ಹೆಸರಘಟ್ಟದ ಐಐಎಚ್‌ಆರ್ ಆವರಣದಲ್ಲಿ ಫೆ. 27ರಿಂದ ರಾಷ್ಟ್ರೀಯ ತೋಟಗಾರಿಕೆ ಮೇಳ

ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ(ಐಐಎಚ್‌ಆರ್) ಆವರಣದಲ್ಲಿ ಫೆ.27ರಿಂದ ಮಾರ್ಚ್ 1ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ 2025’ ಆಯೋಜಿಸಲಾಗಿದೆ‌ ಎಂದು‌ ಐಐಎಚ್‌ಆರ್ ನಿರ್ದೇಶಕ ತುಷಾರ್ ಕಾಂತಿ ಬೆಹೆರಾ ಮಾಹಿತಿ ನೀಡಿದರು.

ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ (ICAR-IIHR) ಸಭಾಂಗಣದಲ್ಲಿ ನಡೆದ‌ ಮಾಧ್ಯಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಕಸಿತ ತೋಟಗಾರಿಕೆ ಭಾರತಕ್ಕಾಗಿ ಪೋಷಣೆ, ಸಬಲೀಕರಣ ಮತ್ತು ಜೀವನೋಪಾಯ’ ಶೀರ್ಷಿಕೆ ಅಡಿಯಲ್ಲಿ ಉತ್ತಮ ಪೌಷ್ಟಿಕಾಂಶಯುತ್ತ ಬೆಳೆ ಬೆಳೆಯುವ ತಂತ್ರಜ್ಞಾನ, ಹೊಸ ತಳಿಗಳು, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಸೇರಿದಂತೆ ತೋಟಗಾರಿಕೆ ಕ್ಷೇತ್ರದ ಹಲವು ಸಂಶೋಧನೆಗಳು ಮೇಳದಲ್ಲಿ ಅನಾವರಣಗೊಳ್ಳಲಿವೆ ಎಂದರು.

ಮೇಳದಲ್ಲಿ 250ಕ್ಕೂ ಹೆಚ್ಚು ಸಂಸ್ಥೆಗಳು ಪಾಲ್ಗೊಳ್ಳಲಿವೆ. 190ಕ್ಕೂ ಹೆಚ್ಚು ವೈವಿಧ್ಯಮಯ ಮಳಿಗೆಗಳಿರುತ್ತವೆ. 75,000ಕ್ಕೂ ಹೆಚ್ಚಿನ ರೈತರು ಮತ್ತು ತೋಟಗಾರಿಕಾ ಕ್ಷೇತ್ರದ ಇತರೆ ಭಾಗಿದಾರರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ನಂದೀಶ್.ಪಿ ತಿಳಿಸಿದರು.

20 ರಾಜ್ಯಗಳಿಂದ ರೈತರು ಪಾಲ್ಗೊಳ್ಳಲಿದ್ದಾರೆ. ನಮ್ಮ ರಾಜ್ಯದ 30 ಜಿಲ್ಲೆಗಳಿಂದಲೂ ರೈತರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಹೊರ ರಾಜ್ಯದ ರೈತರಿಗೆ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಮಳಿಗೆಗಳಲ್ಲಿ ಸಸಿಗಳು ಮತ್ತು ಬೀಜಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ’ ಎಂದರು.

ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅನುಕೂಲಕರ ತಂತ್ರಜ್ಞಾನಗಳನ್ನು ಪರಿಚಯಿಸುವ, ಮತ್ತು ಸಾಮಾಜಿಕವಾಗಿ ಹೊಂದಿಕೊಳ್ಳುವ, ಆರ್ಥಿಕವಾಗಿ ಲಾಭದಾಯಕ ಹಾಗೂ ಪರಿಸರಕ್ಕೆ ಅನುಕೂಲಕರ ತೋಟಗಾರಿಕಾ ಬೆಳೆಗಳ ಮೂಲಕ ಉತ್ಪಾದನೆ, ಆದಾಯ ಮತ್ತು ಜೀವನೋಪಾಯವನ್ನು ಸುಧಾರಿಸುವ ಗುರಿಯನ್ನು ಈ ಮೇಳ ಹೊಂದಿದೆ ಎಂದು ವಿವರಿಸಿದರು.

ಟಿ. ಬಿ. ಕ್ರಾಸ್ ನಿಂದ, ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಭೇಟಿ ನೀಡುವವರ ಅನುಕೂಲಕ್ಕಾಗಿ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮೇಳದ ಒಳಾಂಗಣದಲ್ಲಿ ಹಿರಿಯ ನಾಗರಿಕರ ಸಹಾಯಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಹೊರ ಜಿಲ್ಲೆಗಳಿಂದ ಬರುವ ರೈತರಿಗೆ, ಮುಂಚಿತ ಮಾಹಿತಿ ನೀಡಿದರೆ ವಸತಿ ವ್ಯವಸ್ಥೆ ಮಾಡಲಾಗುವುದು. ಮೇಳದ ವೇಳೆ IIHR ತಂತ್ರಜ್ಞಾನಗಳ ರಾಯಭಾರಿಗಳಾಗಿರುವ ಪ್ರಗತಿಪರ ರೈತರನ್ನು ಗೌರವಿಸಲಾಗುವುದು ರಾಷ್ಟ್ರೀಯ ತೋಟಗಾರಿಕಾ ಮೇಳ 2025ರ ಆಯೋಜನಾ ಕಾರ್ಯದರ್ಶಿ ಡಾ. ಶಂಕರ ಹೆಬ್ಬಾರ ತಿಳಿಸಿದರು.

ಮೇಳದಲ್ಲಿ ಬಿಡುಗಡೆಯಾಗುವ ಹೊಸ ತಳಿಗಳು

• ಸಮೃದ್ಧಿ ಕಲ್ಲಂಗಡಿ ಸೆಲೆಕ್ಷನ್-4

• ಅಂಟುಕಾಂಡ ಕೊಳೆರೋಗ ನಿರೋಧಕ ಸೋರೆಕಾಯಿ

• ಎಲೆ ಸುರುಳಿ ನಂಜಾಣು ರೋಗ ನಿರೋಧಕ ಮೆಣಸಿನಕಾಯಿ

• ಅವಕಾಡೊ (ಬೆಣ್ಣೆ ಹಣ್ಣು)

• ಜಾವಾ ರೋಸ್ ಆಪಲ್

• ಅರ್ಕ ಹಲಸಿನಕಾಯಿ

Ramesh Babu

Journalist

Recent Posts

ಮಾಸ್ಕ್ ರಾಬರಿ ಗ್ಯಾಂಗ್ ಫುಲ್ ಆ್ಯಕ್ಟೀವ್: ಒಂದೇ ದಿನ ಮೂರು ಮನೆಗಳಲ್ಲಿ ಕಳ್ಳತನ

ದೇವನಹಳ್ಳಿ ಹೊರ ವಲಯದಲ್ಲಿ ಮಾಸ್ಕ್ ರಾಬರಿ ಗ್ಯಾಂಗ್ ಫುಲ್ ಆ್ಯಕ್ಟೀವ್ ಆಗಿದೆ.. ಆವತಿ ಗ್ರಾಮದಲ್ಲಿ ಒಂದೇ ದಿನ ಮೂರು ಮನೆಗಳಲ್ಲಿ…

32 minutes ago

ಯುಗಾದಿ ಹಬ್ಬದ ಸಂದರ್ಭದಲ್ಲಿ ಇಸ್ಪೀಟ್ ಆಡುವ ವಿಚಾರ: ಯುವಕರ ನಡುವೆ ಗಲಾಟೆ: ದೊಣ್ಣೆ ಹಿಡಿದು ಬಡಿದಾಡಿಕೊಂಡ ಯುವಕರ ಗುಂಪು

ಯುಗಾದಿ ಹಬ್ಬದ ಸಂದರ್ಭದಲ್ಲಿ ಇಸ್ಪೀಟ್ ಆಡುವ ವಿಚಾರಕ್ಕೆ ಯುವಕರು ದೊಣ್ಣೆ ಹಿಡಿದು ಬಡಿದಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕಂಚಿಗನಾಳ ಗ್ರಾಮದಲ್ಲಿ…

57 minutes ago

ಉಪಚುನಾವಣೆ, ಪ್ರಚಾರ ಮತ್ತು ಅದಕ್ಕಾಗಿ ಪಡುತ್ತಿರುವ ಶ್ರಮ……

ಹಾಲಿ ಶಾಸಕರ ನಿಧನದಿಂದಾಗಿ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದೆ. ಈಗ ನಾವು ಅವರ ಕುಟುಂಬಗಳ ನಿರ್ವಹಣೆಗಾಗಿ,…

8 hours ago

ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು…

20 hours ago

ಮಾ.21, 22ರಂದು ಹಾದ್ರೀಪುರ ‌ಕ್ರಿಕೆಟ್ ಟೂರ್ನಮೆಂಟ್

ಮಾ.21, 22ರಂದು ದೊಡ್ಡಬಳ್ಳಾಪುರದ‌ ಹಾದ್ರೀಪುರ ಗ್ರಾಮದಲ್ಲಿ‌ ಎರಡನೇ‌ ವರ್ಷದ ಹಾದ್ರೀಪುರ ‌ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ... ಜೈ ಆಂಜನೇಯ, ರಾಕ್…

20 hours ago

ಎಲ್‌ಪಿಜಿ ಸಿಲಿಂಡರ್ ಗಾಗಿ ಮುಗಿಬಿದ್ದ ಜನ

ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಕ್ಕಟ್ಟು ಭಾರತಕ್ಕೂ ತಟ್ಟಿರುವ ಹಿನ್ನೆಲೆ ದೇಶಾದ್ಯಂತ ಅಡುಗೆ ಅನಿಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಪ್ರಸ್ತುತ…

1 day ago