ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ(ಐಐಎಚ್ಆರ್) ಆವರಣದಲ್ಲಿ ಫೆ.27ರಿಂದ ಮಾರ್ಚ್ 1ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ 2025’ ಆಯೋಜಿಸಲಾಗಿದೆ ಎಂದು ಐಐಎಚ್ಆರ್ ನಿರ್ದೇಶಕ ತುಷಾರ್ ಕಾಂತಿ ಬೆಹೆರಾ ಮಾಹಿತಿ ನೀಡಿದರು.
ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ (ICAR-IIHR) ಸಭಾಂಗಣದಲ್ಲಿ ನಡೆದ ಮಾಧ್ಯಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಕಸಿತ ತೋಟಗಾರಿಕೆ ಭಾರತಕ್ಕಾಗಿ ಪೋಷಣೆ, ಸಬಲೀಕರಣ ಮತ್ತು ಜೀವನೋಪಾಯ’ ಶೀರ್ಷಿಕೆ ಅಡಿಯಲ್ಲಿ ಉತ್ತಮ ಪೌಷ್ಟಿಕಾಂಶಯುತ್ತ ಬೆಳೆ ಬೆಳೆಯುವ ತಂತ್ರಜ್ಞಾನ, ಹೊಸ ತಳಿಗಳು, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಸೇರಿದಂತೆ ತೋಟಗಾರಿಕೆ ಕ್ಷೇತ್ರದ ಹಲವು ಸಂಶೋಧನೆಗಳು ಮೇಳದಲ್ಲಿ ಅನಾವರಣಗೊಳ್ಳಲಿವೆ ಎಂದರು.
20 ರಾಜ್ಯಗಳಿಂದ ರೈತರು ಪಾಲ್ಗೊಳ್ಳಲಿದ್ದಾರೆ. ನಮ್ಮ ರಾಜ್ಯದ 30 ಜಿಲ್ಲೆಗಳಿಂದಲೂ ರೈತರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಹೊರ ರಾಜ್ಯದ ರೈತರಿಗೆ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಮಳಿಗೆಗಳಲ್ಲಿ ಸಸಿಗಳು ಮತ್ತು ಬೀಜಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ’ ಎಂದರು.
ಟಿ. ಬಿ. ಕ್ರಾಸ್ ನಿಂದ, ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಭೇಟಿ ನೀಡುವವರ ಅನುಕೂಲಕ್ಕಾಗಿ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮೇಳದ ಒಳಾಂಗಣದಲ್ಲಿ ಹಿರಿಯ ನಾಗರಿಕರ ಸಹಾಯಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಹೊರ ಜಿಲ್ಲೆಗಳಿಂದ ಬರುವ ರೈತರಿಗೆ, ಮುಂಚಿತ ಮಾಹಿತಿ ನೀಡಿದರೆ ವಸತಿ ವ್ಯವಸ್ಥೆ ಮಾಡಲಾಗುವುದು. ಮೇಳದ ವೇಳೆ IIHR ತಂತ್ರಜ್ಞಾನಗಳ ರಾಯಭಾರಿಗಳಾಗಿರುವ ಪ್ರಗತಿಪರ ರೈತರನ್ನು ಗೌರವಿಸಲಾಗುವುದು ರಾಷ್ಟ್ರೀಯ ತೋಟಗಾರಿಕಾ ಮೇಳ 2025ರ ಆಯೋಜನಾ ಕಾರ್ಯದರ್ಶಿ ಡಾ. ಶಂಕರ ಹೆಬ್ಬಾರ ತಿಳಿಸಿದರು.
• ಸಮೃದ್ಧಿ ಕಲ್ಲಂಗಡಿ ಸೆಲೆಕ್ಷನ್-4
• ಅಂಟುಕಾಂಡ ಕೊಳೆರೋಗ ನಿರೋಧಕ ಸೋರೆಕಾಯಿ
• ಎಲೆ ಸುರುಳಿ ನಂಜಾಣು ರೋಗ ನಿರೋಧಕ ಮೆಣಸಿನಕಾಯಿ
• ಅವಕಾಡೊ (ಬೆಣ್ಣೆ ಹಣ್ಣು)
• ಜಾವಾ ರೋಸ್ ಆಪಲ್
• ಅರ್ಕ ಹಲಸಿನಕಾಯಿ
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…