ಹೇಮಂತ್ ಗೌಡ ಕೊಲೆ ಪ್ರಕರಣದ ಎ2 ಆರೋಪಿಯಾದ ರೌಡಿಶೀಟರ್ ಶ್ರೀನಿವಾಸ್ ಎಂಬಾತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ ರಾಜಾನುಕುಂಟೆ ಸಮೀಪದ ಶ್ರೀರಾಮನಹಳ್ಳಿಯಲ್ಲಿ ಶುಕ್ರವಾರ ಬೆಳಿಗ್ಗೆ 6:45ರ ಸಮಯದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಖಚಿತ ಮಾಹಿತಿ ಮೆರೆಗೆ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾದ ಶ್ರೀನಿವಾಸ್ ಬಂಧನಕ್ಕೆ ತೆರಳಿದ ವೇಳೆ ಪೊಲೀಸರ ಮೇಲೆ ಆರೋಪಿ ಹಲ್ಲೆ ಯತ್ನ ಮಾಡಿದಾಗ ಆತ್ಮರಕ್ಷಣೆಗಾಗಿ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಎನ್ನಲಾಗಿದೆ.
ಗಾಯಾಳು ಆರೋಪಿಯನ್ನು ಬಾಶೆಟ್ಟಿಹಳ್ಳಿಯ ಆಸ್ಪತ್ರೆಗೆ ದಾಖಲಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಪಿ.ರವಿ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾಶೆಟ್ಟಿಹಳ್ಳಿಯ ನವೋದಯ ಶಾಲೆ ಸಮೀಪ ಮೇ 11 ರಂದು ಹುಸ್ಕೂರು ನಿವಾಸಿ ಹೇಮಂತ್ ಗೌಡ ಎಂಬಾತನನ್ನು ಮೇಡಹಳ್ಳಿಯ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆ ಹಾಗೂ ಆತನ ಸಹಚರರು ಭೀಕರವಾಗಿ ಹತ್ಯೆ ಮಾಡಿದ್ದರು. ಹೇಮಂತ್ ಗೌಡನನ್ನು ಹತ್ಯೆ ಮಾಡಿ ವಾಹನವೊಂದರಲ್ಲಿ ಶವದ ಜೊತೆ ಆರೋಪಿಗಳು ರೌಂಡ್ಸ್ ಹಾಕಿದ್ದರು.
ಮೇ. 11ರಂದು ಹೇಮಂತ್ ಗೌಡ ಎಂಬ ಯುವಕನನ್ನು ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆ ಮತ್ತು ಆತನ ಸಹಚರರು ಕೊಲೆ ಮಾಡಿದ್ದಾರೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ದೂರಿನ ಮೇರೆಗೆ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ಅವರು ಈ ಕೊಲೆ ಪ್ರಕರಣದ ತನಿಖೆಯನ್ನು ಕೈಗೊಂಡು, ಕೊಲೆ ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆನನ್ನ ಇತ್ತೀಚೆಗೆ ಬಂಧಿಸಿದ್ದರು. ಇಂದು ಬೆಳಗ್ಗೆ ಸುಮಾರು 6:45 ರ ಸಮಯದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಶ್ರೀನಿವಾಸ್ ರಾಜಾನುಕುಂಟೆಯ ಶ್ರೀರಾಮನಹಳ್ಳಿ ಗೇಟ್ ಬಳಿ ಇರುವುದನ್ನು ಮಾಹಿತಿ ಪಡೆದ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದ ತಂಡ ಕೂಡಲೇ ಆತನನ್ನು ಬಂಧನ ಮಾಡಲು ಹೋಗಿದ್ದಾರೆ. ಆತ ಶ್ರೀರಾಮನಹಳ್ಳಿ ಗೇಟ್ ಬಳಿ ನಡೆದುಕೊಂಡು ಹೋಗುತ್ತಿದ್ದನು, ಆಗ ಪೊಲೀಸರು ಆತನನ್ನು ಬಂಧಿಸಲು ಹೋದಾಗ ಆರೋಪಿ ಕಲ್ಲು ತೆಗೆದುಕೊಂಡು ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಲ್ಲದೇ, ಹೆಡ್ ಕಾನ್ಸ್ ಸ್ಟೇಬಲ್ ಚಂದ್ರಶೇಖರ್ ಎಂಬುವವರಿಗೆ ಚಾಕುವಿನಿಂದ ಕೈಗೆ ಗಾಯಗೊಳಿಸಿ ಕೊಲೆ ಮಾಡಲು ಮುಂದಾಗುತ್ತಾನೆ, ಆಗ ಇನ್ಸ್ ಪೆಕ್ಟರ್ ಸಾದಿಕ್ ಪಾಷ ಅವರು ಏರ್ ಫೈರ್ ಮಾಡಿ ಆರೋಪಿಗೆ ಎಚ್ಚರಿಕೆ ನೀಡಿದರೂ ಸಹ ಪೊಲೀಸ್ ಸಿಬ್ಬಂದಿ ಮೇಲೆ ಅಟ್ಯಾಕ್ ಮಾಡಲು ಮುಂದಾಗುತ್ತಾನೆ. ಆಗ ಕಾಲಿಗೆ ಗುಂಡು ಹಾರಿಸಿ ಬಂಧನ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾಹಿತಿ ನೀಡಿದ್ದಾರೆ.
ಆರೋಪಿ ಶ್ರೀನಿವಾಸ್ ಹಾಗೂ ಗಾಯಗೊಂಡ ಹೆಡ್ ಕಾನ್ಸ್ ಸ್ಟೇಬಲ್ ಚಂದ್ರಶೇಖರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ಶ್ರೀನಿವಾಸ್ ಎ2 ಆರೋಪಿಯಾಗಿದ್ದಾನೆ. ಈತನ ಮೇಲೆ ರೌಡಿಶೀಟರ್ ಸಹ ಇದೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…