ಹೆಲ್ಮೆಟ್ ಧರಿಸದಿದ್ದರೆ ಪೊಲೀಸರಿಗೂ ಫೈನ್ ಗ್ಯಾರೆಂಟಿ- ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಕೆ

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ ನಿಮ್ಮ ಜೀವ ನೀವೇ ರಕ್ಷಣೆ ಮಾಡಿಕೊಳ್ಳಬೇಕು. ಇತ್ತೀಚಿಗೆ ಹೆಲ್ಮೆಟ್‌ ಇಲ್ಲದ ಕಾರಣ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಹಲವು ಸಾವು-ನೋವುಗಳು ಸಂಭವಿಸಿವೆ. ಈ ಬಗ್ಗೆ ಜಾಗೃತರಾಗಿರಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಸಿದರು.

ದೊಡ್ಡಬಳ್ಳಾಪುರ ನಗರ ಪೊಲೀಸ್ ಇಲಾಖೆ ಮತ್ತು   ಐಸಿಐಸಿಐ ಹಾಗೂ ಸಿನರ್ಜಿ ಇನ್ಸುಟ್ಯೂಟ್ ಆಫ್ ಟ್ರೇಡ್ ಅಂಡ್ ಕಾಮರ್ಸ್ ಲಾಂಬರ್ಡ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗ ಪೊಲೀಸ್ ಠಾಣೆಗಳ ಎಲ್ಲಾ ಸಿಬ್ಬಂದಿಗೆ ಮತ್ತು ಅವರ ಮಕ್ಕಳಿಗೆ ಇಂದು ಹೆಲ್ಮೆಟ್ ವಿತರಣಾ ಕಾರ್ಯಕ್ರಮವನ್ನು ನಗರ ಪೊಲೀಸ್ ಠಾಣೆ ಆವರಣದಲ್ಲಿ ನಡೆಯಿತು.‌ ಈ ವೇಳೆ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ವಿತರಿಸಿ‌ ಮಾತನಾಡಿದ ಅವರು, ಬೈಕ್ ಚಾಲನೆ ಮಾಡುವಾಗ ಪೊಲೀಸರು ಮೊದಲು ಹೆಲ್ಮೆಟ್ ಧರಿಸಿ ಇತರೆ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವಂತೆ ಪ್ರೇರಣೆ ನೀಡಬೇಕು ಎಂದರು.

ಪ್ರತಿಯೊಬ್ಬರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕು. ನಾವು ಪೊಲೀಸೋರು ನಮಗೆ ಯಾರು ಏನು ಕೇಳೋದಿಲ್ಲ, ಫೈನ್ ಹಾಕೋದಿಲ್ಲ ಎಂದು ತಾತ್ಸಾರ ಮಾಡಬಾರದು. ಅಪಘಾತಕ್ಕೆ ಪೊಲೀಸು, ಗಂಡು, ಹೆಣ್ಣು, ಅಧಿಕಾರಿ ಎಂದು ಗೊತ್ತಿಲ್ಲ ಆದ್ದರಿಂದ ಹೆಲ್ಮೆಟ್ ಧರಿಸಿ ಬೈಕ್ ಚಾಲನೆ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಪ್ರತಿ ತಿಂಗಳು 50-60% ಅಪಘಾತ ಸಂಭವಿಸುತ್ತಿದೆ. ಪ್ರತಿದಿನ ಎರಡು ಅಪಘಾತ ಪ್ರಕರಣಗಳು ದಾಖಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಐಸಿಐಸಿಐ ಹಾಗೂ ಸಿನರ್ಜಿ ಇನ್ಸುಟ್ಯೂಟ್ ಆಫ್ ಟ್ರೇಡ್ ಅಂಡ್ವಕಾಮರ್ಸ್ ಲಾಂಬರ್ಡ್ ತರಬೇತಿದಾರರಾದ ಸುಪ್ರಿಯ ಸುಭಾಷ್ ಅವರು ಹೆಲ್ಮೆಟ್ ಧರಿಸುವ‌ ಕುರಿತು ತರಬೇತಿ ನೀಡಿದರು.

ಈ ವೇಳೆ ಎಎಸ್ಪಿ ನಾಗರಾಜು ಕೆ.ಎಸ್.ಡಿ.ವೈ.ಎಸ್.ಪಿ ರವಿ, ನಗರ ಪೊಲೀಸ್‌ ಠಾಣಾ ಇನ್ಸ್ಪೆಕ್ಟರ್ ದಯಾನಂದ್ ಹಾಗೂ ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರ್ ಸಾದಿಕ್ ಪಾಷ ಸೇರಿದಂತೆ ವಿವಿಧ ಠಾಣೆಗಳ ಇನ್ಸ್ಪೆಕ್ಟರ್,  ಪೋಲೀಸ್ ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

5 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

8 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

9 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

21 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 day ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

1 day ago