ಹೆಸರಘಟ್ಟದ ಐಐಎಚ್‌ಆರ್ ಆವರಣದಲ್ಲಿ ಫೆ. 27ರಿಂದ ರಾಷ್ಟ್ರೀಯ ತೋಟಗಾರಿಕೆ ಮೇಳ

ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ(ಐಐಎಚ್‌ಆರ್) ಆವರಣದಲ್ಲಿ ಫೆ.27ರಿಂದ ಮಾರ್ಚ್ 1ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ 2025’ ಆಯೋಜಿಸಲಾಗಿದೆ‌ ಎಂದು‌ ಐಐಎಚ್‌ಆರ್ ನಿರ್ದೇಶಕ ತುಷಾರ್ ಕಾಂತಿ ಬೆಹೆರಾ ಮಾಹಿತಿ ನೀಡಿದರು.

ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ (ICAR-IIHR) ಸಭಾಂಗಣದಲ್ಲಿ ನಡೆದ‌ ಮಾಧ್ಯಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಕಸಿತ ತೋಟಗಾರಿಕೆ ಭಾರತಕ್ಕಾಗಿ ಪೋಷಣೆ, ಸಬಲೀಕರಣ ಮತ್ತು ಜೀವನೋಪಾಯ’ ಶೀರ್ಷಿಕೆ ಅಡಿಯಲ್ಲಿ ಉತ್ತಮ ಪೌಷ್ಟಿಕಾಂಶಯುತ್ತ ಬೆಳೆ ಬೆಳೆಯುವ ತಂತ್ರಜ್ಞಾನ, ಹೊಸ ತಳಿಗಳು, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಸೇರಿದಂತೆ ತೋಟಗಾರಿಕೆ ಕ್ಷೇತ್ರದ ಹಲವು ಸಂಶೋಧನೆಗಳು ಮೇಳದಲ್ಲಿ ಅನಾವರಣಗೊಳ್ಳಲಿವೆ ಎಂದರು.

ಮೇಳದಲ್ಲಿ 250ಕ್ಕೂ ಹೆಚ್ಚು ಸಂಸ್ಥೆಗಳು ಪಾಲ್ಗೊಳ್ಳಲಿವೆ. 190ಕ್ಕೂ ಹೆಚ್ಚು ವೈವಿಧ್ಯಮಯ ಮಳಿಗೆಗಳಿರುತ್ತವೆ. 75,000ಕ್ಕೂ ಹೆಚ್ಚಿನ ರೈತರು ಮತ್ತು ತೋಟಗಾರಿಕಾ ಕ್ಷೇತ್ರದ ಇತರೆ ಭಾಗಿದಾರರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ನಂದೀಶ್.ಪಿ ತಿಳಿಸಿದರು.

20 ರಾಜ್ಯಗಳಿಂದ ರೈತರು ಪಾಲ್ಗೊಳ್ಳಲಿದ್ದಾರೆ. ನಮ್ಮ ರಾಜ್ಯದ 30 ಜಿಲ್ಲೆಗಳಿಂದಲೂ ರೈತರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಹೊರ ರಾಜ್ಯದ ರೈತರಿಗೆ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಮಳಿಗೆಗಳಲ್ಲಿ ಸಸಿಗಳು ಮತ್ತು ಬೀಜಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ’ ಎಂದರು.

ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅನುಕೂಲಕರ ತಂತ್ರಜ್ಞಾನಗಳನ್ನು ಪರಿಚಯಿಸುವ, ಮತ್ತು ಸಾಮಾಜಿಕವಾಗಿ ಹೊಂದಿಕೊಳ್ಳುವ, ಆರ್ಥಿಕವಾಗಿ ಲಾಭದಾಯಕ ಹಾಗೂ ಪರಿಸರಕ್ಕೆ ಅನುಕೂಲಕರ ತೋಟಗಾರಿಕಾ ಬೆಳೆಗಳ ಮೂಲಕ ಉತ್ಪಾದನೆ, ಆದಾಯ ಮತ್ತು ಜೀವನೋಪಾಯವನ್ನು ಸುಧಾರಿಸುವ ಗುರಿಯನ್ನು ಈ ಮೇಳ ಹೊಂದಿದೆ ಎಂದು ವಿವರಿಸಿದರು.

ಟಿ. ಬಿ. ಕ್ರಾಸ್ ನಿಂದ, ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಭೇಟಿ ನೀಡುವವರ ಅನುಕೂಲಕ್ಕಾಗಿ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮೇಳದ ಒಳಾಂಗಣದಲ್ಲಿ ಹಿರಿಯ ನಾಗರಿಕರ ಸಹಾಯಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಹೊರ ಜಿಲ್ಲೆಗಳಿಂದ ಬರುವ ರೈತರಿಗೆ, ಮುಂಚಿತ ಮಾಹಿತಿ ನೀಡಿದರೆ ವಸತಿ ವ್ಯವಸ್ಥೆ ಮಾಡಲಾಗುವುದು. ಮೇಳದ ವೇಳೆ IIHR ತಂತ್ರಜ್ಞಾನಗಳ ರಾಯಭಾರಿಗಳಾಗಿರುವ ಪ್ರಗತಿಪರ ರೈತರನ್ನು ಗೌರವಿಸಲಾಗುವುದು ರಾಷ್ಟ್ರೀಯ ತೋಟಗಾರಿಕಾ ಮೇಳ 2025ರ ಆಯೋಜನಾ ಕಾರ್ಯದರ್ಶಿ ಡಾ. ಶಂಕರ ಹೆಬ್ಬಾರ ತಿಳಿಸಿದರು.

ಮೇಳದಲ್ಲಿ ಬಿಡುಗಡೆಯಾಗುವ ಹೊಸ ತಳಿಗಳು

• ಸಮೃದ್ಧಿ ಕಲ್ಲಂಗಡಿ ಸೆಲೆಕ್ಷನ್-4

• ಅಂಟುಕಾಂಡ ಕೊಳೆರೋಗ ನಿರೋಧಕ ಸೋರೆಕಾಯಿ

• ಎಲೆ ಸುರುಳಿ ನಂಜಾಣು ರೋಗ ನಿರೋಧಕ ಮೆಣಸಿನಕಾಯಿ

• ಅವಕಾಡೊ (ಬೆಣ್ಣೆ ಹಣ್ಣು)

• ಜಾವಾ ರೋಸ್ ಆಪಲ್

• ಅರ್ಕ ಹಲಸಿನಕಾಯಿ

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

3 minutes ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

12 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

13 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

16 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

16 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

21 hours ago