ಹೆಲ್ಮೆಟ್ ಧರಿಸದಿದ್ದರೆ ಪೊಲೀಸರಿಗೂ ಫೈನ್ ಗ್ಯಾರೆಂಟಿ- ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಕೆ

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ ನಿಮ್ಮ ಜೀವ ನೀವೇ ರಕ್ಷಣೆ ಮಾಡಿಕೊಳ್ಳಬೇಕು. ಇತ್ತೀಚಿಗೆ ಹೆಲ್ಮೆಟ್‌ ಇಲ್ಲದ ಕಾರಣ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಹಲವು ಸಾವು-ನೋವುಗಳು ಸಂಭವಿಸಿವೆ. ಈ ಬಗ್ಗೆ ಜಾಗೃತರಾಗಿರಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಸಿದರು.

ದೊಡ್ಡಬಳ್ಳಾಪುರ ನಗರ ಪೊಲೀಸ್ ಇಲಾಖೆ ಮತ್ತು   ಐಸಿಐಸಿಐ ಹಾಗೂ ಸಿನರ್ಜಿ ಇನ್ಸುಟ್ಯೂಟ್ ಆಫ್ ಟ್ರೇಡ್ ಅಂಡ್ ಕಾಮರ್ಸ್ ಲಾಂಬರ್ಡ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗ ಪೊಲೀಸ್ ಠಾಣೆಗಳ ಎಲ್ಲಾ ಸಿಬ್ಬಂದಿಗೆ ಮತ್ತು ಅವರ ಮಕ್ಕಳಿಗೆ ಇಂದು ಹೆಲ್ಮೆಟ್ ವಿತರಣಾ ಕಾರ್ಯಕ್ರಮವನ್ನು ನಗರ ಪೊಲೀಸ್ ಠಾಣೆ ಆವರಣದಲ್ಲಿ ನಡೆಯಿತು.‌ ಈ ವೇಳೆ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ವಿತರಿಸಿ‌ ಮಾತನಾಡಿದ ಅವರು, ಬೈಕ್ ಚಾಲನೆ ಮಾಡುವಾಗ ಪೊಲೀಸರು ಮೊದಲು ಹೆಲ್ಮೆಟ್ ಧರಿಸಿ ಇತರೆ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವಂತೆ ಪ್ರೇರಣೆ ನೀಡಬೇಕು ಎಂದರು.

ಪ್ರತಿಯೊಬ್ಬರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕು. ನಾವು ಪೊಲೀಸೋರು ನಮಗೆ ಯಾರು ಏನು ಕೇಳೋದಿಲ್ಲ, ಫೈನ್ ಹಾಕೋದಿಲ್ಲ ಎಂದು ತಾತ್ಸಾರ ಮಾಡಬಾರದು. ಅಪಘಾತಕ್ಕೆ ಪೊಲೀಸು, ಗಂಡು, ಹೆಣ್ಣು, ಅಧಿಕಾರಿ ಎಂದು ಗೊತ್ತಿಲ್ಲ ಆದ್ದರಿಂದ ಹೆಲ್ಮೆಟ್ ಧರಿಸಿ ಬೈಕ್ ಚಾಲನೆ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಪ್ರತಿ ತಿಂಗಳು 50-60% ಅಪಘಾತ ಸಂಭವಿಸುತ್ತಿದೆ. ಪ್ರತಿದಿನ ಎರಡು ಅಪಘಾತ ಪ್ರಕರಣಗಳು ದಾಖಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಐಸಿಐಸಿಐ ಹಾಗೂ ಸಿನರ್ಜಿ ಇನ್ಸುಟ್ಯೂಟ್ ಆಫ್ ಟ್ರೇಡ್ ಅಂಡ್ವಕಾಮರ್ಸ್ ಲಾಂಬರ್ಡ್ ತರಬೇತಿದಾರರಾದ ಸುಪ್ರಿಯ ಸುಭಾಷ್ ಅವರು ಹೆಲ್ಮೆಟ್ ಧರಿಸುವ‌ ಕುರಿತು ತರಬೇತಿ ನೀಡಿದರು.

ಈ ವೇಳೆ ಎಎಸ್ಪಿ ನಾಗರಾಜು ಕೆ.ಎಸ್.ಡಿ.ವೈ.ಎಸ್.ಪಿ ರವಿ, ನಗರ ಪೊಲೀಸ್‌ ಠಾಣಾ ಇನ್ಸ್ಪೆಕ್ಟರ್ ದಯಾನಂದ್ ಹಾಗೂ ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರ್ ಸಾದಿಕ್ ಪಾಷ ಸೇರಿದಂತೆ ವಿವಿಧ ಠಾಣೆಗಳ ಇನ್ಸ್ಪೆಕ್ಟರ್,  ಪೋಲೀಸ್ ಸಿಬ್ಬಂದಿ ಇದ್ದರು.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

9 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

9 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago