ಹೇಮಂತ್ ಗೌಡ ಕೊಲೆ ಪ್ರಕರಣದ A2 ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು: ಬಂಧನಕ್ಕೆ ತೆರಳಿದ ವೇಳೆ ಪೊಲೀಸರ ಮೇಲೆ ಆರೋಪಿ ಹಲ್ಲೆ ಯತ್ನ: ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಹೇಮಂತ್ ಗೌಡ ಕೊಲೆ ಪ್ರಕರಣದ ಎ2 ಆರೋಪಿಯಾದ ರೌಡಿಶೀಟರ್ ಶ್ರೀನಿವಾಸ್ ಎಂಬಾತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ ರಾಜಾನುಕುಂಟೆ ಸಮೀಪದ ಶ್ರೀರಾಮನಹಳ್ಳಿಯಲ್ಲಿ ಶುಕ್ರವಾರ ಬೆಳಿಗ್ಗೆ 6:45ರ ಸಮಯದಲ್ಲಿ ನಡೆದಿದೆ.

ಇಂದು‌ ಬೆಳಗ್ಗೆ ಖಚಿತ ಮಾಹಿತಿ ಮೆರೆಗೆ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾದ ಶ್ರೀನಿವಾಸ್ ಬಂಧನಕ್ಕೆ ತೆರಳಿದ ವೇಳೆ ಪೊಲೀಸರ ಮೇಲೆ ಆರೋಪಿ ಹಲ್ಲೆ ಯತ್ನ ಮಾಡಿದಾಗ ಆತ್ಮರಕ್ಷಣೆಗಾಗಿ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಎನ್ನಲಾಗಿದೆ.

 ಗಾಯಾಳು ಆರೋಪಿಯನ್ನು ಬಾಶೆಟ್ಟಿಹಳ್ಳಿಯ ಆಸ್ಪತ್ರೆಗೆ ದಾಖಲಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಪಿ.ರವಿ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

 ಬಾಶೆಟ್ಟಿಹಳ್ಳಿಯ ನವೋದಯ ಶಾಲೆ ಸಮೀಪ‌ ಮೇ 11 ರಂದು ಹುಸ್ಕೂರು ನಿವಾಸಿ ಹೇಮಂತ್ ಗೌಡ ಎಂಬಾತನನ್ನು ಮೇಡಹಳ್ಳಿಯ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆ ಹಾಗೂ ಆತನ ಸಹಚರರು ಭೀಕರವಾಗಿ ಹತ್ಯೆ ಮಾಡಿದ್ದರು. ಹೇಮಂತ್ ಗೌಡನನ್ನು ಹತ್ಯೆ ಮಾಡಿ ವಾಹನವೊಂದರಲ್ಲಿ ಶವದ ಜೊತೆ ಆರೋಪಿಗಳು ರೌಂಡ್ಸ್ ಹಾಕಿದ್ದರು.

ಮೇ. 11ರಂದು ಹೇಮಂತ್ ಗೌಡ ಎಂಬ ಯುವಕನನ್ನು ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆ ಮತ್ತು ಆತನ ಸಹಚರರು ಕೊಲೆ ಮಾಡಿದ್ದಾರೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ದೂರಿನ ಮೇರೆಗೆ ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ಅವರು ಈ ಕೊಲೆ ಪ್ರಕರಣದ ತನಿಖೆಯನ್ನು ಕೈಗೊಂಡು, ಕೊಲೆ ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆನನ್ನ ಇತ್ತೀಚೆಗೆ ಬಂಧಿಸಿದ್ದರು. ಇಂದು ಬೆಳಗ್ಗೆ ಸುಮಾರು 6:45 ರ ಸಮಯದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಶ್ರೀನಿವಾಸ್ ರಾಜಾನುಕುಂಟೆಯ ಶ್ರೀರಾಮನಹಳ್ಳಿ ಗೇಟ್ ಬಳಿ ಇರುವುದನ್ನು ಮಾಹಿತಿ ಪಡೆದ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದ ತಂಡ ಕೂಡಲೇ ಆತನನ್ನು ಬಂಧನ ಮಾಡಲು ಹೋಗಿದ್ದಾರೆ. ಆತ ಶ್ರೀರಾಮನಹಳ್ಳಿ ಗೇಟ್ ಬಳಿ ನಡೆದುಕೊಂಡು ಹೋಗುತ್ತಿದ್ದನು, ಆಗ ಪೊಲೀಸರು ಆತನನ್ನು ಬಂಧಿಸಲು ಹೋದಾಗ ಆರೋಪಿ ಕಲ್ಲು ತೆಗೆದುಕೊಂಡು ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಲ್ಲದೇ, ಹೆಡ್ ಕಾನ್ಸ್ ಸ್ಟೇಬಲ್ ಚಂದ್ರಶೇಖರ್ ಎಂಬುವವರಿಗೆ ಚಾಕುವಿನಿಂದ ಕೈಗೆ ಗಾಯಗೊಳಿಸಿ ಕೊಲೆ ಮಾಡಲು ಮುಂದಾಗುತ್ತಾನೆ, ಆಗ ಇನ್ಸ್ ಪೆಕ್ಟರ್ ಸಾದಿಕ್ ಪಾಷ ಅವರು ಏರ್ ಫೈರ್ ಮಾಡಿ ಆರೋಪಿಗೆ ಎಚ್ಚರಿಕೆ ನೀಡಿದರೂ ಸಹ ಪೊಲೀಸ್ ಸಿಬ್ಬಂದಿ ಮೇಲೆ ಅಟ್ಯಾಕ್ ಮಾಡಲು ಮುಂದಾಗುತ್ತಾನೆ. ಆಗ ಕಾಲಿಗೆ ಗುಂಡು ಹಾರಿಸಿ ಬಂಧನ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ‌ ಬಾಲದಂಡಿ ಅವರು ಮಾಹಿತಿ ನೀಡಿದ್ದಾರೆ.

ಆರೋಪಿ ಶ್ರೀನಿವಾಸ್ ಹಾಗೂ ಗಾಯಗೊಂಡ ಹೆಡ್ ಕಾನ್ಸ್ ಸ್ಟೇಬಲ್ ಚಂದ್ರಶೇಖರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ಶ್ರೀನಿವಾಸ್ ಎ2 ಆರೋಪಿಯಾಗಿದ್ದಾನೆ. ಈತನ ಮೇಲೆ ರೌಡಿಶೀಟರ್ ಸಹ ಇದೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

8 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

9 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago