ಹೇಮಂತ್ ಗೌಡ ಕೊಲೆ ಪ್ರಕರಣ: ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಂಧನ

ಹೇಮಂತ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆ ಮತ್ತು ಮತ್ತೊಬ್ಬ ಆರೋಪಿಯನ್ನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳ ಪತ್ತೆಗಾಗಿ 10 ತಂಡಗಳನ್ನ ಪೊಲೀಸರು ನಿಯೋಜನೆ ಮಾಡಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೇ 10 ರಂದು ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಿಹಳ್ಳಿಯ ಜೆಪಿ ಪ್ಯಾಲೇಸ್ ಬಳಿ ಯುವಕನ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದ್ದು, ಮುಂಜಾನೆ ವೇಳೆ ನವೋದಯ ಶಾಲೆ ಬಳಿ ಹಲ್ಲೆಗೊಳಗಾಗಿದ್ದ ಹೇಮಂತ್ ಗೌಡನ ಶವ ಪತ್ತೆಯಾಗಿತ್ತು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ತಂದೆ ಶಶಿಕುಮಾರ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಮೇಡಹಳ್ಳಿಯ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆ ಮತ್ತು ಆತನ ಜೊತೆಯಲ್ಲಿದ್ದ 9 ಜನರ ತಂಡ ತನ್ನ ಮಗನನ್ನು ಕೊಲೆ ಮಾಡಿದ್ದಾರೆಂದು ದೂರಿನಲ್ಲಿ ದಾಖಲಿಸಿದ್ದರು.

ಘಟನೆ ನಂತರ ಆರೋಪಿಗಳು ಪರಾರಿಯಾಗಿದ್ದರು, ಆರೋಪಿಗಳ ಪತ್ತೆಗಾಗಿ 10 ಪೊಲೀಸ್ ತಂಡಗಳ ರಚನೆ ಮಾಡಲಾಗಿದ್ದು, ಇಂದು ಕೋರ್ಟ್ ನಲ್ಲಿ ಶರಣಾಗುವುದಕ್ಕೆ ಆರೋಪಿಗಳು ಬರುತ್ತಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದು, ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಆರೋಪಿಗಳಾದ ನರಸಿಂಹಮೂರ್ತಿ ಮತ್ತು ಮತ್ತೊಬ್ಬನನ್ನು ಬಂಧಿಸಿರುವುದಾಗಿ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಲ್ಲಿಕಾರ್ಜುನ ಬಾಲದಂಡಿಯವರು ತಿಳಿಸಿದ್ದಾರೆ.

‘ಎನ್ ಕೌಂಟರ್ ನಡೆದಿಲ್ಲ’, ‘ಸತ್ಯಕ್ಕೆ ದೂರವಾದ ಸುದ್ದಿ’

ಅದೇರೀತಿ, ಬಾಶೆಟ್ಟಿಹಳ್ಳಿಯ ನವೋದಯ ಶಾಲೆ ಸಮೀಪ ನಡೆದಿದ್ದ ಯುವಕನ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಇಂದು ಮಧ್ಯಾಹ್ನ ಎನ್ ಕೌಂಟರ್ ಮಾಡಲಾಗಿದೆ ಎಂಬ ಸುದ್ದಿಯನ್ನು ಪೊಲೀಸರು ತಳ್ಳಿಹಾಕಿದ್ದಾರೆ.

ಪ್ರಕರಣದ ಎ1 ಆರೋಪಿ ನರಸಿಂಹಮೂರ್ತಿ ಅಲಿಯಾಸ್‌ ಮಿಟ್ಟೆ ಎಂಬಾತನನ್ನು ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ. ಆಗ ಪೊಲೀಸರು ಆತ್ಮರಕ್ಷಣೆಗಾಗಿ ಎನ್ ಕೌಂಟರ್ ಮಾಡಿದ್ದಾರೆ ಎಂಬುದು ಮೂಲಗಳಿಂದ ತಿಳಿದು ಬಂದಿತ್ತು.

ಎನ್ ಕೌಂಟರ್ ಸುದ್ದಿ ಎಲ್ಲೆಡೆ ಕಾಳ್ಗಿಚ್ಚಿನಂತೆ ಹಬ್ಬಿತು.‌ ಈ ಕುರಿತ ಸುದ್ದಿಗೆ ಸ್ಪಷ್ಟೀಕರಣ ನೀಡಿದ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ಅವರು, ಎನ್ ಕೌಂಟರ್ ಎಂಬುದು ಸತ್ಯಕ್ಕೆ ದೂರವಾದ ಸುದ್ದಿ.‌ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

7 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

8 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

15 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

15 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

21 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago