ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ(ಐಐಎಚ್ಆರ್) ಆವರಣದಲ್ಲಿ ಫೆ.27ರಿಂದ ಮಾರ್ಚ್ 1ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ 2025’ ಆಯೋಜಿಸಲಾಗಿದೆ ಎಂದು ಐಐಎಚ್ಆರ್ ನಿರ್ದೇಶಕ ತುಷಾರ್ ಕಾಂತಿ ಬೆಹೆರಾ ಮಾಹಿತಿ ನೀಡಿದರು.
ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ (ICAR-IIHR) ಸಭಾಂಗಣದಲ್ಲಿ ನಡೆದ ಮಾಧ್ಯಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಕಸಿತ ತೋಟಗಾರಿಕೆ ಭಾರತಕ್ಕಾಗಿ ಪೋಷಣೆ, ಸಬಲೀಕರಣ ಮತ್ತು ಜೀವನೋಪಾಯ’ ಶೀರ್ಷಿಕೆ ಅಡಿಯಲ್ಲಿ ಉತ್ತಮ ಪೌಷ್ಟಿಕಾಂಶಯುತ್ತ ಬೆಳೆ ಬೆಳೆಯುವ ತಂತ್ರಜ್ಞಾನ, ಹೊಸ ತಳಿಗಳು, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಸೇರಿದಂತೆ ತೋಟಗಾರಿಕೆ ಕ್ಷೇತ್ರದ ಹಲವು ಸಂಶೋಧನೆಗಳು ಮೇಳದಲ್ಲಿ ಅನಾವರಣಗೊಳ್ಳಲಿವೆ ಎಂದರು.
20 ರಾಜ್ಯಗಳಿಂದ ರೈತರು ಪಾಲ್ಗೊಳ್ಳಲಿದ್ದಾರೆ. ನಮ್ಮ ರಾಜ್ಯದ 30 ಜಿಲ್ಲೆಗಳಿಂದಲೂ ರೈತರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಹೊರ ರಾಜ್ಯದ ರೈತರಿಗೆ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಮಳಿಗೆಗಳಲ್ಲಿ ಸಸಿಗಳು ಮತ್ತು ಬೀಜಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ’ ಎಂದರು.
ಟಿ. ಬಿ. ಕ್ರಾಸ್ ನಿಂದ, ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಭೇಟಿ ನೀಡುವವರ ಅನುಕೂಲಕ್ಕಾಗಿ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮೇಳದ ಒಳಾಂಗಣದಲ್ಲಿ ಹಿರಿಯ ನಾಗರಿಕರ ಸಹಾಯಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಹೊರ ಜಿಲ್ಲೆಗಳಿಂದ ಬರುವ ರೈತರಿಗೆ, ಮುಂಚಿತ ಮಾಹಿತಿ ನೀಡಿದರೆ ವಸತಿ ವ್ಯವಸ್ಥೆ ಮಾಡಲಾಗುವುದು. ಮೇಳದ ವೇಳೆ IIHR ತಂತ್ರಜ್ಞಾನಗಳ ರಾಯಭಾರಿಗಳಾಗಿರುವ ಪ್ರಗತಿಪರ ರೈತರನ್ನು ಗೌರವಿಸಲಾಗುವುದು ರಾಷ್ಟ್ರೀಯ ತೋಟಗಾರಿಕಾ ಮೇಳ 2025ರ ಆಯೋಜನಾ ಕಾರ್ಯದರ್ಶಿ ಡಾ. ಶಂಕರ ಹೆಬ್ಬಾರ ತಿಳಿಸಿದರು.
• ಸಮೃದ್ಧಿ ಕಲ್ಲಂಗಡಿ ಸೆಲೆಕ್ಷನ್-4
• ಅಂಟುಕಾಂಡ ಕೊಳೆರೋಗ ನಿರೋಧಕ ಸೋರೆಕಾಯಿ
• ಎಲೆ ಸುರುಳಿ ನಂಜಾಣು ರೋಗ ನಿರೋಧಕ ಮೆಣಸಿನಕಾಯಿ
• ಅವಕಾಡೊ (ಬೆಣ್ಣೆ ಹಣ್ಣು)
• ಜಾವಾ ರೋಸ್ ಆಪಲ್
• ಅರ್ಕ ಹಲಸಿನಕಾಯಿ
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…