ಹೆಲ್ಮೆಟ್ ಧರಿಸದಿದ್ದರೆ ಪೊಲೀಸರಿಗೂ ಫೈನ್ ಗ್ಯಾರೆಂಟಿ- ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಕೆ

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ ನಿಮ್ಮ ಜೀವ ನೀವೇ ರಕ್ಷಣೆ ಮಾಡಿಕೊಳ್ಳಬೇಕು. ಇತ್ತೀಚಿಗೆ ಹೆಲ್ಮೆಟ್‌ ಇಲ್ಲದ ಕಾರಣ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಹಲವು ಸಾವು-ನೋವುಗಳು ಸಂಭವಿಸಿವೆ. ಈ ಬಗ್ಗೆ ಜಾಗೃತರಾಗಿರಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಸಿದರು.

ದೊಡ್ಡಬಳ್ಳಾಪುರ ನಗರ ಪೊಲೀಸ್ ಇಲಾಖೆ ಮತ್ತು   ಐಸಿಐಸಿಐ ಹಾಗೂ ಸಿನರ್ಜಿ ಇನ್ಸುಟ್ಯೂಟ್ ಆಫ್ ಟ್ರೇಡ್ ಅಂಡ್ ಕಾಮರ್ಸ್ ಲಾಂಬರ್ಡ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗ ಪೊಲೀಸ್ ಠಾಣೆಗಳ ಎಲ್ಲಾ ಸಿಬ್ಬಂದಿಗೆ ಮತ್ತು ಅವರ ಮಕ್ಕಳಿಗೆ ಇಂದು ಹೆಲ್ಮೆಟ್ ವಿತರಣಾ ಕಾರ್ಯಕ್ರಮವನ್ನು ನಗರ ಪೊಲೀಸ್ ಠಾಣೆ ಆವರಣದಲ್ಲಿ ನಡೆಯಿತು.‌ ಈ ವೇಳೆ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ವಿತರಿಸಿ‌ ಮಾತನಾಡಿದ ಅವರು, ಬೈಕ್ ಚಾಲನೆ ಮಾಡುವಾಗ ಪೊಲೀಸರು ಮೊದಲು ಹೆಲ್ಮೆಟ್ ಧರಿಸಿ ಇತರೆ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವಂತೆ ಪ್ರೇರಣೆ ನೀಡಬೇಕು ಎಂದರು.

ಪ್ರತಿಯೊಬ್ಬರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕು. ನಾವು ಪೊಲೀಸೋರು ನಮಗೆ ಯಾರು ಏನು ಕೇಳೋದಿಲ್ಲ, ಫೈನ್ ಹಾಕೋದಿಲ್ಲ ಎಂದು ತಾತ್ಸಾರ ಮಾಡಬಾರದು. ಅಪಘಾತಕ್ಕೆ ಪೊಲೀಸು, ಗಂಡು, ಹೆಣ್ಣು, ಅಧಿಕಾರಿ ಎಂದು ಗೊತ್ತಿಲ್ಲ ಆದ್ದರಿಂದ ಹೆಲ್ಮೆಟ್ ಧರಿಸಿ ಬೈಕ್ ಚಾಲನೆ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಪ್ರತಿ ತಿಂಗಳು 50-60% ಅಪಘಾತ ಸಂಭವಿಸುತ್ತಿದೆ. ಪ್ರತಿದಿನ ಎರಡು ಅಪಘಾತ ಪ್ರಕರಣಗಳು ದಾಖಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಐಸಿಐಸಿಐ ಹಾಗೂ ಸಿನರ್ಜಿ ಇನ್ಸುಟ್ಯೂಟ್ ಆಫ್ ಟ್ರೇಡ್ ಅಂಡ್ವಕಾಮರ್ಸ್ ಲಾಂಬರ್ಡ್ ತರಬೇತಿದಾರರಾದ ಸುಪ್ರಿಯ ಸುಭಾಷ್ ಅವರು ಹೆಲ್ಮೆಟ್ ಧರಿಸುವ‌ ಕುರಿತು ತರಬೇತಿ ನೀಡಿದರು.

ಈ ವೇಳೆ ಎಎಸ್ಪಿ ನಾಗರಾಜು ಕೆ.ಎಸ್.ಡಿ.ವೈ.ಎಸ್.ಪಿ ರವಿ, ನಗರ ಪೊಲೀಸ್‌ ಠಾಣಾ ಇನ್ಸ್ಪೆಕ್ಟರ್ ದಯಾನಂದ್ ಹಾಗೂ ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರ್ ಸಾದಿಕ್ ಪಾಷ ಸೇರಿದಂತೆ ವಿವಿಧ ಠಾಣೆಗಳ ಇನ್ಸ್ಪೆಕ್ಟರ್,  ಪೋಲೀಸ್ ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

3 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

15 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

17 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

20 hours ago