ಹೆಲ್ಮೆಟ್ ಹಾಕದ ಬೈಕ್ ಸವಾರರಿಗೆ ದಂಡದ ಬಿಸಿ ಮುಟ್ಟಿಸಿದ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆಯ ನಿರಂತರವಾಗಿ ನಡೆಯಲಿದೆ. ಬೈಕ್‌ ಸೇರಿದಂತೆ ಇತರೆ ವಾಹನಗಳವರು ಅಗತ್ಯ ದಾಖಲೆ, ಚಾಲನ ಪರವಾನಗಿಯನ್ನು ಕಡ್ಡಾಯವಾಗಿ ಹೊಂದರಬೇಕು. ಜೊತೆಗೆ 2026 ಜ.1 ರಿಂದ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು ಕಂಡುಬಂದಲ್ಲಿ, ಯಾವುದೇ ಮುಲಾಜಿಲ್ಲದೆ ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು ಹಾಗೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿವೈಎಸ್‌ಪಿ ಪಾಂಡುರಂಗ ತಿಳಿಸಿದ್ದರು.

ಈ ಹಿನ್ನೆಲೆ ಹೆಲ್ಮೆಟ್‌ ಧರಿಸದವರಿಗೆ ಮೊದಲ ದಿನ(ಜ.1) ದಂಡ ವಿಧಿಸದೆ ಎಚ್ಚರಿಕೆ ನೀಡಿ ಹೆಲ್ಮೆಟ್‌ ಖರೀದಿಸುವಂತೆ ಹೇಳಿ ಕಳಿಸುತ್ತಿದ್ದರು. ಇಂದು (ಜ.2) ದಂಡ ವಿಧಿಸಲು ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಆರಂಭಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಟಿಬಿ ಸರ್ಕಲ್, ಹಳೇ ಬಸ್ ನಿಲ್ದಾಣದಲ್ಲಿ ಹೆಲ್ಮೆಟ್ ತಪಾಸಣೆ ನಡೆಸಿದ ಪೊಲೀಸರು, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುತ್ತಿದ್ದವರಿಗೆ ದಂಡ ವಿಧಿಸಿದರು…

ಹೆಲ್ಮೆಟ್‌ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸುಮಾರು 65 ಮಂದಿ ಬೈಕ್ ಸವಾರರಿಂದ ಅಂದಾಜು ₹ 32 ಸಾವಿರಕ್ಕೂ ಅಧಿಕ ದಂಡ ವಸೂಲಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ…

ಯಾವುದೇ ಒತ್ತಡಕ್ಕೂ ಮಣಿಯದೆ ದಂಡ ಹಾಕುತ್ತಿರುವುದು ಕೆಲವರಿಗೆ ತೊಂದರೆಯಾಗುತ್ತಿದ್ದರೂ ಸಹ ಸಾರ್ವಜನಿಕ ವಲಯದಲ್ಲಿ ಪೊಲೀಸರ ಕಾರ್ಯದ ಕುರಿತು ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿತ್ತು.

ದ್ವಿಚಕ್ರ ವಾಹನ ಸವಾರರ ಹಿತದೃಷ್ಟಿಯಿಂದ ಪೊಲೀಸರು ಹೆಲ್ಮೆಟ್‌ ಕಡ್ಡಾಯಗೊಳಿಸಲಾಗಿದೆ. ದಯವಿಟ್ಟು ಪೊಲೀಸರಿಗೆ ಅಥವಾ ದಂಡಕ್ಕೆ ಹೆದರಿ ಹೆಲ್ಮೆಟ್ ಧರಿಸಬೇಡಿ. ನಿಮ್ಮ ಮನೆಯಲ್ಲಿ ನಿಮಗಾಗಿ ಕಾಯುವ ತಂದೆ-ತಾಯಿ, ಪತ್ನಿ-ಮಕ್ಕಳಿದ್ದಾರೆ ಎಂಬುದನ್ನು ನೆನಪಿನಲ್ಲಿಡಿ. ತಲೆಗೆ ಪೆಟ್ಟು ಬಿದ್ದು ಪ್ರಾಣ ಕಳೆದುಕೊಳ್ಳುವುದನ್ನು ತಪ್ಪಿಸಲು ಉತ್ತಮ ಗುಣಮಟ್ಟದ ಪೂರ್ಣ ಪ್ರಮಾಣದ ಹೆಲ್ಮೆಟ್ ಧರಿಸಿ ಎಂದು ಡಿವೈಎಸ್ ಪಿ ಪಾಂಡುರಂಗ ತಿಳಿಸಿದ್ದಾರೆ.

ಎಲ್ಲಾ ದ್ವಿಚಕ್ರ ವಾಹನ ಸವಾರರು ಇಂದೇ ಎಚ್ಚೆತ್ತುಕೊಂಡು, ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಿದ್ದಾರೆ.

ಡಿವೈಎಸ್ಪಿ ಹೇಳಿಕೆ ಹಿನ್ನೆಲೆ ಹೆಲ್ಮೆಟ್ ಮಾರಾಟಗಾರರು ದೊಡ್ಡಬಳ್ಳಾಪುರಕ್ಕೆ ಲಗ್ಗೆ ಇಟ್ಟಿದ್ದಾರೆ. ಹೆಲ್ಮೆಟ್ ಕಡ್ಡಾಯ ಹಿನ್ನೆಲೆ ಬೈಕ್ ಸವಾರರು ಹೆಲ್ಮೆಟ್ ಖರೀದಿಯಲ್ಲಿ ನಿರತರಾಗಿದ್ದಾರೆ…..

Ramesh Babu

Journalist

Recent Posts

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

2 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

11 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

14 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

19 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

20 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

20 hours ago