ಹೆಲ್ಮೆಟ್ ಹಾಕದ ಬೈಕ್ ಸವಾರರಿಗೆ ದಂಡದ ಬಿಸಿ ಮುಟ್ಟಿಸಿದ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆಯ ನಿರಂತರವಾಗಿ ನಡೆಯಲಿದೆ. ಬೈಕ್‌ ಸೇರಿದಂತೆ ಇತರೆ ವಾಹನಗಳವರು ಅಗತ್ಯ ದಾಖಲೆ, ಚಾಲನ ಪರವಾನಗಿಯನ್ನು ಕಡ್ಡಾಯವಾಗಿ ಹೊಂದರಬೇಕು. ಜೊತೆಗೆ 2026 ಜ.1 ರಿಂದ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು ಕಂಡುಬಂದಲ್ಲಿ, ಯಾವುದೇ ಮುಲಾಜಿಲ್ಲದೆ ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು ಹಾಗೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿವೈಎಸ್‌ಪಿ ಪಾಂಡುರಂಗ ತಿಳಿಸಿದ್ದರು.

ಈ ಹಿನ್ನೆಲೆ ಹೆಲ್ಮೆಟ್‌ ಧರಿಸದವರಿಗೆ ಮೊದಲ ದಿನ(ಜ.1) ದಂಡ ವಿಧಿಸದೆ ಎಚ್ಚರಿಕೆ ನೀಡಿ ಹೆಲ್ಮೆಟ್‌ ಖರೀದಿಸುವಂತೆ ಹೇಳಿ ಕಳಿಸುತ್ತಿದ್ದರು. ಇಂದು (ಜ.2) ದಂಡ ವಿಧಿಸಲು ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಆರಂಭಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಟಿಬಿ ಸರ್ಕಲ್, ಹಳೇ ಬಸ್ ನಿಲ್ದಾಣದಲ್ಲಿ ಹೆಲ್ಮೆಟ್ ತಪಾಸಣೆ ನಡೆಸಿದ ಪೊಲೀಸರು, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುತ್ತಿದ್ದವರಿಗೆ ದಂಡ ವಿಧಿಸಿದರು…

ಹೆಲ್ಮೆಟ್‌ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸುಮಾರು 65 ಮಂದಿ ಬೈಕ್ ಸವಾರರಿಂದ ಅಂದಾಜು ₹ 32 ಸಾವಿರಕ್ಕೂ ಅಧಿಕ ದಂಡ ವಸೂಲಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ…

ಯಾವುದೇ ಒತ್ತಡಕ್ಕೂ ಮಣಿಯದೆ ದಂಡ ಹಾಕುತ್ತಿರುವುದು ಕೆಲವರಿಗೆ ತೊಂದರೆಯಾಗುತ್ತಿದ್ದರೂ ಸಹ ಸಾರ್ವಜನಿಕ ವಲಯದಲ್ಲಿ ಪೊಲೀಸರ ಕಾರ್ಯದ ಕುರಿತು ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿತ್ತು.

ದ್ವಿಚಕ್ರ ವಾಹನ ಸವಾರರ ಹಿತದೃಷ್ಟಿಯಿಂದ ಪೊಲೀಸರು ಹೆಲ್ಮೆಟ್‌ ಕಡ್ಡಾಯಗೊಳಿಸಲಾಗಿದೆ. ದಯವಿಟ್ಟು ಪೊಲೀಸರಿಗೆ ಅಥವಾ ದಂಡಕ್ಕೆ ಹೆದರಿ ಹೆಲ್ಮೆಟ್ ಧರಿಸಬೇಡಿ. ನಿಮ್ಮ ಮನೆಯಲ್ಲಿ ನಿಮಗಾಗಿ ಕಾಯುವ ತಂದೆ-ತಾಯಿ, ಪತ್ನಿ-ಮಕ್ಕಳಿದ್ದಾರೆ ಎಂಬುದನ್ನು ನೆನಪಿನಲ್ಲಿಡಿ. ತಲೆಗೆ ಪೆಟ್ಟು ಬಿದ್ದು ಪ್ರಾಣ ಕಳೆದುಕೊಳ್ಳುವುದನ್ನು ತಪ್ಪಿಸಲು ಉತ್ತಮ ಗುಣಮಟ್ಟದ ಪೂರ್ಣ ಪ್ರಮಾಣದ ಹೆಲ್ಮೆಟ್ ಧರಿಸಿ ಎಂದು ಡಿವೈಎಸ್ ಪಿ ಪಾಂಡುರಂಗ ತಿಳಿಸಿದ್ದಾರೆ.

ಎಲ್ಲಾ ದ್ವಿಚಕ್ರ ವಾಹನ ಸವಾರರು ಇಂದೇ ಎಚ್ಚೆತ್ತುಕೊಂಡು, ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಿದ್ದಾರೆ.

ಡಿವೈಎಸ್ಪಿ ಹೇಳಿಕೆ ಹಿನ್ನೆಲೆ ಹೆಲ್ಮೆಟ್ ಮಾರಾಟಗಾರರು ದೊಡ್ಡಬಳ್ಳಾಪುರಕ್ಕೆ ಲಗ್ಗೆ ಇಟ್ಟಿದ್ದಾರೆ. ಹೆಲ್ಮೆಟ್ ಕಡ್ಡಾಯ ಹಿನ್ನೆಲೆ ಬೈಕ್ ಸವಾರರು ಹೆಲ್ಮೆಟ್ ಖರೀದಿಯಲ್ಲಿ ನಿರತರಾಗಿದ್ದಾರೆ…..

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

45 minutes ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

12 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

13 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

14 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

16 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago