ಹೆಲ್ಮೆಟ್ ಹಾಕದ ಬೈಕ್ ಸವಾರರಿಗೆ ದಂಡದ ಬಿಸಿ ಮುಟ್ಟಿಸಿದ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆಯ ನಿರಂತರವಾಗಿ ನಡೆಯಲಿದೆ. ಬೈಕ್‌ ಸೇರಿದಂತೆ ಇತರೆ ವಾಹನಗಳವರು ಅಗತ್ಯ ದಾಖಲೆ, ಚಾಲನ ಪರವಾನಗಿಯನ್ನು ಕಡ್ಡಾಯವಾಗಿ ಹೊಂದರಬೇಕು. ಜೊತೆಗೆ 2026 ಜ.1 ರಿಂದ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು ಕಂಡುಬಂದಲ್ಲಿ, ಯಾವುದೇ ಮುಲಾಜಿಲ್ಲದೆ ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು ಹಾಗೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿವೈಎಸ್‌ಪಿ ಪಾಂಡುರಂಗ ತಿಳಿಸಿದ್ದರು.

ಈ ಹಿನ್ನೆಲೆ ಹೆಲ್ಮೆಟ್‌ ಧರಿಸದವರಿಗೆ ಮೊದಲ ದಿನ(ಜ.1) ದಂಡ ವಿಧಿಸದೆ ಎಚ್ಚರಿಕೆ ನೀಡಿ ಹೆಲ್ಮೆಟ್‌ ಖರೀದಿಸುವಂತೆ ಹೇಳಿ ಕಳಿಸುತ್ತಿದ್ದರು. ಇಂದು (ಜ.2) ದಂಡ ವಿಧಿಸಲು ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಆರಂಭಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಟಿಬಿ ಸರ್ಕಲ್, ಹಳೇ ಬಸ್ ನಿಲ್ದಾಣದಲ್ಲಿ ಹೆಲ್ಮೆಟ್ ತಪಾಸಣೆ ನಡೆಸಿದ ಪೊಲೀಸರು, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುತ್ತಿದ್ದವರಿಗೆ ದಂಡ ವಿಧಿಸಿದರು…

ಹೆಲ್ಮೆಟ್‌ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸುಮಾರು 65 ಮಂದಿ ಬೈಕ್ ಸವಾರರಿಂದ ಅಂದಾಜು ₹ 32 ಸಾವಿರಕ್ಕೂ ಅಧಿಕ ದಂಡ ವಸೂಲಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ…

ಯಾವುದೇ ಒತ್ತಡಕ್ಕೂ ಮಣಿಯದೆ ದಂಡ ಹಾಕುತ್ತಿರುವುದು ಕೆಲವರಿಗೆ ತೊಂದರೆಯಾಗುತ್ತಿದ್ದರೂ ಸಹ ಸಾರ್ವಜನಿಕ ವಲಯದಲ್ಲಿ ಪೊಲೀಸರ ಕಾರ್ಯದ ಕುರಿತು ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿತ್ತು.

ದ್ವಿಚಕ್ರ ವಾಹನ ಸವಾರರ ಹಿತದೃಷ್ಟಿಯಿಂದ ಪೊಲೀಸರು ಹೆಲ್ಮೆಟ್‌ ಕಡ್ಡಾಯಗೊಳಿಸಲಾಗಿದೆ. ದಯವಿಟ್ಟು ಪೊಲೀಸರಿಗೆ ಅಥವಾ ದಂಡಕ್ಕೆ ಹೆದರಿ ಹೆಲ್ಮೆಟ್ ಧರಿಸಬೇಡಿ. ನಿಮ್ಮ ಮನೆಯಲ್ಲಿ ನಿಮಗಾಗಿ ಕಾಯುವ ತಂದೆ-ತಾಯಿ, ಪತ್ನಿ-ಮಕ್ಕಳಿದ್ದಾರೆ ಎಂಬುದನ್ನು ನೆನಪಿನಲ್ಲಿಡಿ. ತಲೆಗೆ ಪೆಟ್ಟು ಬಿದ್ದು ಪ್ರಾಣ ಕಳೆದುಕೊಳ್ಳುವುದನ್ನು ತಪ್ಪಿಸಲು ಉತ್ತಮ ಗುಣಮಟ್ಟದ ಪೂರ್ಣ ಪ್ರಮಾಣದ ಹೆಲ್ಮೆಟ್ ಧರಿಸಿ ಎಂದು ಡಿವೈಎಸ್ ಪಿ ಪಾಂಡುರಂಗ ತಿಳಿಸಿದ್ದಾರೆ.

ಎಲ್ಲಾ ದ್ವಿಚಕ್ರ ವಾಹನ ಸವಾರರು ಇಂದೇ ಎಚ್ಚೆತ್ತುಕೊಂಡು, ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಿದ್ದಾರೆ.

ಡಿವೈಎಸ್ಪಿ ಹೇಳಿಕೆ ಹಿನ್ನೆಲೆ ಹೆಲ್ಮೆಟ್ ಮಾರಾಟಗಾರರು ದೊಡ್ಡಬಳ್ಳಾಪುರಕ್ಕೆ ಲಗ್ಗೆ ಇಟ್ಟಿದ್ದಾರೆ. ಹೆಲ್ಮೆಟ್ ಕಡ್ಡಾಯ ಹಿನ್ನೆಲೆ ಬೈಕ್ ಸವಾರರು ಹೆಲ್ಮೆಟ್ ಖರೀದಿಯಲ್ಲಿ ನಿರತರಾಗಿದ್ದಾರೆ…..

Ramesh Babu

Journalist

Recent Posts

ಸರ್ಕಾರಗಳ ಸಾಧನೋತ್ಸವ…….

ಸರ್ಕಾರಗಳ ಸಾಧನೋತ್ಸವ....... ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ 8ನೇ ವರ್ಷದ ( 5+3 ) ಸಾಧನಾ ಉತ್ಸವ, ಭಾರತದ…

3 hours ago

ತಿಪ್ಪೂರು ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…

14 hours ago

ಹಕ್ಕಿಜ್ವರ ಶಂಕೆ: ನವಿಲುಗಳ ಮಾರಣ ಹೋಮ…

ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…

15 hours ago

ಮೇ.21ಕ್ಕೆ ಭೂಸ್ವಾಧೀನ ವಿರೋಧಿಸಿ ಡಿಸಿ ಕಚೇರಿಗೆ ಟ್ರ್ಯಾಕರ್ ಮೆರವಣಿಗೆ

ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ,‌ ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…

16 hours ago

ಸ್ನೇಹಿತನ ಬರ್ತಡೇ ಪಾರ್ಟಿಗೆ ಬಂದಿದ್ದ ಯುವಕ ಈಜುಕೊಳಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್‌ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

17 hours ago

ದಶಕಗಳುರುಳಿದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಲ್ಲ ಜಿಲ್ಲಾ ಕೇಂದ್ರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…

1 day ago