ಹೇಮಂತ್ ಗೌಡ ಕೊಲೆ ಪ್ರಕರಣದ A2 ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು: ಬಂಧನಕ್ಕೆ ತೆರಳಿದ ವೇಳೆ ಪೊಲೀಸರ ಮೇಲೆ ಆರೋಪಿ ಹಲ್ಲೆ ಯತ್ನ: ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಹೇಮಂತ್ ಗೌಡ ಕೊಲೆ ಪ್ರಕರಣದ ಎ2 ಆರೋಪಿಯಾದ ರೌಡಿಶೀಟರ್ ಶ್ರೀನಿವಾಸ್ ಎಂಬಾತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ ರಾಜಾನುಕುಂಟೆ ಸಮೀಪದ ಶ್ರೀರಾಮನಹಳ್ಳಿಯಲ್ಲಿ ಶುಕ್ರವಾರ ಬೆಳಿಗ್ಗೆ 6:45ರ ಸಮಯದಲ್ಲಿ ನಡೆದಿದೆ.

ಇಂದು‌ ಬೆಳಗ್ಗೆ ಖಚಿತ ಮಾಹಿತಿ ಮೆರೆಗೆ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾದ ಶ್ರೀನಿವಾಸ್ ಬಂಧನಕ್ಕೆ ತೆರಳಿದ ವೇಳೆ ಪೊಲೀಸರ ಮೇಲೆ ಆರೋಪಿ ಹಲ್ಲೆ ಯತ್ನ ಮಾಡಿದಾಗ ಆತ್ಮರಕ್ಷಣೆಗಾಗಿ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಎನ್ನಲಾಗಿದೆ.

 ಗಾಯಾಳು ಆರೋಪಿಯನ್ನು ಬಾಶೆಟ್ಟಿಹಳ್ಳಿಯ ಆಸ್ಪತ್ರೆಗೆ ದಾಖಲಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಪಿ.ರವಿ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

 ಬಾಶೆಟ್ಟಿಹಳ್ಳಿಯ ನವೋದಯ ಶಾಲೆ ಸಮೀಪ‌ ಮೇ 11 ರಂದು ಹುಸ್ಕೂರು ನಿವಾಸಿ ಹೇಮಂತ್ ಗೌಡ ಎಂಬಾತನನ್ನು ಮೇಡಹಳ್ಳಿಯ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆ ಹಾಗೂ ಆತನ ಸಹಚರರು ಭೀಕರವಾಗಿ ಹತ್ಯೆ ಮಾಡಿದ್ದರು. ಹೇಮಂತ್ ಗೌಡನನ್ನು ಹತ್ಯೆ ಮಾಡಿ ವಾಹನವೊಂದರಲ್ಲಿ ಶವದ ಜೊತೆ ಆರೋಪಿಗಳು ರೌಂಡ್ಸ್ ಹಾಕಿದ್ದರು.

ಮೇ. 11ರಂದು ಹೇಮಂತ್ ಗೌಡ ಎಂಬ ಯುವಕನನ್ನು ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆ ಮತ್ತು ಆತನ ಸಹಚರರು ಕೊಲೆ ಮಾಡಿದ್ದಾರೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ದೂರಿನ ಮೇರೆಗೆ ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ಅವರು ಈ ಕೊಲೆ ಪ್ರಕರಣದ ತನಿಖೆಯನ್ನು ಕೈಗೊಂಡು, ಕೊಲೆ ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆನನ್ನ ಇತ್ತೀಚೆಗೆ ಬಂಧಿಸಿದ್ದರು. ಇಂದು ಬೆಳಗ್ಗೆ ಸುಮಾರು 6:45 ರ ಸಮಯದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಶ್ರೀನಿವಾಸ್ ರಾಜಾನುಕುಂಟೆಯ ಶ್ರೀರಾಮನಹಳ್ಳಿ ಗೇಟ್ ಬಳಿ ಇರುವುದನ್ನು ಮಾಹಿತಿ ಪಡೆದ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದ ತಂಡ ಕೂಡಲೇ ಆತನನ್ನು ಬಂಧನ ಮಾಡಲು ಹೋಗಿದ್ದಾರೆ. ಆತ ಶ್ರೀರಾಮನಹಳ್ಳಿ ಗೇಟ್ ಬಳಿ ನಡೆದುಕೊಂಡು ಹೋಗುತ್ತಿದ್ದನು, ಆಗ ಪೊಲೀಸರು ಆತನನ್ನು ಬಂಧಿಸಲು ಹೋದಾಗ ಆರೋಪಿ ಕಲ್ಲು ತೆಗೆದುಕೊಂಡು ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಲ್ಲದೇ, ಹೆಡ್ ಕಾನ್ಸ್ ಸ್ಟೇಬಲ್ ಚಂದ್ರಶೇಖರ್ ಎಂಬುವವರಿಗೆ ಚಾಕುವಿನಿಂದ ಕೈಗೆ ಗಾಯಗೊಳಿಸಿ ಕೊಲೆ ಮಾಡಲು ಮುಂದಾಗುತ್ತಾನೆ, ಆಗ ಇನ್ಸ್ ಪೆಕ್ಟರ್ ಸಾದಿಕ್ ಪಾಷ ಅವರು ಏರ್ ಫೈರ್ ಮಾಡಿ ಆರೋಪಿಗೆ ಎಚ್ಚರಿಕೆ ನೀಡಿದರೂ ಸಹ ಪೊಲೀಸ್ ಸಿಬ್ಬಂದಿ ಮೇಲೆ ಅಟ್ಯಾಕ್ ಮಾಡಲು ಮುಂದಾಗುತ್ತಾನೆ. ಆಗ ಕಾಲಿಗೆ ಗುಂಡು ಹಾರಿಸಿ ಬಂಧನ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ‌ ಬಾಲದಂಡಿ ಅವರು ಮಾಹಿತಿ ನೀಡಿದ್ದಾರೆ.

ಆರೋಪಿ ಶ್ರೀನಿವಾಸ್ ಹಾಗೂ ಗಾಯಗೊಂಡ ಹೆಡ್ ಕಾನ್ಸ್ ಸ್ಟೇಬಲ್ ಚಂದ್ರಶೇಖರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ಶ್ರೀನಿವಾಸ್ ಎ2 ಆರೋಪಿಯಾಗಿದ್ದಾನೆ. ಈತನ ಮೇಲೆ ರೌಡಿಶೀಟರ್ ಸಹ ಇದೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

36 minutes ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

16 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

23 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago