ಹೆಸರಘಟ್ಟದ ಐಐಎಚ್‌ಆರ್ ಆವರಣದಲ್ಲಿ ಫೆ. 27ರಿಂದ ರಾಷ್ಟ್ರೀಯ ತೋಟಗಾರಿಕೆ ಮೇಳ

ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ(ಐಐಎಚ್‌ಆರ್) ಆವರಣದಲ್ಲಿ ಫೆ.27ರಿಂದ ಮಾರ್ಚ್ 1ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ 2025’ ಆಯೋಜಿಸಲಾಗಿದೆ‌ ಎಂದು‌ ಐಐಎಚ್‌ಆರ್ ನಿರ್ದೇಶಕ ತುಷಾರ್ ಕಾಂತಿ ಬೆಹೆರಾ ಮಾಹಿತಿ ನೀಡಿದರು.

ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ (ICAR-IIHR) ಸಭಾಂಗಣದಲ್ಲಿ ನಡೆದ‌ ಮಾಧ್ಯಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಕಸಿತ ತೋಟಗಾರಿಕೆ ಭಾರತಕ್ಕಾಗಿ ಪೋಷಣೆ, ಸಬಲೀಕರಣ ಮತ್ತು ಜೀವನೋಪಾಯ’ ಶೀರ್ಷಿಕೆ ಅಡಿಯಲ್ಲಿ ಉತ್ತಮ ಪೌಷ್ಟಿಕಾಂಶಯುತ್ತ ಬೆಳೆ ಬೆಳೆಯುವ ತಂತ್ರಜ್ಞಾನ, ಹೊಸ ತಳಿಗಳು, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಸೇರಿದಂತೆ ತೋಟಗಾರಿಕೆ ಕ್ಷೇತ್ರದ ಹಲವು ಸಂಶೋಧನೆಗಳು ಮೇಳದಲ್ಲಿ ಅನಾವರಣಗೊಳ್ಳಲಿವೆ ಎಂದರು.

ಮೇಳದಲ್ಲಿ 250ಕ್ಕೂ ಹೆಚ್ಚು ಸಂಸ್ಥೆಗಳು ಪಾಲ್ಗೊಳ್ಳಲಿವೆ. 190ಕ್ಕೂ ಹೆಚ್ಚು ವೈವಿಧ್ಯಮಯ ಮಳಿಗೆಗಳಿರುತ್ತವೆ. 75,000ಕ್ಕೂ ಹೆಚ್ಚಿನ ರೈತರು ಮತ್ತು ತೋಟಗಾರಿಕಾ ಕ್ಷೇತ್ರದ ಇತರೆ ಭಾಗಿದಾರರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ನಂದೀಶ್.ಪಿ ತಿಳಿಸಿದರು.

20 ರಾಜ್ಯಗಳಿಂದ ರೈತರು ಪಾಲ್ಗೊಳ್ಳಲಿದ್ದಾರೆ. ನಮ್ಮ ರಾಜ್ಯದ 30 ಜಿಲ್ಲೆಗಳಿಂದಲೂ ರೈತರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಹೊರ ರಾಜ್ಯದ ರೈತರಿಗೆ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಮಳಿಗೆಗಳಲ್ಲಿ ಸಸಿಗಳು ಮತ್ತು ಬೀಜಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ’ ಎಂದರು.

ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅನುಕೂಲಕರ ತಂತ್ರಜ್ಞಾನಗಳನ್ನು ಪರಿಚಯಿಸುವ, ಮತ್ತು ಸಾಮಾಜಿಕವಾಗಿ ಹೊಂದಿಕೊಳ್ಳುವ, ಆರ್ಥಿಕವಾಗಿ ಲಾಭದಾಯಕ ಹಾಗೂ ಪರಿಸರಕ್ಕೆ ಅನುಕೂಲಕರ ತೋಟಗಾರಿಕಾ ಬೆಳೆಗಳ ಮೂಲಕ ಉತ್ಪಾದನೆ, ಆದಾಯ ಮತ್ತು ಜೀವನೋಪಾಯವನ್ನು ಸುಧಾರಿಸುವ ಗುರಿಯನ್ನು ಈ ಮೇಳ ಹೊಂದಿದೆ ಎಂದು ವಿವರಿಸಿದರು.

ಟಿ. ಬಿ. ಕ್ರಾಸ್ ನಿಂದ, ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಭೇಟಿ ನೀಡುವವರ ಅನುಕೂಲಕ್ಕಾಗಿ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮೇಳದ ಒಳಾಂಗಣದಲ್ಲಿ ಹಿರಿಯ ನಾಗರಿಕರ ಸಹಾಯಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಹೊರ ಜಿಲ್ಲೆಗಳಿಂದ ಬರುವ ರೈತರಿಗೆ, ಮುಂಚಿತ ಮಾಹಿತಿ ನೀಡಿದರೆ ವಸತಿ ವ್ಯವಸ್ಥೆ ಮಾಡಲಾಗುವುದು. ಮೇಳದ ವೇಳೆ IIHR ತಂತ್ರಜ್ಞಾನಗಳ ರಾಯಭಾರಿಗಳಾಗಿರುವ ಪ್ರಗತಿಪರ ರೈತರನ್ನು ಗೌರವಿಸಲಾಗುವುದು ರಾಷ್ಟ್ರೀಯ ತೋಟಗಾರಿಕಾ ಮೇಳ 2025ರ ಆಯೋಜನಾ ಕಾರ್ಯದರ್ಶಿ ಡಾ. ಶಂಕರ ಹೆಬ್ಬಾರ ತಿಳಿಸಿದರು.

ಮೇಳದಲ್ಲಿ ಬಿಡುಗಡೆಯಾಗುವ ಹೊಸ ತಳಿಗಳು

• ಸಮೃದ್ಧಿ ಕಲ್ಲಂಗಡಿ ಸೆಲೆಕ್ಷನ್-4

• ಅಂಟುಕಾಂಡ ಕೊಳೆರೋಗ ನಿರೋಧಕ ಸೋರೆಕಾಯಿ

• ಎಲೆ ಸುರುಳಿ ನಂಜಾಣು ರೋಗ ನಿರೋಧಕ ಮೆಣಸಿನಕಾಯಿ

• ಅವಕಾಡೊ (ಬೆಣ್ಣೆ ಹಣ್ಣು)

• ಜಾವಾ ರೋಸ್ ಆಪಲ್

• ಅರ್ಕ ಹಲಸಿನಕಾಯಿ

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

4 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

9 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago