ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ(ಐಐಎಚ್ಆರ್) ಆವರಣದಲ್ಲಿ ಫೆ.27ರಿಂದ ಮಾರ್ಚ್ 1ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ 2025’ ಆಯೋಜಿಸಲಾಗಿದೆ ಎಂದು ಐಐಎಚ್ಆರ್ ನಿರ್ದೇಶಕ ತುಷಾರ್ ಕಾಂತಿ ಬೆಹೆರಾ ಮಾಹಿತಿ ನೀಡಿದರು.
ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ (ICAR-IIHR) ಸಭಾಂಗಣದಲ್ಲಿ ನಡೆದ ಮಾಧ್ಯಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಕಸಿತ ತೋಟಗಾರಿಕೆ ಭಾರತಕ್ಕಾಗಿ ಪೋಷಣೆ, ಸಬಲೀಕರಣ ಮತ್ತು ಜೀವನೋಪಾಯ’ ಶೀರ್ಷಿಕೆ ಅಡಿಯಲ್ಲಿ ಉತ್ತಮ ಪೌಷ್ಟಿಕಾಂಶಯುತ್ತ ಬೆಳೆ ಬೆಳೆಯುವ ತಂತ್ರಜ್ಞಾನ, ಹೊಸ ತಳಿಗಳು, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಸೇರಿದಂತೆ ತೋಟಗಾರಿಕೆ ಕ್ಷೇತ್ರದ ಹಲವು ಸಂಶೋಧನೆಗಳು ಮೇಳದಲ್ಲಿ ಅನಾವರಣಗೊಳ್ಳಲಿವೆ ಎಂದರು.
20 ರಾಜ್ಯಗಳಿಂದ ರೈತರು ಪಾಲ್ಗೊಳ್ಳಲಿದ್ದಾರೆ. ನಮ್ಮ ರಾಜ್ಯದ 30 ಜಿಲ್ಲೆಗಳಿಂದಲೂ ರೈತರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಹೊರ ರಾಜ್ಯದ ರೈತರಿಗೆ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಮಳಿಗೆಗಳಲ್ಲಿ ಸಸಿಗಳು ಮತ್ತು ಬೀಜಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ’ ಎಂದರು.
ಟಿ. ಬಿ. ಕ್ರಾಸ್ ನಿಂದ, ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಭೇಟಿ ನೀಡುವವರ ಅನುಕೂಲಕ್ಕಾಗಿ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮೇಳದ ಒಳಾಂಗಣದಲ್ಲಿ ಹಿರಿಯ ನಾಗರಿಕರ ಸಹಾಯಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಹೊರ ಜಿಲ್ಲೆಗಳಿಂದ ಬರುವ ರೈತರಿಗೆ, ಮುಂಚಿತ ಮಾಹಿತಿ ನೀಡಿದರೆ ವಸತಿ ವ್ಯವಸ್ಥೆ ಮಾಡಲಾಗುವುದು. ಮೇಳದ ವೇಳೆ IIHR ತಂತ್ರಜ್ಞಾನಗಳ ರಾಯಭಾರಿಗಳಾಗಿರುವ ಪ್ರಗತಿಪರ ರೈತರನ್ನು ಗೌರವಿಸಲಾಗುವುದು ರಾಷ್ಟ್ರೀಯ ತೋಟಗಾರಿಕಾ ಮೇಳ 2025ರ ಆಯೋಜನಾ ಕಾರ್ಯದರ್ಶಿ ಡಾ. ಶಂಕರ ಹೆಬ್ಬಾರ ತಿಳಿಸಿದರು.
• ಸಮೃದ್ಧಿ ಕಲ್ಲಂಗಡಿ ಸೆಲೆಕ್ಷನ್-4
• ಅಂಟುಕಾಂಡ ಕೊಳೆರೋಗ ನಿರೋಧಕ ಸೋರೆಕಾಯಿ
• ಎಲೆ ಸುರುಳಿ ನಂಜಾಣು ರೋಗ ನಿರೋಧಕ ಮೆಣಸಿನಕಾಯಿ
• ಅವಕಾಡೊ (ಬೆಣ್ಣೆ ಹಣ್ಣು)
• ಜಾವಾ ರೋಸ್ ಆಪಲ್
• ಅರ್ಕ ಹಲಸಿನಕಾಯಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…