ಹೆಸರಘಟ್ಟದ ಐಐಎಚ್‌ಆರ್ ಆವರಣದಲ್ಲಿ ಫೆ. 27ರಿಂದ ರಾಷ್ಟ್ರೀಯ ತೋಟಗಾರಿಕೆ ಮೇಳ

ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ(ಐಐಎಚ್‌ಆರ್) ಆವರಣದಲ್ಲಿ ಫೆ.27ರಿಂದ ಮಾರ್ಚ್ 1ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ 2025’ ಆಯೋಜಿಸಲಾಗಿದೆ‌ ಎಂದು‌ ಐಐಎಚ್‌ಆರ್ ನಿರ್ದೇಶಕ ತುಷಾರ್ ಕಾಂತಿ ಬೆಹೆರಾ ಮಾಹಿತಿ ನೀಡಿದರು.

ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ (ICAR-IIHR) ಸಭಾಂಗಣದಲ್ಲಿ ನಡೆದ‌ ಮಾಧ್ಯಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಕಸಿತ ತೋಟಗಾರಿಕೆ ಭಾರತಕ್ಕಾಗಿ ಪೋಷಣೆ, ಸಬಲೀಕರಣ ಮತ್ತು ಜೀವನೋಪಾಯ’ ಶೀರ್ಷಿಕೆ ಅಡಿಯಲ್ಲಿ ಉತ್ತಮ ಪೌಷ್ಟಿಕಾಂಶಯುತ್ತ ಬೆಳೆ ಬೆಳೆಯುವ ತಂತ್ರಜ್ಞಾನ, ಹೊಸ ತಳಿಗಳು, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಸೇರಿದಂತೆ ತೋಟಗಾರಿಕೆ ಕ್ಷೇತ್ರದ ಹಲವು ಸಂಶೋಧನೆಗಳು ಮೇಳದಲ್ಲಿ ಅನಾವರಣಗೊಳ್ಳಲಿವೆ ಎಂದರು.

ಮೇಳದಲ್ಲಿ 250ಕ್ಕೂ ಹೆಚ್ಚು ಸಂಸ್ಥೆಗಳು ಪಾಲ್ಗೊಳ್ಳಲಿವೆ. 190ಕ್ಕೂ ಹೆಚ್ಚು ವೈವಿಧ್ಯಮಯ ಮಳಿಗೆಗಳಿರುತ್ತವೆ. 75,000ಕ್ಕೂ ಹೆಚ್ಚಿನ ರೈತರು ಮತ್ತು ತೋಟಗಾರಿಕಾ ಕ್ಷೇತ್ರದ ಇತರೆ ಭಾಗಿದಾರರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ನಂದೀಶ್.ಪಿ ತಿಳಿಸಿದರು.

20 ರಾಜ್ಯಗಳಿಂದ ರೈತರು ಪಾಲ್ಗೊಳ್ಳಲಿದ್ದಾರೆ. ನಮ್ಮ ರಾಜ್ಯದ 30 ಜಿಲ್ಲೆಗಳಿಂದಲೂ ರೈತರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಹೊರ ರಾಜ್ಯದ ರೈತರಿಗೆ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಮಳಿಗೆಗಳಲ್ಲಿ ಸಸಿಗಳು ಮತ್ತು ಬೀಜಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ’ ಎಂದರು.

ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅನುಕೂಲಕರ ತಂತ್ರಜ್ಞಾನಗಳನ್ನು ಪರಿಚಯಿಸುವ, ಮತ್ತು ಸಾಮಾಜಿಕವಾಗಿ ಹೊಂದಿಕೊಳ್ಳುವ, ಆರ್ಥಿಕವಾಗಿ ಲಾಭದಾಯಕ ಹಾಗೂ ಪರಿಸರಕ್ಕೆ ಅನುಕೂಲಕರ ತೋಟಗಾರಿಕಾ ಬೆಳೆಗಳ ಮೂಲಕ ಉತ್ಪಾದನೆ, ಆದಾಯ ಮತ್ತು ಜೀವನೋಪಾಯವನ್ನು ಸುಧಾರಿಸುವ ಗುರಿಯನ್ನು ಈ ಮೇಳ ಹೊಂದಿದೆ ಎಂದು ವಿವರಿಸಿದರು.

ಟಿ. ಬಿ. ಕ್ರಾಸ್ ನಿಂದ, ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಭೇಟಿ ನೀಡುವವರ ಅನುಕೂಲಕ್ಕಾಗಿ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮೇಳದ ಒಳಾಂಗಣದಲ್ಲಿ ಹಿರಿಯ ನಾಗರಿಕರ ಸಹಾಯಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಹೊರ ಜಿಲ್ಲೆಗಳಿಂದ ಬರುವ ರೈತರಿಗೆ, ಮುಂಚಿತ ಮಾಹಿತಿ ನೀಡಿದರೆ ವಸತಿ ವ್ಯವಸ್ಥೆ ಮಾಡಲಾಗುವುದು. ಮೇಳದ ವೇಳೆ IIHR ತಂತ್ರಜ್ಞಾನಗಳ ರಾಯಭಾರಿಗಳಾಗಿರುವ ಪ್ರಗತಿಪರ ರೈತರನ್ನು ಗೌರವಿಸಲಾಗುವುದು ರಾಷ್ಟ್ರೀಯ ತೋಟಗಾರಿಕಾ ಮೇಳ 2025ರ ಆಯೋಜನಾ ಕಾರ್ಯದರ್ಶಿ ಡಾ. ಶಂಕರ ಹೆಬ್ಬಾರ ತಿಳಿಸಿದರು.

ಮೇಳದಲ್ಲಿ ಬಿಡುಗಡೆಯಾಗುವ ಹೊಸ ತಳಿಗಳು

• ಸಮೃದ್ಧಿ ಕಲ್ಲಂಗಡಿ ಸೆಲೆಕ್ಷನ್-4

• ಅಂಟುಕಾಂಡ ಕೊಳೆರೋಗ ನಿರೋಧಕ ಸೋರೆಕಾಯಿ

• ಎಲೆ ಸುರುಳಿ ನಂಜಾಣು ರೋಗ ನಿರೋಧಕ ಮೆಣಸಿನಕಾಯಿ

• ಅವಕಾಡೊ (ಬೆಣ್ಣೆ ಹಣ್ಣು)

• ಜಾವಾ ರೋಸ್ ಆಪಲ್

• ಅರ್ಕ ಹಲಸಿನಕಾಯಿ

Ramesh Babu

Journalist

Recent Posts

ಸ್ಲೋಚ್ ಕ್ಯಾಪ್ ಗೆ ವಿದಾಯ: ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸಿ ಮಿಂಚಿದ ಬೆಂ ಗ್ರಾ ಜಿಲ್ಲಾ ಪೊಲೀಸ್ ಸಿಬ್ಬಂದಿ

1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…

6 hours ago

ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…

7 hours ago

ಜ.1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲೈಟ್ ಕಡ್ಡಾಯ – ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಡಿವೈಎಸ್ಪಿ ಪಾಂಡುರಂಗ

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

10 hours ago

ಹಿಟ್ & ರನ್: ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು: ಸಿಮೆಂಟ್ ಬಲ್ಕರ್ ಪರಾರಿ

ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…

13 hours ago

“ಕುವೆಂಪು”….. ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……

ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…

19 hours ago

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

2 days ago