ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆಯ ನಿರಂತರವಾಗಿ ನಡೆಯಲಿದೆ. ಬೈಕ್ ಸೇರಿದಂತೆ ಇತರೆ ವಾಹನಗಳವರು ಅಗತ್ಯ ದಾಖಲೆ, ಚಾಲನ ಪರವಾನಗಿಯನ್ನು ಕಡ್ಡಾಯವಾಗಿ ಹೊಂದರಬೇಕು. ಜೊತೆಗೆ 2026 ಜ.1 ರಿಂದ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು ಕಂಡುಬಂದಲ್ಲಿ, ಯಾವುದೇ ಮುಲಾಜಿಲ್ಲದೆ ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು ಹಾಗೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿವೈಎಸ್ಪಿ ಪಾಂಡುರಂಗ ತಿಳಿಸಿದ್ದರು.
ಈ ಹಿನ್ನೆಲೆ ಹೆಲ್ಮೆಟ್ ಧರಿಸದವರಿಗೆ ಮೊದಲ ದಿನ(ಜ.1) ದಂಡ ವಿಧಿಸದೆ ಎಚ್ಚರಿಕೆ ನೀಡಿ ಹೆಲ್ಮೆಟ್ ಖರೀದಿಸುವಂತೆ ಹೇಳಿ ಕಳಿಸುತ್ತಿದ್ದರು. ಇಂದು (ಜ.2) ದಂಡ ವಿಧಿಸಲು ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಆರಂಭಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಟಿಬಿ ಸರ್ಕಲ್, ಹಳೇ ಬಸ್ ನಿಲ್ದಾಣದಲ್ಲಿ ಹೆಲ್ಮೆಟ್ ತಪಾಸಣೆ ನಡೆಸಿದ ಪೊಲೀಸರು, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುತ್ತಿದ್ದವರಿಗೆ ದಂಡ ವಿಧಿಸಿದರು…
ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸುಮಾರು 65 ಮಂದಿ ಬೈಕ್ ಸವಾರರಿಂದ ಅಂದಾಜು ₹ 32 ಸಾವಿರಕ್ಕೂ ಅಧಿಕ ದಂಡ ವಸೂಲಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ…
ಯಾವುದೇ ಒತ್ತಡಕ್ಕೂ ಮಣಿಯದೆ ದಂಡ ಹಾಕುತ್ತಿರುವುದು ಕೆಲವರಿಗೆ ತೊಂದರೆಯಾಗುತ್ತಿದ್ದರೂ ಸಹ ಸಾರ್ವಜನಿಕ ವಲಯದಲ್ಲಿ ಪೊಲೀಸರ ಕಾರ್ಯದ ಕುರಿತು ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿತ್ತು.
ದ್ವಿಚಕ್ರ ವಾಹನ ಸವಾರರ ಹಿತದೃಷ್ಟಿಯಿಂದ ಪೊಲೀಸರು ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ದಯವಿಟ್ಟು ಪೊಲೀಸರಿಗೆ ಅಥವಾ ದಂಡಕ್ಕೆ ಹೆದರಿ ಹೆಲ್ಮೆಟ್ ಧರಿಸಬೇಡಿ. ನಿಮ್ಮ ಮನೆಯಲ್ಲಿ ನಿಮಗಾಗಿ ಕಾಯುವ ತಂದೆ-ತಾಯಿ, ಪತ್ನಿ-ಮಕ್ಕಳಿದ್ದಾರೆ ಎಂಬುದನ್ನು ನೆನಪಿನಲ್ಲಿಡಿ. ತಲೆಗೆ ಪೆಟ್ಟು ಬಿದ್ದು ಪ್ರಾಣ ಕಳೆದುಕೊಳ್ಳುವುದನ್ನು ತಪ್ಪಿಸಲು ಉತ್ತಮ ಗುಣಮಟ್ಟದ ಪೂರ್ಣ ಪ್ರಮಾಣದ ಹೆಲ್ಮೆಟ್ ಧರಿಸಿ ಎಂದು ಡಿವೈಎಸ್ ಪಿ ಪಾಂಡುರಂಗ ತಿಳಿಸಿದ್ದಾರೆ.
ಎಲ್ಲಾ ದ್ವಿಚಕ್ರ ವಾಹನ ಸವಾರರು ಇಂದೇ ಎಚ್ಚೆತ್ತುಕೊಂಡು, ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಿದ್ದಾರೆ.
ಡಿವೈಎಸ್ಪಿ ಹೇಳಿಕೆ ಹಿನ್ನೆಲೆ ಹೆಲ್ಮೆಟ್ ಮಾರಾಟಗಾರರು ದೊಡ್ಡಬಳ್ಳಾಪುರಕ್ಕೆ ಲಗ್ಗೆ ಇಟ್ಟಿದ್ದಾರೆ. ಹೆಲ್ಮೆಟ್ ಕಡ್ಡಾಯ ಹಿನ್ನೆಲೆ ಬೈಕ್ ಸವಾರರು ಹೆಲ್ಮೆಟ್ ಖರೀದಿಯಲ್ಲಿ ನಿರತರಾಗಿದ್ದಾರೆ…..
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…