ಹೆಸರಘಟ್ಟದ ಐಐಎಚ್‌ಆರ್ ಆವರಣದಲ್ಲಿ ಫೆ. 27ರಿಂದ ರಾಷ್ಟ್ರೀಯ ತೋಟಗಾರಿಕೆ ಮೇಳ

ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ(ಐಐಎಚ್‌ಆರ್) ಆವರಣದಲ್ಲಿ ಫೆ.27ರಿಂದ ಮಾರ್ಚ್ 1ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ 2025’ ಆಯೋಜಿಸಲಾಗಿದೆ‌ ಎಂದು‌ ಐಐಎಚ್‌ಆರ್ ನಿರ್ದೇಶಕ ತುಷಾರ್ ಕಾಂತಿ ಬೆಹೆರಾ ಮಾಹಿತಿ ನೀಡಿದರು.

ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ (ICAR-IIHR) ಸಭಾಂಗಣದಲ್ಲಿ ನಡೆದ‌ ಮಾಧ್ಯಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಕಸಿತ ತೋಟಗಾರಿಕೆ ಭಾರತಕ್ಕಾಗಿ ಪೋಷಣೆ, ಸಬಲೀಕರಣ ಮತ್ತು ಜೀವನೋಪಾಯ’ ಶೀರ್ಷಿಕೆ ಅಡಿಯಲ್ಲಿ ಉತ್ತಮ ಪೌಷ್ಟಿಕಾಂಶಯುತ್ತ ಬೆಳೆ ಬೆಳೆಯುವ ತಂತ್ರಜ್ಞಾನ, ಹೊಸ ತಳಿಗಳು, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಸೇರಿದಂತೆ ತೋಟಗಾರಿಕೆ ಕ್ಷೇತ್ರದ ಹಲವು ಸಂಶೋಧನೆಗಳು ಮೇಳದಲ್ಲಿ ಅನಾವರಣಗೊಳ್ಳಲಿವೆ ಎಂದರು.

ಮೇಳದಲ್ಲಿ 250ಕ್ಕೂ ಹೆಚ್ಚು ಸಂಸ್ಥೆಗಳು ಪಾಲ್ಗೊಳ್ಳಲಿವೆ. 190ಕ್ಕೂ ಹೆಚ್ಚು ವೈವಿಧ್ಯಮಯ ಮಳಿಗೆಗಳಿರುತ್ತವೆ. 75,000ಕ್ಕೂ ಹೆಚ್ಚಿನ ರೈತರು ಮತ್ತು ತೋಟಗಾರಿಕಾ ಕ್ಷೇತ್ರದ ಇತರೆ ಭಾಗಿದಾರರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ನಂದೀಶ್.ಪಿ ತಿಳಿಸಿದರು.

20 ರಾಜ್ಯಗಳಿಂದ ರೈತರು ಪಾಲ್ಗೊಳ್ಳಲಿದ್ದಾರೆ. ನಮ್ಮ ರಾಜ್ಯದ 30 ಜಿಲ್ಲೆಗಳಿಂದಲೂ ರೈತರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಹೊರ ರಾಜ್ಯದ ರೈತರಿಗೆ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಮಳಿಗೆಗಳಲ್ಲಿ ಸಸಿಗಳು ಮತ್ತು ಬೀಜಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ’ ಎಂದರು.

ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅನುಕೂಲಕರ ತಂತ್ರಜ್ಞಾನಗಳನ್ನು ಪರಿಚಯಿಸುವ, ಮತ್ತು ಸಾಮಾಜಿಕವಾಗಿ ಹೊಂದಿಕೊಳ್ಳುವ, ಆರ್ಥಿಕವಾಗಿ ಲಾಭದಾಯಕ ಹಾಗೂ ಪರಿಸರಕ್ಕೆ ಅನುಕೂಲಕರ ತೋಟಗಾರಿಕಾ ಬೆಳೆಗಳ ಮೂಲಕ ಉತ್ಪಾದನೆ, ಆದಾಯ ಮತ್ತು ಜೀವನೋಪಾಯವನ್ನು ಸುಧಾರಿಸುವ ಗುರಿಯನ್ನು ಈ ಮೇಳ ಹೊಂದಿದೆ ಎಂದು ವಿವರಿಸಿದರು.

ಟಿ. ಬಿ. ಕ್ರಾಸ್ ನಿಂದ, ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಭೇಟಿ ನೀಡುವವರ ಅನುಕೂಲಕ್ಕಾಗಿ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮೇಳದ ಒಳಾಂಗಣದಲ್ಲಿ ಹಿರಿಯ ನಾಗರಿಕರ ಸಹಾಯಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಹೊರ ಜಿಲ್ಲೆಗಳಿಂದ ಬರುವ ರೈತರಿಗೆ, ಮುಂಚಿತ ಮಾಹಿತಿ ನೀಡಿದರೆ ವಸತಿ ವ್ಯವಸ್ಥೆ ಮಾಡಲಾಗುವುದು. ಮೇಳದ ವೇಳೆ IIHR ತಂತ್ರಜ್ಞಾನಗಳ ರಾಯಭಾರಿಗಳಾಗಿರುವ ಪ್ರಗತಿಪರ ರೈತರನ್ನು ಗೌರವಿಸಲಾಗುವುದು ರಾಷ್ಟ್ರೀಯ ತೋಟಗಾರಿಕಾ ಮೇಳ 2025ರ ಆಯೋಜನಾ ಕಾರ್ಯದರ್ಶಿ ಡಾ. ಶಂಕರ ಹೆಬ್ಬಾರ ತಿಳಿಸಿದರು.

ಮೇಳದಲ್ಲಿ ಬಿಡುಗಡೆಯಾಗುವ ಹೊಸ ತಳಿಗಳು

• ಸಮೃದ್ಧಿ ಕಲ್ಲಂಗಡಿ ಸೆಲೆಕ್ಷನ್-4

• ಅಂಟುಕಾಂಡ ಕೊಳೆರೋಗ ನಿರೋಧಕ ಸೋರೆಕಾಯಿ

• ಎಲೆ ಸುರುಳಿ ನಂಜಾಣು ರೋಗ ನಿರೋಧಕ ಮೆಣಸಿನಕಾಯಿ

• ಅವಕಾಡೊ (ಬೆಣ್ಣೆ ಹಣ್ಣು)

• ಜಾವಾ ರೋಸ್ ಆಪಲ್

• ಅರ್ಕ ಹಲಸಿನಕಾಯಿ

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

9 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

21 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

22 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

23 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

24 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago