಮಗು ಹಿಮ್ಸ್ನ ತೀವ್ರ ನಿಗಾ ಘಟಕದಲ್ಲಿ (NICU) ಚಿಕಿ*ತ್ಸೆ ಪಡೆಯುತ್ತಿದ್ದು, ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…