ಹೆಸರಘಟ್ಟದ ಐಐಎಚ್‌ಆರ್ ಆವರಣದಲ್ಲಿ ಫೆ. 27ರಿಂದ ರಾಷ್ಟ್ರೀಯ ತೋಟಗಾರಿಕೆ ಮೇಳ

ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ(ಐಐಎಚ್‌ಆರ್) ಆವರಣದಲ್ಲಿ ಫೆ.27ರಿಂದ ಮಾರ್ಚ್ 1ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ 2025’ ಆಯೋಜಿಸಲಾಗಿದೆ‌ ಎಂದು‌ ಐಐಎಚ್‌ಆರ್ ನಿರ್ದೇಶಕ ತುಷಾರ್ ಕಾಂತಿ ಬೆಹೆರಾ ಮಾಹಿತಿ ನೀಡಿದರು.

ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ (ICAR-IIHR) ಸಭಾಂಗಣದಲ್ಲಿ ನಡೆದ‌ ಮಾಧ್ಯಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಕಸಿತ ತೋಟಗಾರಿಕೆ ಭಾರತಕ್ಕಾಗಿ ಪೋಷಣೆ, ಸಬಲೀಕರಣ ಮತ್ತು ಜೀವನೋಪಾಯ’ ಶೀರ್ಷಿಕೆ ಅಡಿಯಲ್ಲಿ ಉತ್ತಮ ಪೌಷ್ಟಿಕಾಂಶಯುತ್ತ ಬೆಳೆ ಬೆಳೆಯುವ ತಂತ್ರಜ್ಞಾನ, ಹೊಸ ತಳಿಗಳು, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಸೇರಿದಂತೆ ತೋಟಗಾರಿಕೆ ಕ್ಷೇತ್ರದ ಹಲವು ಸಂಶೋಧನೆಗಳು ಮೇಳದಲ್ಲಿ ಅನಾವರಣಗೊಳ್ಳಲಿವೆ ಎಂದರು.

ಮೇಳದಲ್ಲಿ 250ಕ್ಕೂ ಹೆಚ್ಚು ಸಂಸ್ಥೆಗಳು ಪಾಲ್ಗೊಳ್ಳಲಿವೆ. 190ಕ್ಕೂ ಹೆಚ್ಚು ವೈವಿಧ್ಯಮಯ ಮಳಿಗೆಗಳಿರುತ್ತವೆ. 75,000ಕ್ಕೂ ಹೆಚ್ಚಿನ ರೈತರು ಮತ್ತು ತೋಟಗಾರಿಕಾ ಕ್ಷೇತ್ರದ ಇತರೆ ಭಾಗಿದಾರರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ನಂದೀಶ್.ಪಿ ತಿಳಿಸಿದರು.

20 ರಾಜ್ಯಗಳಿಂದ ರೈತರು ಪಾಲ್ಗೊಳ್ಳಲಿದ್ದಾರೆ. ನಮ್ಮ ರಾಜ್ಯದ 30 ಜಿಲ್ಲೆಗಳಿಂದಲೂ ರೈತರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಹೊರ ರಾಜ್ಯದ ರೈತರಿಗೆ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಮಳಿಗೆಗಳಲ್ಲಿ ಸಸಿಗಳು ಮತ್ತು ಬೀಜಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ’ ಎಂದರು.

ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅನುಕೂಲಕರ ತಂತ್ರಜ್ಞಾನಗಳನ್ನು ಪರಿಚಯಿಸುವ, ಮತ್ತು ಸಾಮಾಜಿಕವಾಗಿ ಹೊಂದಿಕೊಳ್ಳುವ, ಆರ್ಥಿಕವಾಗಿ ಲಾಭದಾಯಕ ಹಾಗೂ ಪರಿಸರಕ್ಕೆ ಅನುಕೂಲಕರ ತೋಟಗಾರಿಕಾ ಬೆಳೆಗಳ ಮೂಲಕ ಉತ್ಪಾದನೆ, ಆದಾಯ ಮತ್ತು ಜೀವನೋಪಾಯವನ್ನು ಸುಧಾರಿಸುವ ಗುರಿಯನ್ನು ಈ ಮೇಳ ಹೊಂದಿದೆ ಎಂದು ವಿವರಿಸಿದರು.

ಟಿ. ಬಿ. ಕ್ರಾಸ್ ನಿಂದ, ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಭೇಟಿ ನೀಡುವವರ ಅನುಕೂಲಕ್ಕಾಗಿ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮೇಳದ ಒಳಾಂಗಣದಲ್ಲಿ ಹಿರಿಯ ನಾಗರಿಕರ ಸಹಾಯಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಹೊರ ಜಿಲ್ಲೆಗಳಿಂದ ಬರುವ ರೈತರಿಗೆ, ಮುಂಚಿತ ಮಾಹಿತಿ ನೀಡಿದರೆ ವಸತಿ ವ್ಯವಸ್ಥೆ ಮಾಡಲಾಗುವುದು. ಮೇಳದ ವೇಳೆ IIHR ತಂತ್ರಜ್ಞಾನಗಳ ರಾಯಭಾರಿಗಳಾಗಿರುವ ಪ್ರಗತಿಪರ ರೈತರನ್ನು ಗೌರವಿಸಲಾಗುವುದು ರಾಷ್ಟ್ರೀಯ ತೋಟಗಾರಿಕಾ ಮೇಳ 2025ರ ಆಯೋಜನಾ ಕಾರ್ಯದರ್ಶಿ ಡಾ. ಶಂಕರ ಹೆಬ್ಬಾರ ತಿಳಿಸಿದರು.

ಮೇಳದಲ್ಲಿ ಬಿಡುಗಡೆಯಾಗುವ ಹೊಸ ತಳಿಗಳು

• ಸಮೃದ್ಧಿ ಕಲ್ಲಂಗಡಿ ಸೆಲೆಕ್ಷನ್-4

• ಅಂಟುಕಾಂಡ ಕೊಳೆರೋಗ ನಿರೋಧಕ ಸೋರೆಕಾಯಿ

• ಎಲೆ ಸುರುಳಿ ನಂಜಾಣು ರೋಗ ನಿರೋಧಕ ಮೆಣಸಿನಕಾಯಿ

• ಅವಕಾಡೊ (ಬೆಣ್ಣೆ ಹಣ್ಣು)

• ಜಾವಾ ರೋಸ್ ಆಪಲ್

• ಅರ್ಕ ಹಲಸಿನಕಾಯಿ

Ramesh Babu

Journalist

Recent Posts

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

1 hour ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

4 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

17 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

1 day ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

1 day ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

2 days ago