ಹೆಲ್ಮೆಟ್ ಧರಿಸದಿದ್ದರೆ ಪೊಲೀಸರಿಗೂ ಫೈನ್ ಗ್ಯಾರೆಂಟಿ- ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಕೆ

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ ನಿಮ್ಮ ಜೀವ ನೀವೇ ರಕ್ಷಣೆ ಮಾಡಿಕೊಳ್ಳಬೇಕು. ಇತ್ತೀಚಿಗೆ ಹೆಲ್ಮೆಟ್‌ ಇಲ್ಲದ ಕಾರಣ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಹಲವು ಸಾವು-ನೋವುಗಳು ಸಂಭವಿಸಿವೆ. ಈ ಬಗ್ಗೆ ಜಾಗೃತರಾಗಿರಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಸಿದರು.

ದೊಡ್ಡಬಳ್ಳಾಪುರ ನಗರ ಪೊಲೀಸ್ ಇಲಾಖೆ ಮತ್ತು   ಐಸಿಐಸಿಐ ಹಾಗೂ ಸಿನರ್ಜಿ ಇನ್ಸುಟ್ಯೂಟ್ ಆಫ್ ಟ್ರೇಡ್ ಅಂಡ್ ಕಾಮರ್ಸ್ ಲಾಂಬರ್ಡ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗ ಪೊಲೀಸ್ ಠಾಣೆಗಳ ಎಲ್ಲಾ ಸಿಬ್ಬಂದಿಗೆ ಮತ್ತು ಅವರ ಮಕ್ಕಳಿಗೆ ಇಂದು ಹೆಲ್ಮೆಟ್ ವಿತರಣಾ ಕಾರ್ಯಕ್ರಮವನ್ನು ನಗರ ಪೊಲೀಸ್ ಠಾಣೆ ಆವರಣದಲ್ಲಿ ನಡೆಯಿತು.‌ ಈ ವೇಳೆ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ವಿತರಿಸಿ‌ ಮಾತನಾಡಿದ ಅವರು, ಬೈಕ್ ಚಾಲನೆ ಮಾಡುವಾಗ ಪೊಲೀಸರು ಮೊದಲು ಹೆಲ್ಮೆಟ್ ಧರಿಸಿ ಇತರೆ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವಂತೆ ಪ್ರೇರಣೆ ನೀಡಬೇಕು ಎಂದರು.

ಪ್ರತಿಯೊಬ್ಬರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕು. ನಾವು ಪೊಲೀಸೋರು ನಮಗೆ ಯಾರು ಏನು ಕೇಳೋದಿಲ್ಲ, ಫೈನ್ ಹಾಕೋದಿಲ್ಲ ಎಂದು ತಾತ್ಸಾರ ಮಾಡಬಾರದು. ಅಪಘಾತಕ್ಕೆ ಪೊಲೀಸು, ಗಂಡು, ಹೆಣ್ಣು, ಅಧಿಕಾರಿ ಎಂದು ಗೊತ್ತಿಲ್ಲ ಆದ್ದರಿಂದ ಹೆಲ್ಮೆಟ್ ಧರಿಸಿ ಬೈಕ್ ಚಾಲನೆ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಪ್ರತಿ ತಿಂಗಳು 50-60% ಅಪಘಾತ ಸಂಭವಿಸುತ್ತಿದೆ. ಪ್ರತಿದಿನ ಎರಡು ಅಪಘಾತ ಪ್ರಕರಣಗಳು ದಾಖಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಐಸಿಐಸಿಐ ಹಾಗೂ ಸಿನರ್ಜಿ ಇನ್ಸುಟ್ಯೂಟ್ ಆಫ್ ಟ್ರೇಡ್ ಅಂಡ್ವಕಾಮರ್ಸ್ ಲಾಂಬರ್ಡ್ ತರಬೇತಿದಾರರಾದ ಸುಪ್ರಿಯ ಸುಭಾಷ್ ಅವರು ಹೆಲ್ಮೆಟ್ ಧರಿಸುವ‌ ಕುರಿತು ತರಬೇತಿ ನೀಡಿದರು.

ಈ ವೇಳೆ ಎಎಸ್ಪಿ ನಾಗರಾಜು ಕೆ.ಎಸ್.ಡಿ.ವೈ.ಎಸ್.ಪಿ ರವಿ, ನಗರ ಪೊಲೀಸ್‌ ಠಾಣಾ ಇನ್ಸ್ಪೆಕ್ಟರ್ ದಯಾನಂದ್ ಹಾಗೂ ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರ್ ಸಾದಿಕ್ ಪಾಷ ಸೇರಿದಂತೆ ವಿವಿಧ ಠಾಣೆಗಳ ಇನ್ಸ್ಪೆಕ್ಟರ್,  ಪೋಲೀಸ್ ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

12 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

20 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

23 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

23 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago