ಹೆಸರಘಟ್ಟದ ಐಐಎಚ್‌ಆರ್ ಆವರಣದಲ್ಲಿ ಫೆ. 27ರಿಂದ ರಾಷ್ಟ್ರೀಯ ತೋಟಗಾರಿಕೆ ಮೇಳ

ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ(ಐಐಎಚ್‌ಆರ್) ಆವರಣದಲ್ಲಿ ಫೆ.27ರಿಂದ ಮಾರ್ಚ್ 1ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ 2025’ ಆಯೋಜಿಸಲಾಗಿದೆ‌ ಎಂದು‌ ಐಐಎಚ್‌ಆರ್ ನಿರ್ದೇಶಕ ತುಷಾರ್ ಕಾಂತಿ ಬೆಹೆರಾ ಮಾಹಿತಿ ನೀಡಿದರು.

ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ (ICAR-IIHR) ಸಭಾಂಗಣದಲ್ಲಿ ನಡೆದ‌ ಮಾಧ್ಯಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಕಸಿತ ತೋಟಗಾರಿಕೆ ಭಾರತಕ್ಕಾಗಿ ಪೋಷಣೆ, ಸಬಲೀಕರಣ ಮತ್ತು ಜೀವನೋಪಾಯ’ ಶೀರ್ಷಿಕೆ ಅಡಿಯಲ್ಲಿ ಉತ್ತಮ ಪೌಷ್ಟಿಕಾಂಶಯುತ್ತ ಬೆಳೆ ಬೆಳೆಯುವ ತಂತ್ರಜ್ಞಾನ, ಹೊಸ ತಳಿಗಳು, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಸೇರಿದಂತೆ ತೋಟಗಾರಿಕೆ ಕ್ಷೇತ್ರದ ಹಲವು ಸಂಶೋಧನೆಗಳು ಮೇಳದಲ್ಲಿ ಅನಾವರಣಗೊಳ್ಳಲಿವೆ ಎಂದರು.

ಮೇಳದಲ್ಲಿ 250ಕ್ಕೂ ಹೆಚ್ಚು ಸಂಸ್ಥೆಗಳು ಪಾಲ್ಗೊಳ್ಳಲಿವೆ. 190ಕ್ಕೂ ಹೆಚ್ಚು ವೈವಿಧ್ಯಮಯ ಮಳಿಗೆಗಳಿರುತ್ತವೆ. 75,000ಕ್ಕೂ ಹೆಚ್ಚಿನ ರೈತರು ಮತ್ತು ತೋಟಗಾರಿಕಾ ಕ್ಷೇತ್ರದ ಇತರೆ ಭಾಗಿದಾರರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ನಂದೀಶ್.ಪಿ ತಿಳಿಸಿದರು.

20 ರಾಜ್ಯಗಳಿಂದ ರೈತರು ಪಾಲ್ಗೊಳ್ಳಲಿದ್ದಾರೆ. ನಮ್ಮ ರಾಜ್ಯದ 30 ಜಿಲ್ಲೆಗಳಿಂದಲೂ ರೈತರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಹೊರ ರಾಜ್ಯದ ರೈತರಿಗೆ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಮಳಿಗೆಗಳಲ್ಲಿ ಸಸಿಗಳು ಮತ್ತು ಬೀಜಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ’ ಎಂದರು.

ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅನುಕೂಲಕರ ತಂತ್ರಜ್ಞಾನಗಳನ್ನು ಪರಿಚಯಿಸುವ, ಮತ್ತು ಸಾಮಾಜಿಕವಾಗಿ ಹೊಂದಿಕೊಳ್ಳುವ, ಆರ್ಥಿಕವಾಗಿ ಲಾಭದಾಯಕ ಹಾಗೂ ಪರಿಸರಕ್ಕೆ ಅನುಕೂಲಕರ ತೋಟಗಾರಿಕಾ ಬೆಳೆಗಳ ಮೂಲಕ ಉತ್ಪಾದನೆ, ಆದಾಯ ಮತ್ತು ಜೀವನೋಪಾಯವನ್ನು ಸುಧಾರಿಸುವ ಗುರಿಯನ್ನು ಈ ಮೇಳ ಹೊಂದಿದೆ ಎಂದು ವಿವರಿಸಿದರು.

ಟಿ. ಬಿ. ಕ್ರಾಸ್ ನಿಂದ, ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಭೇಟಿ ನೀಡುವವರ ಅನುಕೂಲಕ್ಕಾಗಿ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮೇಳದ ಒಳಾಂಗಣದಲ್ಲಿ ಹಿರಿಯ ನಾಗರಿಕರ ಸಹಾಯಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಹೊರ ಜಿಲ್ಲೆಗಳಿಂದ ಬರುವ ರೈತರಿಗೆ, ಮುಂಚಿತ ಮಾಹಿತಿ ನೀಡಿದರೆ ವಸತಿ ವ್ಯವಸ್ಥೆ ಮಾಡಲಾಗುವುದು. ಮೇಳದ ವೇಳೆ IIHR ತಂತ್ರಜ್ಞಾನಗಳ ರಾಯಭಾರಿಗಳಾಗಿರುವ ಪ್ರಗತಿಪರ ರೈತರನ್ನು ಗೌರವಿಸಲಾಗುವುದು ರಾಷ್ಟ್ರೀಯ ತೋಟಗಾರಿಕಾ ಮೇಳ 2025ರ ಆಯೋಜನಾ ಕಾರ್ಯದರ್ಶಿ ಡಾ. ಶಂಕರ ಹೆಬ್ಬಾರ ತಿಳಿಸಿದರು.

ಮೇಳದಲ್ಲಿ ಬಿಡುಗಡೆಯಾಗುವ ಹೊಸ ತಳಿಗಳು

• ಸಮೃದ್ಧಿ ಕಲ್ಲಂಗಡಿ ಸೆಲೆಕ್ಷನ್-4

• ಅಂಟುಕಾಂಡ ಕೊಳೆರೋಗ ನಿರೋಧಕ ಸೋರೆಕಾಯಿ

• ಎಲೆ ಸುರುಳಿ ನಂಜಾಣು ರೋಗ ನಿರೋಧಕ ಮೆಣಸಿನಕಾಯಿ

• ಅವಕಾಡೊ (ಬೆಣ್ಣೆ ಹಣ್ಣು)

• ಜಾವಾ ರೋಸ್ ಆಪಲ್

• ಅರ್ಕ ಹಲಸಿನಕಾಯಿ

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

3 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

3 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

4 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

6 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

13 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

14 hours ago