ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆಯ ನಿರಂತರವಾಗಿ ನಡೆಯಲಿದೆ. ಬೈಕ್ ಸೇರಿದಂತೆ ಇತರೆ ವಾಹನಗಳವರು ಅಗತ್ಯ ದಾಖಲೆ, ಚಾಲನ ಪರವಾನಗಿಯನ್ನು ಕಡ್ಡಾಯವಾಗಿ ಹೊಂದರಬೇಕು. ಜೊತೆಗೆ 2026 ಜ.1 ರಿಂದ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು ಕಂಡುಬಂದಲ್ಲಿ, ಯಾವುದೇ ಮುಲಾಜಿಲ್ಲದೆ ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು ಹಾಗೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿವೈಎಸ್ಪಿ ಪಾಂಡುರಂಗ ತಿಳಿಸಿದ್ದರು.
ಈ ಹಿನ್ನೆಲೆ ಹೆಲ್ಮೆಟ್ ಧರಿಸದವರಿಗೆ ಮೊದಲ ದಿನ(ಜ.1) ದಂಡ ವಿಧಿಸದೆ ಎಚ್ಚರಿಕೆ ನೀಡಿ ಹೆಲ್ಮೆಟ್ ಖರೀದಿಸುವಂತೆ ಹೇಳಿ ಕಳಿಸುತ್ತಿದ್ದರು. ಇಂದು (ಜ.2) ದಂಡ ವಿಧಿಸಲು ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಆರಂಭಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಟಿಬಿ ಸರ್ಕಲ್, ಹಳೇ ಬಸ್ ನಿಲ್ದಾಣದಲ್ಲಿ ಹೆಲ್ಮೆಟ್ ತಪಾಸಣೆ ನಡೆಸಿದ ಪೊಲೀಸರು, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುತ್ತಿದ್ದವರಿಗೆ ದಂಡ ವಿಧಿಸಿದರು…
ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸುಮಾರು 65 ಮಂದಿ ಬೈಕ್ ಸವಾರರಿಂದ ಅಂದಾಜು ₹ 32 ಸಾವಿರಕ್ಕೂ ಅಧಿಕ ದಂಡ ವಸೂಲಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ…
ಯಾವುದೇ ಒತ್ತಡಕ್ಕೂ ಮಣಿಯದೆ ದಂಡ ಹಾಕುತ್ತಿರುವುದು ಕೆಲವರಿಗೆ ತೊಂದರೆಯಾಗುತ್ತಿದ್ದರೂ ಸಹ ಸಾರ್ವಜನಿಕ ವಲಯದಲ್ಲಿ ಪೊಲೀಸರ ಕಾರ್ಯದ ಕುರಿತು ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿತ್ತು.
ದ್ವಿಚಕ್ರ ವಾಹನ ಸವಾರರ ಹಿತದೃಷ್ಟಿಯಿಂದ ಪೊಲೀಸರು ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ದಯವಿಟ್ಟು ಪೊಲೀಸರಿಗೆ ಅಥವಾ ದಂಡಕ್ಕೆ ಹೆದರಿ ಹೆಲ್ಮೆಟ್ ಧರಿಸಬೇಡಿ. ನಿಮ್ಮ ಮನೆಯಲ್ಲಿ ನಿಮಗಾಗಿ ಕಾಯುವ ತಂದೆ-ತಾಯಿ, ಪತ್ನಿ-ಮಕ್ಕಳಿದ್ದಾರೆ ಎಂಬುದನ್ನು ನೆನಪಿನಲ್ಲಿಡಿ. ತಲೆಗೆ ಪೆಟ್ಟು ಬಿದ್ದು ಪ್ರಾಣ ಕಳೆದುಕೊಳ್ಳುವುದನ್ನು ತಪ್ಪಿಸಲು ಉತ್ತಮ ಗುಣಮಟ್ಟದ ಪೂರ್ಣ ಪ್ರಮಾಣದ ಹೆಲ್ಮೆಟ್ ಧರಿಸಿ ಎಂದು ಡಿವೈಎಸ್ ಪಿ ಪಾಂಡುರಂಗ ತಿಳಿಸಿದ್ದಾರೆ.
ಎಲ್ಲಾ ದ್ವಿಚಕ್ರ ವಾಹನ ಸವಾರರು ಇಂದೇ ಎಚ್ಚೆತ್ತುಕೊಂಡು, ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಿದ್ದಾರೆ.
ಡಿವೈಎಸ್ಪಿ ಹೇಳಿಕೆ ಹಿನ್ನೆಲೆ ಹೆಲ್ಮೆಟ್ ಮಾರಾಟಗಾರರು ದೊಡ್ಡಬಳ್ಳಾಪುರಕ್ಕೆ ಲಗ್ಗೆ ಇಟ್ಟಿದ್ದಾರೆ. ಹೆಲ್ಮೆಟ್ ಕಡ್ಡಾಯ ಹಿನ್ನೆಲೆ ಬೈಕ್ ಸವಾರರು ಹೆಲ್ಮೆಟ್ ಖರೀದಿಯಲ್ಲಿ ನಿರತರಾಗಿದ್ದಾರೆ…..
For passionate casino enthusiasts and wagering lovers, on-line gambling establishments have changed the means we…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
Are you a fan of gambling enterprise video games? Do you appreciate the excitement of…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…